<p><strong>ವಿಜಯಪುರ:</strong> ‘ಸೋಲು ಗೆಲುವು ಜೀವನದ ಅವಿಭಾಜ್ಯ ಅಂಗಗಳು. ಶ್ರದ್ಧೆ ಮತ್ತು ನಿಷ್ಠೆಯಿಂದ ಪ್ರಯತ್ನಿಸಿದಾಗ ಯಶಸ್ಸು ಖಚಿತ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.<br /><br />ನಗರದಲ್ಲಿ ಶುಕ್ರವಾರ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ರೀಡಾ ಆಸಕ್ತಿಯಿಂದ ಭಾಗವಹಿಸಬೇಕು. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ವಿಜೇತರು ಬೀಗದೆ, ಸೋತವರು ಕುಗ್ಗದೆ, ಸೋಲನ್ನು ಸವಾಲಾಗಿ ಸ್ವೀಕರಿಸಬೇಕು’ ಎಂದರು.</p>.<p>‘ಅನೇಕ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿಜೇತರಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಉದ್ಯೋಗದಲ್ಲಿದ್ದಾರೆ. ಇದು ಹೆಮ್ಮೆಯ ವಿಷಯ. ಇಂದು ನೌಕರರ ವರ್ಗದಲ್ಲಿ ಸಾಕಷ್ಟು ಒತ್ತಡಗಳಿವೆ. ಒತ್ತಡಗಳ ಮಧ್ಯೆಯೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಶಾಸಕ ಅರುಣ ಶಹಾಪುರ ಮಾತನಾಡಿ, ‘ತಾಂತ್ರಿಕತೆ ಹಾಗೂ ಸಿಬ್ಬಂದಿ ಕೊರತೆಯಿಂದ ದಿನ ನಿತ್ಯದ ಕೆಲಸ ಕಾರ್ಯಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ಮನೋಬಲ ಹಾಗೂ ನೌಕರರ ಸಂಬಂಧಗಳು ಹೆಚ್ಚುತ್ತವೆ’ ಎಂದು ಹೇಳಿದರು.</p>.<p>ರಾಷ್ಟ್ರ ಯುವ ಪ್ರಶಸ್ತಿ ವಿಜೇತ ಡಾ.ಜಾವಿದ್ ಜಮಾದಾರ ಮಾತನಾಡಿ, ‘ನೌಕರರು ಕ್ರೀಡೆಗೆ ಹೆಚ್ಚು ಒತ್ತು ನೀಡಬೇಕು. ಕ್ರೀಡಾಪಟುಗಳಿಗೆ ಅವಶ್ಯಕ ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು. ಇದರಿಂದ ನೌಕರರು ಕ್ರೀಡೆಗಳ ಕಡೆಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತದೆ’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಶೇಡಾಶ್ಯಾಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಸಲಹಾ ಸಮಿತಿ ಸದಸ್ಯ ಅಡಿವೆಪ್ಪ ಸಾಲಗಲ್ಲ ಮಾತನಾಡಿದರು.</p>.<p>ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ.ನದಾಫ್, ವಕೀಲ ನಾಗರಜ ಪಿ.ಲಂಬು, ಸಂಘದ ಖಜಾಂಚಿ ಜುಬೇರ ಕೆರೂರ, ಶಿವಾನಂದ ಮಂಗಾನವರ, ವಿಜಯಕುಮಾರ ಹತ್ತಿ, ರಾಜಶೇಖರ ದೈವಾಡಿ, ಗಂಗಾಧರ ಜೀವೂರ, ಸುರೇಶ ಅಂಬಿಗೇರ, ಶಿವರಾಜಕುಮಾರ ಬಿರಾದಾರ ಇದ್ದರು.</p>.<p>ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ ಸ್ವಾಗತಿಸಿದರು. ವಿ.ಡಿ.ಬೆಳ್ಳನ್ನವರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಸೋಲು ಗೆಲುವು ಜೀವನದ ಅವಿಭಾಜ್ಯ ಅಂಗಗಳು. ಶ್ರದ್ಧೆ ಮತ್ತು ನಿಷ್ಠೆಯಿಂದ ಪ್ರಯತ್ನಿಸಿದಾಗ ಯಶಸ್ಸು ಖಚಿತ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.<br /><br />ನಗರದಲ್ಲಿ ಶುಕ್ರವಾರ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ರೀಡಾ ಆಸಕ್ತಿಯಿಂದ ಭಾಗವಹಿಸಬೇಕು. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ವಿಜೇತರು ಬೀಗದೆ, ಸೋತವರು ಕುಗ್ಗದೆ, ಸೋಲನ್ನು ಸವಾಲಾಗಿ ಸ್ವೀಕರಿಸಬೇಕು’ ಎಂದರು.</p>.<p>‘ಅನೇಕ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿಜೇತರಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಉದ್ಯೋಗದಲ್ಲಿದ್ದಾರೆ. ಇದು ಹೆಮ್ಮೆಯ ವಿಷಯ. ಇಂದು ನೌಕರರ ವರ್ಗದಲ್ಲಿ ಸಾಕಷ್ಟು ಒತ್ತಡಗಳಿವೆ. ಒತ್ತಡಗಳ ಮಧ್ಯೆಯೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಶಾಸಕ ಅರುಣ ಶಹಾಪುರ ಮಾತನಾಡಿ, ‘ತಾಂತ್ರಿಕತೆ ಹಾಗೂ ಸಿಬ್ಬಂದಿ ಕೊರತೆಯಿಂದ ದಿನ ನಿತ್ಯದ ಕೆಲಸ ಕಾರ್ಯಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ಮನೋಬಲ ಹಾಗೂ ನೌಕರರ ಸಂಬಂಧಗಳು ಹೆಚ್ಚುತ್ತವೆ’ ಎಂದು ಹೇಳಿದರು.</p>.<p>ರಾಷ್ಟ್ರ ಯುವ ಪ್ರಶಸ್ತಿ ವಿಜೇತ ಡಾ.ಜಾವಿದ್ ಜಮಾದಾರ ಮಾತನಾಡಿ, ‘ನೌಕರರು ಕ್ರೀಡೆಗೆ ಹೆಚ್ಚು ಒತ್ತು ನೀಡಬೇಕು. ಕ್ರೀಡಾಪಟುಗಳಿಗೆ ಅವಶ್ಯಕ ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು. ಇದರಿಂದ ನೌಕರರು ಕ್ರೀಡೆಗಳ ಕಡೆಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತದೆ’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಶೇಡಾಶ್ಯಾಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಸಲಹಾ ಸಮಿತಿ ಸದಸ್ಯ ಅಡಿವೆಪ್ಪ ಸಾಲಗಲ್ಲ ಮಾತನಾಡಿದರು.</p>.<p>ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ.ನದಾಫ್, ವಕೀಲ ನಾಗರಜ ಪಿ.ಲಂಬು, ಸಂಘದ ಖಜಾಂಚಿ ಜುಬೇರ ಕೆರೂರ, ಶಿವಾನಂದ ಮಂಗಾನವರ, ವಿಜಯಕುಮಾರ ಹತ್ತಿ, ರಾಜಶೇಖರ ದೈವಾಡಿ, ಗಂಗಾಧರ ಜೀವೂರ, ಸುರೇಶ ಅಂಬಿಗೇರ, ಶಿವರಾಜಕುಮಾರ ಬಿರಾದಾರ ಇದ್ದರು.</p>.<p>ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ ಸ್ವಾಗತಿಸಿದರು. ವಿ.ಡಿ.ಬೆಳ್ಳನ್ನವರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>