<p><strong>ಸಿಂದಗಿ</strong>: ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವಿಜಯಪುರ ಜಿಲ್ಲೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ ಜಿಲ್ಲೆಯಲ್ಲಿ ಈ ಯೋಜನೆಗಾಗಿ ₹3,100 ಕೋಟಿ ಖರ್ಚು ಮಾಡಲಾಗಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ ತಿಕೋಟ, ತಾಳಿಕೋಟೆ ಹಾಗೂ ಸಿಂದಗಿ ತಾಲ್ಲೂಕುಗಳಲ್ಲಿ ಶೇ 100ರಷ್ಟು ಯಶಸ್ವಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಬೋರಾಮಣಿ ಹೇಳಿದರು.</p>.<p>ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br> ‘ಇಡೀ ದೇಶದಲ್ಲಿಯೇ ಗ್ಯಾರಂಟಿ ಯೋಜನೆ ಯಶಸ್ವಿಯಾಗಿದ್ದು ಕರ್ನಾಟಕದಲ್ಲಿ. ಯೋಜನೆಯ ಸಾಧನೆ ಅಗಾಧ. ಆದರೆ ಪ್ರಚಾರದಿಂದ ಹಿಂದೆ ಬಿದ್ದಿದೆ. ಪ್ರಚಾರಕ್ಕಾಗಿ ಇಡೀ ರಾಜ್ಯ ಒಳಗೊಂಡು ಕೇವಲ ₹15 ಲಕ್ಷ ಮಾತ್ರ ನೀಡಿದ್ದಾರೆ’ ಎಂದರು. </p>.<p>‘ಆಹಾರ ಇಲಾಖೆ ಮಾತ್ರ ಸಾಧನೆಯಲ್ಲಿ ಹಿಂದುಳಿದಿದೆ. ಅದಕ್ಕೆ ಕೆಲವು ತಾಂತ್ರಿಕ ಸಮಸ್ಯೆಗಳೂ ಕಾರಣ. ಆದರೆ ಅಧಿಕಾರಿಗಳು ಶ್ರಮಿಸಬೇಕಾಗಿದೆ. ಆಹಾರ ಇಲಾಖೆಯಲ್ಲಿ ಅಕ್ಕಿ ಮಾಫಿಯಾ, ಮರುಳು ಮಾಫಿಯಾ ಮೀರಿಸಿದೆ. ಇಂಡಿ-ಸಿಂದಗಿ ತಾಲ್ಲೂಕುಗಳಲ್ಲಿ ಬಡವರ ಅನ್ನ ಮಹಾರಾಷ್ಟ್ರಕ್ಕೆ ಕಳ್ಳ ಸಾಗಾಣಿಕೆಯಾಗುತ್ತಿದೆ. ಇಂಡಿ ತಾಲ್ಲೂಕಿನಲ್ಲಿ ಅಕ್ಕಿ ಮಾಫಿಯಾಗೆ ಸಂಬಂಧಿಸಿದಂತೆ 33 ಪ್ರಕರಣಗಳನ್ನು ದಾಖಲಿಸಿರುವೆ. ಹೀಗಾಗಿ ಅಕ್ಕಿ ಅಕ್ರಮ ಮಾರಾಟಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಕಡಿವಾಣ ಹಾಕಲು ಮುಂದಾಗಬೇಕು’ ಎಂದು ಎಚ್ಚರಿಕೆ ನೀಡಿದರು.</p>.<p>74 ನ್ಯಾಯಬೆಲೆ ಅಂಗಡಿಗಳಲ್ಲಿ ಬಹುತೇಕ ಕಡೆ ಆಹಾರಧಾನ್ಯ ಪಡೆಯಲು ಚೀಟಿ ಕೊಡುವ ಪದ್ಧತಿ ಇದೆ. ಬನ್ನೆಟ್ಟಿ ಪಿ.ಎ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ₹10 ರೂಪಾಯಿ ಹೆಚ್ಚುವರಿ ತೆಗೆದುಕೊಂಡು ಚೀಟಿ ನೀಡಲಾಗುತ್ತಿದೆ ಎಂದು ಸಮಿತಿ ಸದಸ್ಯ ಎಸ್.ಬಿ.ಖಾನಾಪೂರ ವಕೀಲ ಆರೋಪಿಸಿದರು.</p>.<p>ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕುರಿತು ಸಾರಿಗೆ ಸಂಸ್ಥೆಯ ಕೆಲವು ಚಾಲಕರು, ನಿರ್ವಾಹಕರು ಸರ್ಕಾರವನ್ನು ಹಿಯ್ಯಾಳಿಸುವ ರೀತಿಯಲ್ಲಿ ಬಹಿರಂಗವಾಗಿ ಟೀಕಿಸುತ್ತಾರೆ ಎಂದು ಸದಸ್ಯ ಶಿದ್ಲಿಂಗ ಗುಂಡಾಪೂರ ಗಂಭೀರ ಆರೋಪಿಸಿದರು.