‘ಸಿಗ್ನಲ್ಗಳಿರುವ ರಸ್ತೆಯ ಎರಡು ಬದಿಯಲ್ಲಿ ಕಂಬಗಳನ್ನು ನೆಟ್ಟು, ಪರದೆ ಹಾಕಿ ನೆರಳಿನ ವ್ಯವಸ್ಥೆ ಮಾಡಿದ್ದರಿಂದ ಬೈಕ್ ಸವಾರರಿಗೆ ಅನುಕೂಲವಾಗಿತ್ತು. ಆದರೆ ಒಂದೆರೆಡು ದಿನದಲ್ಲಿಯೇ ಈ ಪರದೆಗಳು ಹರಿದು ಹೋಗಿದ್ದು, ಮರಳಿ ಹಾಕುವ ಕೆಲಸವಾಗಿಲ್ಲ. ಹೀಗಾಗಿ ಜನರು ಸುಡು ಬಿಸಿಲಿನಲ್ಲೇ ನಿಲ್ಲುವ ತ್ರಾಸು ತಪ್ಪಿಲ್ಲ. ಬಿಸಿಲು ಮುಗಿಯುವವರೆಗೆ ಪರದೆಗಳಿದ್ದರೆ, ಈ ಕೆಲಸ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ’ ಎನ್ನುತ್ತಾರೆ ಬೈಕ್ ಸವಾರ ಸಿದ್ದನಗೌಡ ಬಿರಾದಾರ.