<p><strong>ಮುದ್ದೇಬಿಹಾಳ:</strong> ‘ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಲೊಟಗೇರಿಯ ಗುರುಮೂರ್ತಿ ಕಣಕಾಲಮಠ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಎಸ್.ಎಸ್.ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪಾಲಕರು ಮಕ್ಕಳ ಚಟುವಟಿಕೆ ಬಗ್ಗೆ ಸದಾ ಆಲೋಚನೆ, ಅವಲೋಕನ ಮಾಡುತ್ತಿರಬೇಕು’ ಎಂದರು.</p>.<p>ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರಿ ಮಾತನಾಡಿ, ‘ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಭವಿಷ್ಯದ ಪರೀಕ್ಷೆಗಳಿಗೆ ದಾರಿದೀಪವಾಗುತ್ತವೆ’ ಎಂದರು.</p>.<p>ಆಲೂರಿನ ವೇ.ಸಂಗಯ್ಯ ಹಿರೇಮಠ, ದುರ್ಗಾಪರಮೇಶ್ವರಿ ಆಶ್ರಮದ ಲಾಲಲಿಂಗೇಶ್ವರ ಶರಣರು, ಮಾವಿನಬಾವಿಯ ಶರಣ ಬಸವರಾಜ ಹೆಳವರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ವಿವಿಧ ಶಾಲೆಗಳ ಶಿಕ್ಷಕರು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. </p>.<p>ಎಸ್.ಎಸ್.ಶಿವಾಚಾರ್ಯ ಕಾಲೇಜಿನ ಆಡಳಿತಾಧಿಕಾರಿ ರವಿ ನಾಯಕ, ಪಶು ಆಸ್ಪತ್ರೆಯ ವೈದ್ಯ ಡಾ.ಸುರೇಶ ಭಜಂತ್ರಿ, ಕೋಚಿಂಗ್ ಕ್ಲಾಸಸ್ನ ಅಧ್ಯಕ್ಷ ವೀರೇಶ ಹವಾಲ್ದಾರ, ಸಂಚಾಲಕಿ ವಿಜಯಲಕ್ಷ್ಮಿ ಹವಾಲ್ದಾರ, ವೀರೇಶ ಗುರುಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ‘ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಲೊಟಗೇರಿಯ ಗುರುಮೂರ್ತಿ ಕಣಕಾಲಮಠ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಎಸ್.ಎಸ್.ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪಾಲಕರು ಮಕ್ಕಳ ಚಟುವಟಿಕೆ ಬಗ್ಗೆ ಸದಾ ಆಲೋಚನೆ, ಅವಲೋಕನ ಮಾಡುತ್ತಿರಬೇಕು’ ಎಂದರು.</p>.<p>ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರಿ ಮಾತನಾಡಿ, ‘ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಭವಿಷ್ಯದ ಪರೀಕ್ಷೆಗಳಿಗೆ ದಾರಿದೀಪವಾಗುತ್ತವೆ’ ಎಂದರು.</p>.<p>ಆಲೂರಿನ ವೇ.ಸಂಗಯ್ಯ ಹಿರೇಮಠ, ದುರ್ಗಾಪರಮೇಶ್ವರಿ ಆಶ್ರಮದ ಲಾಲಲಿಂಗೇಶ್ವರ ಶರಣರು, ಮಾವಿನಬಾವಿಯ ಶರಣ ಬಸವರಾಜ ಹೆಳವರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ವಿವಿಧ ಶಾಲೆಗಳ ಶಿಕ್ಷಕರು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. </p>.<p>ಎಸ್.ಎಸ್.ಶಿವಾಚಾರ್ಯ ಕಾಲೇಜಿನ ಆಡಳಿತಾಧಿಕಾರಿ ರವಿ ನಾಯಕ, ಪಶು ಆಸ್ಪತ್ರೆಯ ವೈದ್ಯ ಡಾ.ಸುರೇಶ ಭಜಂತ್ರಿ, ಕೋಚಿಂಗ್ ಕ್ಲಾಸಸ್ನ ಅಧ್ಯಕ್ಷ ವೀರೇಶ ಹವಾಲ್ದಾರ, ಸಂಚಾಲಕಿ ವಿಜಯಲಕ್ಷ್ಮಿ ಹವಾಲ್ದಾರ, ವೀರೇಶ ಗುರುಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>