</p>.<p>ಸಮಿತಿ ಸದಸ್ಯರಾದ ಮಹಮ್ಮದರಜತ ತಾಂಬೆ, ಸುನಂದಾ ಯಂಪೂರೆ, ರವಿಂದ್ರಬಾಬು ನಾಟೀಕಾರ, ಸಾಹೇಬಪಟೇಲ, ಪರುಶರಾಮ ಗೌಂಡಿ, ರುದ್ರಗೌಡ ಪಾಟೀಲ ಪಾಲ್ಗೊಂಡಿದ್ದರು.</p>.<p>ಎಇಇ ಚಂದ್ರಕಾಂತ ನಾಯಕ, ವಿದ್ಯಾ ಹಿಪ್ಪರಗಿ, ಸೋಮಶೇಖರ ಆಲಮೇಲ, ಸಾರಿಗೆ ಸಂಸ್ಥೆಯ ನಾಗಾವಿ ಇಲಾಖೆಗಳ ಪ್ರಗತಿ ಕುರಿತು ಮಾಹಿತಿ ನೀಡಿದರು. ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಕವಲಗಿ, ತಾಲ್ಲೂಕು ಪಂಚಾಯಿತಿ ಇಒ ರಾಮು ಅಗ್ನಿ ಇದ್ದರು.</p>.<div><blockquote>ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಸಿಂದಗಿ ತಾಲ್ಲೂಕಿನಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ. 20 ಕಂತುಗಳಲ್ಲಿ ₹129 ಕೋಟಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ</blockquote><span class="attribution">ಶಂಭುಲಿಂಗ ಹಿರೇಮಠ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂದಗಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವಿಜಯಪುರ ಜಿಲ್ಲೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ ಜಿಲ್ಲೆಯಲ್ಲಿ ಈ ಯೋಜನೆಗಾಗಿ ₹3,100 ಕೋಟಿ ಖರ್ಚು ಮಾಡಲಾಗಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ ತಿಕೋಟ, ತಾಳಿಕೋಟೆ ಹಾಗೂ ಸಿಂದಗಿ ತಾಲ್ಲೂಕುಗಳಲ್ಲಿ ಶೇ 100ರಷ್ಟು ಯಶಸ್ವಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಬೋರಾಮಣಿ ಹೇಳಿದರು.</p>.<p>ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br> ‘ಇಡೀ ದೇಶದಲ್ಲಿಯೇ ಗ್ಯಾರಂಟಿ ಯೋಜನೆ ಯಶಸ್ವಿಯಾಗಿದ್ದು ಕರ್ನಾಟಕದಲ್ಲಿ. ಯೋಜನೆಯ ಸಾಧನೆ ಅಗಾಧ. ಆದರೆ ಪ್ರಚಾರದಿಂದ ಹಿಂದೆ ಬಿದ್ದಿದೆ. ಪ್ರಚಾರಕ್ಕಾಗಿ ಇಡೀ ರಾಜ್ಯ ಒಳಗೊಂಡು ಕೇವಲ ₹15 ಲಕ್ಷ ಮಾತ್ರ ನೀಡಿದ್ದಾರೆ’ ಎಂದರು. </p>.