<p><strong>ವಿಜಯಪುರ</strong>: ಜಿಲ್ಲೆಯ ಒಟ್ಟು 211 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವರ್ಗವಾರು ಮೀಸಲಾತಿಯನ್ನು ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸುವ ಪ್ರಕ್ರಿಯೆಯನ್ನು ನಡೆಸಲು ಜಿಲ್ಲಾಧಿಕಾರಿ ವಿಜಯಮಹಾಂತೇಶ ಅವರು ತಾಲ್ಲೂಕುವಾರು ಸ್ಥಳ ಹಾಗೂ ದಿನಾಂಕ ನಿಗದಿಪಡಿಸಿದ್ದಾರೆ.</p><p>ಜೂನ್ 12ರಂದು ಬೆಳಿಗ್ಗೆ 11ಕ್ಕೆ ಕೊಲ್ಹಾರದ ತಾಲ್ಲೂಕು ಪಂಚಾಯಿತಿ ಕಚೇರಿಯ ಸಮುದಾಯ ಭವನದಲ್ಲಿ, ಮಧ್ಯಾಹ್ನ 3 ಕ್ಕೆ ನಿಡಗುಂದಿ ಮುದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.</p><p>ಜೂ.13ರಂದು ಬೆಳಿಗ್ಗೆ 10.30ಕ್ಕೆ ತಿಕೋಟಾದ ಹಾಜಿಮಸ್ತಾನ್ ದರ್ಗಾದಲ್ಲಿ, ಮಧ್ಯಾಹ್ನ 12.30ಕ್ಕೆ ಬಬಲೇಶ್ವರದ ಗುರುಪಾದೇಶ್ವರ ಶಿವಾನುಭವ ಮಂಟಪದಲ್ಲಿ ಮತ್ತು ಮಧ್ಯಾಹ್ನ 3.30ಕ್ಕೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.</p><p>ಜೂ.14ರಂದು ಬೆಳಿಗ್ಗೆ 11ಕ್ಕೆ ಬಸವನಬಾಗೇವಾಡಿಯ ಕೆ.ಕೆ.ಆರ್.ಟಿ.ಸಿ. ಡಿಪೋ ಹತ್ತಿರದ ಶ್ರೀ ಜಗದ್ಗುರು ಪಂಚಾಚಾರ್ಯ ಬಸವಕಲ್ಯಾಣ ಭವನದಲ್ಲಿ, ಮಧ್ಯಾಹ್ನ 3ಕ್ಕೆ ದೇವರಹಿಪ್ಪರಗಿಯ ಶ್ರೀ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.</p><p>ಜೂ.15ರಂದು ಬೆಳಿಗ್ಗೆ 11ಕ್ಕೆ ಮುದ್ದೇಬಿಹಾಳದ ತಹಶೀಲ್ದಾರ್ ಕಚೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಾಗೂ ಮಧ್ಯಾಹ್ನ 3 ಕ್ಳೆ ತಾಳಿಕೋಟೆಯ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.</p>.<p>ಜೂ.16ರಂದು ಬೆಳಿಗ್ಗೆ 11ಕ್ಕೆ ಇಂಡಿ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಾಗೂ ಮಧ್ಯಾಹ್ನ 3ಕ್ಕೆ ಚಡಚಣದ ಗುರು ಕೃಪಾ ಭವನದಲ್ಲಿ ಆಯೋಜಿಸಲಾಗಿದೆ.</p><p>ಜೂ.17ರಂದು ಸಿಂದಗಿಯ ವಿಜಯಪುರ ರಸ್ತೆಯ ಡಾ.ಭಾವಿಕಟ್ಟಿ ಕಲ್ಯಾಣ ಮಂಟಪದಲ್ಲಿ ಹಾಗೂ ಮಧ್ಯಾಹ್ನ 3ಕ್ಕೆ ಆಲಮೇಲದ ಐ.