<p><strong>ವಿಜಯಪುರ</strong>: ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ವಿವಿಧ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕು ಎಂಬ ಹೆಬ್ಬಯಕೆ ಹೊಂದಿರುವವರಿಗೆ ವಿಷಯತಜ್ಞರು ಹಾಗೂ ಸಾಧಕರಿಂದ ಮಾರ್ಗದರ್ಶನ ನೀಡಲು ನವೆಂಬರ್ 13ರಂದು ಬೆಳಿಗ್ಗೆ 10ಕ್ಕೆ ‘ಗೈಡಿಂಗ್ ಫೋರ್ಸ್’ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>‘ಪ್ರಜಾವಾಣಿ’, ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ‘ಇನ್ಸೈಟ್ಸ್ ಐಎಎಸ್’ ಸಂಸ್ಥೆಯ ಸಹಯೋಗವಿದೆ.</p>.<p>ಜಿಲ್ಲಾಧಿಕಾರಿ ಡಾ.ಆನಂದ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ತಮ್ಮ ಯಶಸ್ಸಿನ ಗುಟ್ಟು ತಿಳಿಸಿಕೊಡಲಿದ್ದಾರೆ ಮತ್ತು ತಮ್ಮ ಸಾಧನೆಯ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.</p>.<p>ಇನ್ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಹಾಗೂ ನಿರ್ದೇಶಕರೂ ಆಗಿರುವ ಜಿ.ಬಿ.ವಿನಯ್ ಕುಮಾರ್ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಅಗತ್ಯ ಮಾರ್ಗದರ್ಶನ ಮಾಡಲಿದ್ದಾರೆ. ವಿಷಯ ತಜ್ಞರು ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗಳು ಹಾಗೂ ಸಾಧನೆಗೆ ಬೇಕಾದ ಮಾಹಿತಿ ನೀಡಲಿದ್ದಾರೆ.</p>.<p>ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮ ರೂಪಿಸಲಾಗಿದೆ. ಅಂದು ಬೆಳಿಗ್ಗೆ 9ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.</p>.<p>ಎಲ್ಲರಿಗೂ ಉಚಿತ ಪ್ರವೇಶವಿದೆ. ನೋಂದಣಿ ಬಗ್ಗೆ ಮಾಹಿತಿಗಾಗಿ ಶ್ರೀಶೈಲ ಬಿದರಿ: ಮೊ.9742392333, ರವಿ ಹೆಗಡೆ: 9742962303 ಅವರನ್ನು ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ವಿವಿಧ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕು ಎಂಬ ಹೆಬ್ಬಯಕೆ ಹೊಂದಿರುವವರಿಗೆ ವಿಷಯತಜ್ಞರು ಹಾಗೂ ಸಾಧಕರಿಂದ ಮಾರ್ಗದರ್ಶನ ನೀಡಲು ನವೆಂಬರ್ 13ರಂದು ಬೆಳಿಗ್ಗೆ 10ಕ್ಕೆ ‘ಗೈಡಿಂಗ್ ಫೋರ್ಸ್’ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>‘ಪ್ರಜಾವಾಣಿ’, ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ‘ಇನ್ಸೈಟ್ಸ್ ಐಎಎಸ್’ ಸಂಸ್ಥೆಯ ಸಹಯೋಗವಿದೆ.</p>.<p>ಜಿಲ್ಲಾಧಿಕಾರಿ ಡಾ.ಆನಂದ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ತಮ್ಮ ಯಶಸ್ಸಿನ ಗುಟ್ಟು ತಿಳಿಸಿಕೊಡಲಿದ್ದಾರೆ ಮತ್ತು ತಮ್ಮ ಸಾಧನೆಯ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.</p>.<p>ಇನ್ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಹಾಗೂ ನಿರ್ದೇಶಕರೂ ಆಗಿರುವ ಜಿ.ಬಿ.ವಿನಯ್ ಕುಮಾರ್ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಅಗತ್ಯ ಮಾರ್ಗದರ್ಶನ ಮಾಡಲಿದ್ದಾರೆ. ವಿಷಯ ತಜ್ಞರು ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗಳು ಹಾಗೂ ಸಾಧನೆಗೆ ಬೇಕಾದ ಮಾಹಿತಿ ನೀಡಲಿದ್ದಾರೆ.</p>.<p>ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮ ರೂಪಿಸಲಾಗಿದೆ. ಅಂದು ಬೆಳಿಗ್ಗೆ 9ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.</p>.<p>ಎಲ್ಲರಿಗೂ ಉಚಿತ ಪ್ರವೇಶವಿದೆ. ನೋಂದಣಿ ಬಗ್ಗೆ ಮಾಹಿತಿಗಾಗಿ ಶ್ರೀಶೈಲ ಬಿದರಿ: ಮೊ.9742392333, ರವಿ ಹೆಗಡೆ: 9742962303 ಅವರನ್ನು ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>