<p>‘ಆಹಾರ ಇಲಾಖೆ ಮಾತ್ರ ಸಾಧನೆಯಲ್ಲಿ ಹಿಂದುಳಿದಿದೆ. ಅದಕ್ಕೆ ಕೆಲವು ತಾಂತ್ರಿಕ ಸಮಸ್ಯೆಗಳೂ ಕಾರಣ. ಆದರೆ ಅಧಿಕಾರಿಗಳು ಶ್ರಮಿಸಬೇಕಾಗಿದೆ. ಆಹಾರ ಇಲಾಖೆಯಲ್ಲಿ ಅಕ್ಕಿ ಮಾಫಿಯಾ, ಮರುಳು ಮಾಫಿಯಾ ಮೀರಿಸಿದೆ. ಇಂಡಿ-ಸಿಂದಗಿ ತಾಲ್ಲೂಕುಗಳಲ್ಲಿ ಬಡವರ ಅನ್ನ ಮಹಾರಾಷ್ಟ್ರಕ್ಕೆ ಕಳ್ಳ ಸಾಗಾಣಿಕೆಯಾಗುತ್ತಿದೆ. ಇಂಡಿ ತಾಲ್ಲೂಕಿನಲ್ಲಿ ಅಕ್ಕಿ ಮಾಫಿಯಾಗೆ ಸಂಬಂಧಿಸಿದಂತೆ 33 ಪ್ರಕರಣಗಳನ್ನು ದಾಖಲಿಸಿರುವೆ. ಹೀಗಾಗಿ ಅಕ್ಕಿ ಅಕ್ರಮ ಮಾರಾಟಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಕಡಿವಾಣ ಹಾಕಲು ಮುಂದಾಗಬೇಕು’ ಎಂದು ಎಚ್ಚರಿಕೆ ನೀಡಿದರು.</p>.<p>74 ನ್ಯಾಯಬೆಲೆ ಅಂಗಡಿಗಳಲ್ಲಿ ಬಹುತೇಕ ಕಡೆ ಆಹಾರಧಾನ್ಯ ಪಡೆಯಲು ಚೀಟಿ ಕೊಡುವ ಪದ್ಧತಿ ಇದೆ. ಬನ್ನೆಟ್ಟಿ ಪಿ.ಎ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ₹10 ರೂಪಾಯಿ ಹೆಚ್ಚುವರಿ ತೆಗೆದುಕೊಂಡು ಚೀಟಿ ನೀಡಲಾಗುತ್ತಿದೆ ಎಂದು ಸಮಿತಿ ಸದಸ್ಯ ಎಸ್.ಬಿ.ಖಾನಾಪೂರ ವಕೀಲ ಆರೋಪಿಸಿದರು.</p>.<p>ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕುರಿತು ಸಾರಿಗೆ ಸಂಸ್ಥೆಯ ಕೆಲವು ಚಾಲಕರು, ನಿರ್ವಾಹಕರು ಸರ್ಕಾರವನ್ನು ಹಿಯ್ಯಾಳಿಸುವ ರೀತಿಯಲ್ಲಿ ಬಹಿರಂಗವಾಗಿ ಟೀಕಿಸುತ್ತಾರೆ ಎಂದು ಸದಸ್ಯ ಶಿದ್ಲಿಂಗ ಗುಂಡಾಪೂರ ಗಂಭೀರ ಆರೋಪಿಸಿದರು.</p>.<p>ಸಮಿತಿ ಸದಸ್ಯರಾದ ಮಹಮ್ಮದರಜತ ತಾಂಬೆ, ಸುನಂದಾ ಯಂಪೂರೆ, ರವಿಂದ್ರಬಾಬು ನಾಟೀಕಾರ, ಸಾಹೇಬಪಟೇಲ, ಪರುಶರಾಮ ಗೌಂಡಿ, ರುದ್ರಗೌಡ ಪಾಟೀಲ ಪಾಲ್ಗೊಂಡಿದ್ದರು.</p>.<p>ಎಇಇ ಚಂದ್ರಕಾಂತ ನಾಯಕ, ವಿದ್ಯಾ ಹಿಪ್ಪರಗಿ, ಸೋಮಶೇಖರ ಆಲಮೇಲ, ಸಾರಿಗೆ ಸಂಸ್ಥೆಯ ನಾಗಾವಿ ಇಲಾಖೆಗಳ ಪ್ರಗತಿ ಕುರಿತು ಮಾಹಿತಿ ನೀಡಿದರು. ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಕವಲಗಿ, ತಾಲ್ಲೂಕು ಪಂಚಾಯಿತಿ ಇಒ ರಾಮು ಅಗ್ನಿ ಇದ್ದರು.</p>.<div><blockquote>ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಸಿಂದಗಿ ತಾಲ್ಲೂಕಿನಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ. 20 ಕಂತುಗಳಲ್ಲಿ ₹129 ಕೋಟಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ</blockquote><span class="attribution">ಶಂಭುಲಿಂಗ ಹಿರೇಮಠ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂದಗಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>