ಕೆ. ರಾಯಲ್ ಫಂಕ್ಷನ್ ಹಾಲ್ನಲ್ಲಿ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜಿಲ್ಲೆಯ ಒಟ್ಟು 211 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವರ್ಗವಾರು ಮೀಸಲಾತಿಯನ್ನು ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸುವ ಪ್ರಕ್ರಿಯೆಯನ್ನು ನಡೆಸಲು ಜಿಲ್ಲಾಧಿಕಾರಿ ವಿಜಯಮಹಾಂತೇಶ ಅವರು ತಾಲ್ಲೂಕುವಾರು ಸ್ಥಳ ಹಾಗೂ ದಿನಾಂಕ ನಿಗದಿಪಡಿಸಿದ್ದಾರೆ.</p><p>ಜೂನ್ 12ರಂದು ಬೆಳಿಗ್ಗೆ 11ಕ್ಕೆ ಕೊಲ್ಹಾರದ ತಾಲ್ಲೂಕು ಪಂಚಾಯಿತಿ ಕಚೇರಿಯ ಸಮುದಾಯ ಭವನದಲ್ಲಿ, ಮಧ್ಯಾಹ್ನ 3 ಕ್ಕೆ ನಿಡಗುಂದಿ ಮುದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.</p><p>ಜೂ.13ರಂದು ಬೆಳಿಗ್ಗೆ 10.30ಕ್ಕೆ ತಿಕೋಟಾದ ಹಾಜಿಮಸ್ತಾನ್ ದರ್ಗಾದಲ್ಲಿ, ಮಧ್ಯಾಹ್ನ 12.30ಕ್ಕೆ ಬಬಲೇಶ್ವರದ ಗುರುಪಾದೇಶ್ವರ ಶಿವಾನುಭವ ಮಂಟಪದಲ್ಲಿ ಮತ್ತು ಮಧ್ಯಾಹ್ನ 3.30ಕ್ಕೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.</p><p>ಜೂ.14ರಂದು ಬೆಳಿಗ್ಗೆ 11ಕ್ಕೆ ಬಸವನಬಾಗೇವಾಡಿಯ ಕೆ.ಕೆ.ಆರ್.ಟಿ.ಸಿ. ಡಿಪೋ ಹತ್ತಿರದ ಶ್ರೀ ಜಗದ್ಗುರು ಪಂಚಾಚಾರ್ಯ ಬಸವಕಲ್ಯಾಣ ಭವನದಲ್ಲಿ, ಮಧ್ಯಾಹ್ನ 3ಕ್ಕೆ ದೇವರಹಿಪ್ಪರಗಿಯ ಶ್ರೀ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.</p><p>ಜೂ.15ರಂದು ಬೆಳಿಗ್ಗೆ 11ಕ್ಕೆ ಮುದ್ದೇಬಿಹಾಳದ ತಹಶೀಲ್ದಾರ್ ಕಚೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಾಗೂ ಮಧ್ಯಾಹ್ನ 3 ಕ್ಳೆ ತಾಳಿಕೋಟೆಯ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.</p>.<p>ಜೂ.16ರಂದು ಬೆಳಿಗ್ಗೆ 11ಕ್ಕೆ ಇಂಡಿ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಾಗೂ ಮಧ್ಯಾಹ್ನ 3ಕ್ಕೆ ಚಡಚಣದ ಗುರು ಕೃಪಾ ಭವನದಲ್ಲಿ ಆಯೋಜಿಸಲಾಗಿದೆ.</p><p>ಜೂ.17ರಂದು ಸಿಂದಗಿಯ ವಿಜಯಪುರ ರಸ್ತೆಯ ಡಾ.ಭಾವಿಕಟ್ಟಿ ಕಲ್ಯಾಣ ಮಂಟಪದಲ್ಲಿ ಹಾಗೂ ಮಧ್ಯಾಹ್ನ 3ಕ್ಕೆ ಆಲಮೇಲದ ಐ.ಕೆ. ರಾಯಲ್ ಫಂಕ್ಷನ್ ಹಾಲ್ನಲ್ಲಿ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>