ವಿಜಯಪುರ: ಜಿಲ್ಲೆಯಲ್ಲಿರುವ ಒಂದರಿಂದ 19 ವರ್ಷದ ಎಲ್ಲ ಮಕ್ಕಳಿಗೆ ತಪ್ಪದೇ ನಿರ್ದಿಷ್ಟ ಪ್ರಮಾಣದ ಜಂತುಹುಳು ನಿವಾರಣೆ ಮಾತ್ರೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಂತುಹುಳು ನಿವಾರಣಿ ಮಾತ್ರೆಯು ಮಕ್ಕಳು ಹಾಗೂ ವಯಸ್ಕರಿಗೆ ಸುರಕ್ಷಿತ ಔಷಧಿಯಾಗಿದೆ ಎಂದರು.
ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಕುಮಾರ್ ಯರಗಲ್, ಆರ್. ಸಿ. ಎಚ್. ಅಧಿಕಾರಿ ಡಾ.ಮಹೇಶ ನಾಗರಬೆಟ್ಟ, ಡಾ. ಐ .ಎನ್.ಧಾರವಾಡಕರ್, ಡಾ.ತಾಳಿಕೋಟಿ, ಡಾ. ಇಂಗಳೇ, ಸುರೇಶ್ ಹೊಸಮನಿ, ಜಿ.ಎಂ.ಕೋಲೂರ್, ಆರ್.ಎನ್. ಹಂಚಿನಾಳ, ಸಾವಿತ್ರಿ ಹಿಪ್ಪರಗಿ ಉಪಸ್ಥಿತರಿದ್ದರು.