‘ಚಿತ್ರದುರ್ಗ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಎಡಗೈ ಸಮುದಾಯದವರಿಗೆ ಮನ್ನಣೆ ನೀಡಲಾಗಿದೆ. ಕಲಬುರ್ಗಿ, ಚಾಮರಾಜನಗರದಲ್ಲಿ ಬಲಗೈ ಸಮುದಾಯಕ್ಕೆ ಅವಕಾಶ ಸಿಕ್ಕಿದೆ. ಉಳಿದಿರುವ ಏಕೈಕ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಂಜಾರ ಸಮುದಾಯಕ್ಕೆ ಈ ಬಾರಿಯೂ ಸ್ಪರ್ಧಿಸಲು ಅವಕಾಶ ಕೊಡಬೇಕು’ ಎಂದು ಐನಾಪುರ ಕಾಂಗ್ರೆಸ್ ಮುಖಂಡರಿಗೆ ಮನವಿ ಮಾಡಿದರು.