<p><strong>ವಿಜಯಪುರ: </strong>ನಾಗಠಾಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಡೆವೊಡ್ಡಿದ್ದಾರೆ. ಸ್ಥಳೀಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಶಾಸಕ ದೇವಾನಂದ ಚವ್ಹಾಣ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ, ಕುಡಿಯುವ ನೀರು ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ ಎಂದು ದೂರಿದರು.</p>.<p>ಭೀಮಾ, ಡೋಣಿ ನದಿಗಳ ಪ್ರವಾಹದಿಂದ ತಾಲ್ಲೂಕಿನ 19 ಗ್ರಾಮಗಳ ಜನರು ಸಂತ್ರಸ್ತರಾಗಿದ್ದಾರೆ. ಬೆಳೆಹಾನಿಯಿಂದ ಕೃಷಿಕರು ತತ್ತರಿಸಿ ಹೋಗಿದ್ದರೂ ರಾಜ್ಯ ಸರ್ಕಾರ ಅತಿವೃಷ್ಟಿ ಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಂತೆಕಾರಜೋಳ ತಡೆಹಿಡಿದಿದ್ದಾರೆ ಎಂದು ಆರೋಪಿಸಿದರು.</p>.<p>ನಾಗಠಾಣ–ಇಂಚಿಗೇರಿ ರಸ್ತೆ, ದೇವರ ನಿಂಬರಗಿ–ಚಡಚಣ ರಸ್ತೆ ಕಾಮಗಾರಿ ಟೆಂಡರ್ ಆಗಿದ್ದರೂ ತಡೆಹಿಡಿದ್ದಿದ್ದಾರೆ ಎಂದು ದೂರಿದರು.</p>.<p>ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದರೂ ಲೋಕೋಪಯೋಗಿ ಇಲಾಖೆಯಿಂದ ದುರಸ್ತಿಗೆ ನಯಾ ಪೈಸೆ ಅನುದಾನ ನೀಡಿಲ್ಲ. ಇಲಾಖೆಯಿಂದ ಬಜೆಟ್ನಲ್ಲಿ ನಿಗದಿಯಾಗಿರುವ ಅನುದಾನವನ್ನೂ ನೀಡಿಲ್ಲ ಎಂದು ದೂರಿದರು.</p>.<p>‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರು ನನ್ನ ವಿರುದ್ಧ ಸೋತಿರುವುದರಿಂದ ನನ್ನ ಮತ್ತು ಕ್ಷೇತ್ರದ ಜನತೆ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆಪಾದಿಸಿದರು.</p>.<p>ಪ್ರವಾಹಪೀಡಿತ ನಾಗಠಾಣ ಕ್ಷೇತ್ರವನ್ನು ಅತಿವೃಷ್ಟಿ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಬೇಕು, ಯಾವುದೇ ತಾರತಮ್ಯ ಮಾಡದೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ನಾಗಠಾಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೀಡಿದ್ದ ಅನುದಾನವನ್ನು ಪ್ರಸ್ತುತ ಬಿಜೆಪಿ ಸರ್ಕಾರ ತಡೆಹಿಡಿದಿದೆ ಎಂದು ಆರೋಪಿದರು.</p>.<p>‘ಕ್ಷೇತ್ರದಲ್ಲಿ ಸುಮ್ಮನೆ ಕೂರು ನಾವೇ ಅಭಿವೃದ್ಧಿ ಮಾಡುತ್ತೇವೆ ಎಂದರೆ ಕೂರಲು ಸಿದ್ಧವಾಗಿದ್ದೇನೆ. ಆದರೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತಡೆಯೊಡ್ಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.</p>.<p>ಉಪಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಕ್ಷೇತ್ರಕ್ಕೆ ಬಂದಿರುವ ಅಧಿಕಾರಿಗಳು ಹಗಲು ದರೋಡೆಯಲ್ಲಿ ತೊಡಗಿದ್ದಾರೆ. ಯಾರೊಬ್ಬರೂ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ನಾಗಠಾಣ ಮತ ಕ್ಷೇತ್ರದ ರಸ್ತೆಗಳಲ್ಲಿ ಕೇವಲ ಜೆಡಿಎಸ್ ಕಾರ್ಯಕರ್ತರು ಮಾತ್ರ ಸಂಚರಿಸುವುದಿಲ್ಲ. ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು, ಮತದಾರರು ಇದ್ದಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.</p>.<p>ನಾಗಠಾಣ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷ ಸದಾಶಿವ ಜಿತ್ತಿ ಮಾತನಾಡಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನಮ್ಮ ಜಿಲ್ಲೆಯವರೇ ಆಗಿರುವುದರಿಂದ ಹಾಗೂ ಸ್ವತಃ ಲೋಕೋಪಯೋಗಿ ಸಚಿವರಾಗಿರುವುದರಿಂದ ಜಿಲ್ಲೆಯ ಎಲ್ಲ ರಸ್ತೆಗಳ ಸಂಪೂರ್ಣ ಅಭಿವೃದ್ಧಿ ಆಗಬೇಕಿತ್ತು. ಆದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಆರೋಪಿಸಿದರು.</p>.<p class="Briefhead">ಪ್ರಭಾವಿಗಳಿಂದ ಅಕ್ರಮ ಮರಳು ದಂಧೆ</p>.<p>ವಿಜಯಪುರ: ಅಕ್ರಮ ಮರಳು ದಂಧೆಯಲ್ಲಿ ಜಿಲ್ಲೆಯ ಮತ್ತು ರಾಜ್ಯದ ಪ್ರಭಾವಿ ರಾಜಕಾರಣಿಗಳು ತೊಡಗಿಕೊಂಡಿದ್ದಾರೆ ಎಂದು ಶಾಸಕ ದೇವಾನಂದ ಚವ್ಹಾಣ ಆರೋಪಿಸಿದರು.</p>.<p>‘ಅಕ್ರಮ ಮರಳು ಮಾಫಿಯಾ ಲಾರಿಗಳನ್ನು ಸ್ವತಃ ನಾನೇ ಹಿಡಿದುಕೊಟ್ಟರೂ ಕೇಸ್ ದಾಖಲಿಸಿ, ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.</p>.<p>ಭೀಮಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಮೇಲೆ ಇಂಡಿ ಉಪವಿಭಾಗಾಧಿಕಾರಿ ದಾಳಿ ಮಾಡಿದಾಗ ಕೇಸು ದಾಖಲಿಸದಂತೆಅವರಿಗೆ ಯಾರೆಲ್ಲ ಫೋನ್ ಮಾಡಿ ಪ್ರಭಾವ ಬೀರಿದ್ದಾರೆ ಎಂಬುದು ತಿಳಿದಿದೆ ಎಂದರು.</p>.<p>ನೂರಾರು ಲೋಡ್ ಅಕ್ರಮ ಮರಳು ಸಂಗ್ರಹವಾಗಿದ್ದರೂ ಅದನ್ನು ಮನೆ ಕಟ್ಟಲು ಎಂದು ಹೇಳಿ ಪ್ರಕರಣವನ್ನೇ ತಿರುಚಲಾಗಿದೆ ಎಂದು ದೂರಿದರು.</p>.<p>ಜಿಲ್ಲೆಯ ಗಣಿ, ಕಂದಾಯ, ಪೊಲೀಸ್ ಇಲಾಖೆ ವೈಫಲ್ಯದ ಪರಿಣಾಮ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲಾ ಟಾಸ್ಕ್ ಪೋರ್ಸ್ ಲೆಕ್ಕಕ್ಕಿಲ್ಲದಂತಾಗಿದೆ ಎಂದು ಆರೋಪಿಸಿದರು.</p>.<p class="Briefhead"><strong>ನೆರೆ ಸಂತ್ರಸ್ತರಿಗೆ ಆಹಾರ ಕಿಟ್</strong></p>.<p>ವಿಜಯಪುರ: ನಾಗರಾಠ ಮತಕ್ಷೇತ್ರದಲ್ಲಿ ಭೀಮಾ ನದಿ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸುತ್ತಿರುವುದಾಗಿ ಶಾಸಕ ದೇವಾನಂದ ಚವ್ಹಾಣ ಹೇಳಿದರು.</p>.<p>ಕ್ಷೇತ್ರದಲ್ಲಿ ಪ್ರವಾಹ ಸಂತ್ರಸ್ತ ಒಟ್ಟು 434 ಜನರನ್ನು ಗುರುತಿಸಿ, ಅವರಿಗೆ ತಲುಪಿಸುತ್ತಿರುವುದಾಗಿ ತಿಳಿಸಿದರು.</p>.<p>ಆಹಾರ ಕಿಟ್ ಜೊತೆ ಬೆಡ್ಸೀಟ್ ಮತ್ತಿತರರ ವಸ್ತ್ರಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.</p>.<p>***********</p>.