<p><strong>ವಿಜಯಪುರ:</strong> ಗ್ರಾಮ ಪಂಚಾಯ್ತಿ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಆಯುಧ ಲೈಸನ್ಸ್ದಾರರು ತಮ್ಮ ಬಂದೂಕು, ರೈಫಲ್, ರಿವಾಲ್ವರ್ ಹಾಗೂ ಪಿಸ್ತೂಲ್ಗಳ ಲೈಸನ್ಸ್ ಗಳನ್ನು ನ.30ರಿಂದ ಆರಂಭಗೊಂಡು ಡಿ. 31ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಹೊಂದಿದವರು ತಕ್ಷಣವೇ ಸಮೀಪದ ಪೊಲೀಸ್ ಠಾಣೆಯಲ್ಲಿ ಎಲ್ಲ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದು ಗುಂಡುಗಳನ್ನು ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಈ ಆದೇಶವು ಬ್ಯಾಂಕುಗಳು ಮತ್ತು ಫ್ಯಾಕ್ಟರಿಗಳು ಭದ್ರತೆಗೋಸ್ಕರ ತೆಗೆದುಕೊಂಡಿರುವ ಆಯುಧಗಳಿಗೆ ಅನ್ವಯಿಸುವುದಿಲ್ಲ. ಅದೇ ರೀತಿ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.</p>.<p>ಪೊಲೀಸ್ ಇಲಾಖೆಯು ತಮ್ಮಲ್ಲಿ ತಂದಿರಿಸಿದ ಶಸ್ತ್ರಾಸ್ತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಬೇಕು. ಶಸ್ತ್ರಾಸ್ತ್ರಗಳನ್ನು ತಂಡಿಡುವ ಲೈಸನ್ಸ್ದಾರರಿಗೆ ಸೂಕ್ತ ರಸೀದಿಯನ್ನು ನೀಡಬೇಕು ಎಂದು ಅವರು ತಿಳಿಸಿದ್ದಾರೆ.</p>.<p>ನಿಗದಿತ ಅವಧಿಯೊಳಗೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ನೀಡದೇ ಇದ್ದಲ್ಲಿ ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲುವಾಸ, ದಂಡ ಅಥವಾ ಎರಡೂ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead"><strong>ಅಬಕಾರಿ ಕಂಟ್ರೋಲ್ ರೂಂ ಆರಂಭ</strong></p>.<p><strong>ವಿಜಯಪುರ: </strong>ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲ್ಲಿ ಅಬಕಾರಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಕೆ.ಅರುಣಕುಮಾರ್ ತಿಳಿಸಿದ್ದಾರೆ.</p>.<p><strong>ಕೇಂದ್ರದ ವಿವರ: </strong>ಕೆ.ಅರುಣಕುಮಾರ, ಅಬಕಾರಿ ಉಪ ಆಯುಕ್ತರು, ಮೊ: 9449597164, ಮಹಾದೇವ ಪೂಜಾರಿ, ಅಬಕಾರಿ ನಿರೀಕ್ಷಕರು : 9535479446 ಹಾಗೂ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ : 08352-244602 ಆಗಿರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಗ್ರಾಮ ಪಂಚಾಯ್ತಿ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಆಯುಧ ಲೈಸನ್ಸ್ದಾರರು ತಮ್ಮ ಬಂದೂಕು, ರೈಫಲ್, ರಿವಾಲ್ವರ್ ಹಾಗೂ ಪಿಸ್ತೂಲ್ಗಳ ಲೈಸನ್ಸ್ ಗಳನ್ನು ನ.30ರಿಂದ ಆರಂಭಗೊಂಡು ಡಿ. 31ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಹೊಂದಿದವರು ತಕ್ಷಣವೇ ಸಮೀಪದ ಪೊಲೀಸ್ ಠಾಣೆಯಲ್ಲಿ ಎಲ್ಲ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದು ಗುಂಡುಗಳನ್ನು ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಈ ಆದೇಶವು ಬ್ಯಾಂಕುಗಳು ಮತ್ತು ಫ್ಯಾಕ್ಟರಿಗಳು ಭದ್ರತೆಗೋಸ್ಕರ ತೆಗೆದುಕೊಂಡಿರುವ ಆಯುಧಗಳಿಗೆ ಅನ್ವಯಿಸುವುದಿಲ್ಲ. ಅದೇ ರೀತಿ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.</p>.<p>ಪೊಲೀಸ್ ಇಲಾಖೆಯು ತಮ್ಮಲ್ಲಿ ತಂದಿರಿಸಿದ ಶಸ್ತ್ರಾಸ್ತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಬೇಕು. ಶಸ್ತ್ರಾಸ್ತ್ರಗಳನ್ನು ತಂಡಿಡುವ ಲೈಸನ್ಸ್ದಾರರಿಗೆ ಸೂಕ್ತ ರಸೀದಿಯನ್ನು ನೀಡಬೇಕು ಎಂದು ಅವರು ತಿಳಿಸಿದ್ದಾರೆ.</p>.<p>ನಿಗದಿತ ಅವಧಿಯೊಳಗೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ನೀಡದೇ ಇದ್ದಲ್ಲಿ ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲುವಾಸ, ದಂಡ ಅಥವಾ ಎರಡೂ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead"><strong>ಅಬಕಾರಿ ಕಂಟ್ರೋಲ್ ರೂಂ ಆರಂಭ</strong></p>.<p><strong>ವಿಜಯಪುರ: </strong>ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲ್ಲಿ ಅಬಕಾರಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಕೆ.ಅರುಣಕುಮಾರ್ ತಿಳಿಸಿದ್ದಾರೆ.</p>.<p><strong>ಕೇಂದ್ರದ ವಿವರ: </strong>ಕೆ.ಅರುಣಕುಮಾರ, ಅಬಕಾರಿ ಉಪ ಆಯುಕ್ತರು, ಮೊ: 9449597164, ಮಹಾದೇವ ಪೂಜಾರಿ, ಅಬಕಾರಿ ನಿರೀಕ್ಷಕರು : 9535479446 ಹಾಗೂ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ : 08352-244602 ಆಗಿರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>