ವಿಶ್ವವಿಖ್ಯಾತ ಗೋಳಗುಮ್ಮಟ, ಬಾರಾಕಮಾನ್ ವೀಕ್ಷಿಸಿದ ರಾಜ್ಯಪಾಲ ಗೆಹಲೋತ್

ವಿಜಯಪುರ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ವಿಜಯಪುರದ ವಿಶ್ವವಿಖ್ಯಾತ, ಐತಿಹಾಸಿಕ ಪ್ರವಾಸಿತಾಣಗಳಾದ ಗೋಳ ಗುಮ್ಮಟ, ಮ್ಯೂಸಿಯಂ, ಬಾರಕಮಾನ್ ಗೆ ಸೋಮವಾರ ಸಂಜೆ ಭೇಟಿ ನೀಡಿ, ವೀಕ್ಷಿಸಿದರು.
ಆದಿಲ್ ಶಾಹಿ ಅರಸ ಕಾಲದ ಕಣ್ಮನ ಸೆಳೆಯುವ ಸ್ಮಾರಕಗಳ ವಿಶೇಷತೆಯ ಬಗ್ಗೆ ಮಾಹಿತಿ ಪಡೆದರು.
ಪ್ರವಾಸಿ ಮಾರ್ಗದರ್ಶಿ ರಾಜಶೇಖರ್ ಅವರು ಸ್ಮಾರಕಗಳ ಬಗ್ಗೆ ರಾಜ್ಯಪಾಲರಿಗೆ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರದ ಜಿಲ್ಲಾಧಿಕಾರಿ ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್. ಡಿ. ಆನಂದ್ ಕುಮಾರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.