<p>ಚಡಚಣವನ್ನು ಅತಿವೃಷ್ಠಿ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಣೆ ಮಾಡಬೇಕು. ಮೂಲಸೌಕರ್ಯ ಕಲ್ಪಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು<br /><strong>-ದೇವಾನಂದ ಚವ್ಹಾಣ<br />ಶಾಸಕ, ನಾಗಠಾಣ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಾಗಠಾಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಡೆವೊಡ್ಡಿದ್ದಾರೆ. ಸ್ಥಳೀಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಶಾಸಕ ದೇವಾನಂದ ಚವ್ಹಾಣ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ, ಕುಡಿಯುವ ನೀರು ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ ಎಂದು ದೂರಿದರು.</p>.<p>ಭೀಮಾ, ಡೋಣಿ ನದಿಗಳ ಪ್ರವಾಹದಿಂದ ತಾಲ್ಲೂಕಿನ 19 ಗ್ರಾಮಗಳ ಜನರು ಸಂತ್ರಸ್ತರಾಗಿದ್ದಾರೆ. ಬೆಳೆಹಾನಿಯಿಂದ ಕೃಷಿಕರು ತತ್ತರಿಸಿ ಹೋಗಿದ್ದರೂ ರಾಜ್ಯ ಸರ್ಕಾರ ಅತಿವೃಷ್ಟಿ ಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಂತೆಕಾರಜೋಳ ತಡೆಹಿಡಿದಿದ್ದಾರೆ ಎಂದು ಆರೋಪಿಸಿದರು.</p>.<p>ನಾಗಠಾಣ–ಇಂಚಿಗೇರಿ ರಸ್ತೆ, ದೇವರ ನಿಂಬರಗಿ–ಚಡಚಣ ರಸ್ತೆ ಕಾಮಗಾರಿ ಟೆಂಡರ್ ಆಗಿದ್ದರೂ ತಡೆಹಿಡಿದ್ದಿದ್ದಾರೆ ಎಂದು ದೂರಿದರು.</p>.<p>ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದರೂ ಲೋಕೋಪಯೋಗಿ ಇಲಾಖೆಯಿಂದ ದುರಸ್ತಿಗೆ ನಯಾ ಪೈಸೆ ಅನುದಾನ ನೀಡಿಲ್ಲ. ಇಲಾಖೆಯಿಂದ ಬಜೆಟ್ನಲ್ಲಿ ನಿಗದಿಯಾಗಿರುವ ಅನುದಾನವನ್ನೂ ನೀಡಿಲ್ಲ ಎಂದು ದೂರಿದರು.</p>.<p>‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರು ನನ್ನ ವಿರುದ್ಧ ಸೋತಿರುವುದರಿಂದ ನನ್ನ ಮತ್ತು ಕ್ಷೇತ್ರದ ಜನತೆ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆಪಾದಿಸಿದರು.</p>.<p>ಪ್ರವಾಹಪೀಡಿತ ನಾಗಠಾಣ ಕ್ಷೇತ್ರವನ್ನು ಅತಿವೃಷ್ಟಿ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಬೇಕು, ಯಾವುದೇ ತಾರತಮ್ಯ ಮಾಡದೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ನಾಗಠಾಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೀಡಿದ್ದ ಅನುದಾನವನ್ನು ಪ್ರಸ್ತುತ ಬಿಜೆಪಿ ಸರ್ಕಾರ ತಡೆಹಿಡಿದಿದೆ ಎಂದು ಆರೋಪಿದರು.</p>.<p>‘ಕ್ಷೇತ್ರದಲ್ಲಿ ಸುಮ್ಮನೆ ಕೂರು ನಾವೇ ಅಭಿವೃದ್ಧಿ ಮಾಡುತ್ತೇವೆ ಎಂದರೆ ಕೂರಲು ಸಿದ್ಧವಾಗಿದ್ದೇನೆ. ಆದರೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತಡೆಯೊಡ್ಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.</p>.<p>ಉಪಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಕ್ಷೇತ್ರಕ್ಕೆ ಬಂದಿರುವ ಅಧಿಕಾರಿಗಳು ಹಗಲು ದರೋಡೆಯಲ್ಲಿ ತೊಡಗಿದ್ದಾರೆ. ಯಾರೊಬ್ಬರೂ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ನಾಗಠಾಣ ಮತ ಕ್ಷೇತ್ರದ ರಸ್ತೆಗಳಲ್ಲಿ ಕೇವಲ ಜೆಡಿಎಸ್ ಕಾರ್ಯಕರ್ತರು ಮಾತ್ರ ಸಂಚರಿಸುವುದಿಲ್ಲ. ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು, ಮತದಾರರು ಇದ್ದಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.</p>.<p>ನಾಗಠಾಣ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷ ಸದಾಶಿವ ಜಿತ್ತಿ ಮಾತನಾಡಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನಮ್ಮ ಜಿಲ್ಲೆಯವರೇ ಆಗಿರುವುದರಿಂದ ಹಾಗೂ ಸ್ವತಃ ಲೋಕೋಪಯೋಗಿ ಸಚಿವರಾಗಿರುವುದರಿಂದ ಜಿಲ್ಲೆಯ ಎಲ್ಲ ರಸ್ತೆಗಳ ಸಂಪೂರ್ಣ ಅಭಿವೃದ್ಧಿ ಆಗಬೇಕಿತ್ತು. ಆದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಆರೋಪಿಸಿದರು.</p>.<p class="Briefhead">ಪ್ರಭಾವಿಗಳಿಂದ ಅಕ್ರಮ ಮರಳು ದಂಧೆ</p>.<p>ವಿಜಯಪುರ: ಅಕ್ರಮ ಮರಳು ದಂಧೆಯಲ್ಲಿ ಜಿಲ್ಲೆಯ ಮತ್ತು ರಾಜ್ಯದ ಪ್ರಭಾವಿ ರಾಜಕಾರಣಿಗಳು ತೊಡಗಿಕೊಂಡಿದ್ದಾರೆ ಎಂದು ಶಾಸಕ ದೇವಾನಂದ ಚವ್ಹಾಣ ಆರೋಪಿಸಿದರು.</p>.<p>‘ಅಕ್ರಮ ಮರಳು ಮಾಫಿಯಾ ಲಾರಿಗಳನ್ನು ಸ್ವತಃ ನಾನೇ ಹಿಡಿದುಕೊಟ್ಟರೂ ಕೇಸ್ ದಾಖಲಿಸಿ, ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.</p>.<p>ಭೀಮಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಮೇಲೆ ಇಂಡಿ ಉಪವಿಭಾಗಾಧಿಕಾರಿ ದಾಳಿ ಮಾಡಿದಾಗ ಕೇಸು ದಾಖಲಿಸದಂತೆಅವರಿಗೆ ಯಾರೆಲ್ಲ ಫೋನ್ ಮಾಡಿ ಪ್ರಭಾವ ಬೀರಿದ್ದಾರೆ ಎಂಬುದು ತಿಳಿದಿದೆ ಎಂದರು.</p>.<p>ನೂರಾರು ಲೋಡ್ ಅಕ್ರಮ ಮರಳು ಸಂಗ್ರಹವಾಗಿದ್ದರೂ ಅದನ್ನು ಮನೆ ಕಟ್ಟಲು ಎಂದು ಹೇಳಿ ಪ್ರಕರಣವನ್ನೇ ತಿರುಚಲಾಗಿದೆ ಎಂದು ದೂರಿದರು.</p>.<p>ಜಿಲ್ಲೆಯ ಗಣಿ, ಕಂದಾಯ, ಪೊಲೀಸ್ ಇಲಾಖೆ ವೈಫಲ್ಯದ ಪರಿಣಾಮ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲಾ ಟಾಸ್ಕ್ ಪೋರ್ಸ್ ಲೆಕ್ಕಕ್ಕಿಲ್ಲದಂತಾಗಿದೆ ಎಂದು ಆರೋಪಿಸಿದರು.</p>.<p class="Briefhead"><strong>ನೆರೆ ಸಂತ್ರಸ್ತರಿಗೆ ಆಹಾರ ಕಿಟ್</strong></p>.<p>ವಿಜಯಪುರ: ನಾಗರಾಠ ಮತಕ್ಷೇತ್ರದಲ್ಲಿ ಭೀಮಾ ನದಿ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸುತ್ತಿರುವುದಾಗಿ ಶಾಸಕ ದೇವಾನಂದ ಚವ್ಹಾಣ ಹೇಳಿದರು.</p>.<p>ಕ್ಷೇತ್ರದಲ್ಲಿ ಪ್ರವಾಹ ಸಂತ್ರಸ್ತ ಒಟ್ಟು 434 ಜನರನ್ನು ಗುರುತಿಸಿ, ಅವರಿಗೆ ತಲುಪಿಸುತ್ತಿರುವುದಾಗಿ ತಿಳಿಸಿದರು.</p>.<p>ಆಹಾರ ಕಿಟ್ ಜೊತೆ ಬೆಡ್ಸೀಟ್ ಮತ್ತಿತರರ ವಸ್ತ್ರಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.</p>.<p>***********</p>.<p>ಚಡಚಣವನ್ನು ಅತಿವೃಷ್ಠಿ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಣೆ ಮಾಡಬೇಕು. ಮೂಲಸೌಕರ್ಯ ಕಲ್ಪಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು<br /><strong>-ದೇವಾನಂದ ಚವ್ಹಾಣ<br />ಶಾಸಕ, ನಾಗಠಾಣ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>