ವಿಜಯಪುರ: ‘ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದರು.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಆಧಿಕಾರಿಗಳು ಬಿಜೆಪಿ ಪದಾಧಿಕಾರಿಗೆ ವಿಚಾರಣೆಗೆ ಒಳಪಡಿಸಿದ ಕುರಿತು ಸಚಿವ ಗುಂಡೂರಾವ್ ಅವರು ‘ಎಕ್ಸ್’ನಲ್ಲಿ ಸಂದೇಶ ಹಾಕಿದ್ದರು.
ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯತ್ನಾಳ್, ‘ಸಚಿವರಿಗೆ ದೇಶ ವಿರೋಧಿ ಹೇಳಿಕೆ ಕೊಡುವುದು ಚಟವಾಗಿದೆ’ ಎಂದರು.
‘ಬಿಜೆಪಿ ಪದಾಧಿಕಾರಿ ಮೊಬೈಲ್ ಸಿಮ್ ವ್ಯಾಪಾರಿಯಾಗಿದ್ದಾರೆ. ಅವರ ಬಳಿ ಶಂಕಿತ ಉಗ್ರರು ಸಿಮ್ ಖರೀದಿಸಿದ್ದ ಹಿನ್ನೆಲೆಯಲ್ಲಿ ಎನ್ಐಎ ವಿಚಾರಣೆ ನಡೆಸಿದೆ‘ ಎಂದು ಹೇಳಿದರು.