<p><strong>ವಿಜಯಪುರ:</strong> ಕೊರೊನಾ ಲಾಕ್ಡೌನ್ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ದೊರೆತಿದೆ. ಶನಿವಾರ ಸಂಜೆ 7ರಿಂದ ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ವರೆಗಿನ ಸಂಪೂರ್ಣ ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆ ಸಂಪೂರ್ಣ ಸ್ತಬ್ಧ ಆಗಿದೆ.</p>.<p>ಬಸ್, ಅಟೊ ಸೇರಿದಂತೆ ಬಹುತೇಕ ವಾಹನಗಳ ಸಂಚಾರ ಸ್ಥಗಿತಗೊಂಡಿವೆ. ಅಂಗಡಿ, ಬೇಕರಿ, ಸ್ವೀಟ್ ಹೌಸ್ ಹೋಟೆಲ್ಗಳೂ ಬಂದ್ ಆಗಿವೆ. ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೋಳಿ, ಕುರಿ ಮಾಂಸ ಮತ್ತು ಮೀನು ಮಾರಾಟ ನಡೆದಿದೆ. ಸೋಮವಾರ ಈದ್ ಉಲ್ ಫಿತರ್ ಇರುವುದರಿಂದ ಕುರಿ, ಕೋಳಿ ಮಾಂಸ ಮಾರಾಟದ ಅಂಗಡಿಗಳ ಎದುರು ಹೆಚ್ಚಿನ ಜನರು ಕಂಡುಬಂದರು.</p>.<p>ಪೊಲೀಸರು ನಗರದ ಅಲ್ಲಲ್ಲಿ ಚೆಕ್ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವವರನ್ನು ತಡೆದು, ಮರಳಿ ಕಳುಹಿಸಿದರು. ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಮತ್ತು ವಿಜಯಪುರ-ಹುಬ್ಬಳ್ಳಿ ಹೆದ್ದಾರಿಯಲ್ಲೂ ವಾಹನಗಳ ಸಂಚಾರ ವಿರಳವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೊರೊನಾ ಲಾಕ್ಡೌನ್ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ದೊರೆತಿದೆ. ಶನಿವಾರ ಸಂಜೆ 7ರಿಂದ ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ವರೆಗಿನ ಸಂಪೂರ್ಣ ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆ ಸಂಪೂರ್ಣ ಸ್ತಬ್ಧ ಆಗಿದೆ.</p>.<p>ಬಸ್, ಅಟೊ ಸೇರಿದಂತೆ ಬಹುತೇಕ ವಾಹನಗಳ ಸಂಚಾರ ಸ್ಥಗಿತಗೊಂಡಿವೆ. ಅಂಗಡಿ, ಬೇಕರಿ, ಸ್ವೀಟ್ ಹೌಸ್ ಹೋಟೆಲ್ಗಳೂ ಬಂದ್ ಆಗಿವೆ. ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೋಳಿ, ಕುರಿ ಮಾಂಸ ಮತ್ತು ಮೀನು ಮಾರಾಟ ನಡೆದಿದೆ. ಸೋಮವಾರ ಈದ್ ಉಲ್ ಫಿತರ್ ಇರುವುದರಿಂದ ಕುರಿ, ಕೋಳಿ ಮಾಂಸ ಮಾರಾಟದ ಅಂಗಡಿಗಳ ಎದುರು ಹೆಚ್ಚಿನ ಜನರು ಕಂಡುಬಂದರು.</p>.<p>ಪೊಲೀಸರು ನಗರದ ಅಲ್ಲಲ್ಲಿ ಚೆಕ್ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವವರನ್ನು ತಡೆದು, ಮರಳಿ ಕಳುಹಿಸಿದರು. ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಮತ್ತು ವಿಜಯಪುರ-ಹುಬ್ಬಳ್ಳಿ ಹೆದ್ದಾರಿಯಲ್ಲೂ ವಾಹನಗಳ ಸಂಚಾರ ವಿರಳವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>