<p>ವಿಜಯಪುರ: ‘ಪ್ರಧಾನಿ ನರೇಂದ್ರ ಮೋದಿ ಉತ್ತಮ ಆಡಳಿತ ನೀಡಿದ್ದಾರೆ’ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.</p>.<p>‘ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿಯನ್ನು ಬಲಾಢ್ಯಗೊಳಿಸಿದ್ದಾರೆ’ ಎಂದು ನಗರದಲ್ಲಿ ಗುರುವಾರ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಮುಂದಿನ ಬಾರಿ ಮತ್ತೊಮ್ಮೆ ಮೋದಿ ಆಡಳಿತ ದೇಶದಲ್ಲಿ ಅಸ್ತಿತ್ವಕ್ಕೆ ಬರುತ್ತದೆಯೋ ? ಇಲ್ಲವೋ ಎಂಬ ರಾಜಕಾರಣದ ಮಾತುಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ’ ಎಂದು ಇದೇ ಸಂದರ್ಭ ಹೇಳಿದರು.</p>.<p>‘ಈಚೆಗೆ ರಾಜಕಾರಣದ ಬಗ್ಗೆ ತುಂಬಾ ಬೇಸರವಾಗಿದೆ. ಜನರಲ್ಲೂ ಈ ಭಾವನೆ ಹೆಚ್ಚುತ್ತಿದೆ. ಇದನ್ನು ತಪ್ಪಿಸಲು ಸರ್ವಪಕ್ಷೀಯ ಸರ್ಕಾರ ಅಸ್ತಿತ್ವಕ್ಕೆ ಬರುವುದೊಂದೇ ಪರ್ಯಾಯವಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ಪ್ರಧಾನಿ ನರೇಂದ್ರ ಮೋದಿ ಉತ್ತಮ ಆಡಳಿತ ನೀಡಿದ್ದಾರೆ’ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.</p>.<p>‘ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿಯನ್ನು ಬಲಾಢ್ಯಗೊಳಿಸಿದ್ದಾರೆ’ ಎಂದು ನಗರದಲ್ಲಿ ಗುರುವಾರ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಮುಂದಿನ ಬಾರಿ ಮತ್ತೊಮ್ಮೆ ಮೋದಿ ಆಡಳಿತ ದೇಶದಲ್ಲಿ ಅಸ್ತಿತ್ವಕ್ಕೆ ಬರುತ್ತದೆಯೋ ? ಇಲ್ಲವೋ ಎಂಬ ರಾಜಕಾರಣದ ಮಾತುಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ’ ಎಂದು ಇದೇ ಸಂದರ್ಭ ಹೇಳಿದರು.</p>.<p>‘ಈಚೆಗೆ ರಾಜಕಾರಣದ ಬಗ್ಗೆ ತುಂಬಾ ಬೇಸರವಾಗಿದೆ. ಜನರಲ್ಲೂ ಈ ಭಾವನೆ ಹೆಚ್ಚುತ್ತಿದೆ. ಇದನ್ನು ತಪ್ಪಿಸಲು ಸರ್ವಪಕ್ಷೀಯ ಸರ್ಕಾರ ಅಸ್ತಿತ್ವಕ್ಕೆ ಬರುವುದೊಂದೇ ಪರ್ಯಾಯವಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>