ವಿಜಯಪುರದಲ್ಲಿ ಕೃಷಿ ವಿಶ್ವವಿದ್ಯಾಲಯ ಆರಂಭಿಸಬೇಕು, ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಬೇಕು, ಫುಡ್ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಬೇಕು, ಸೈಕ್ಲಿಂಗ್ ವೆಲೋಡ್ರೋಮ್ ಶೀಘ್ರ ಪೂರ್ಣಗೊಳಿಸಬೇಕು, ಪ್ರತ್ಯೇಕ ಕ್ರೀಡಾಂಗಣ ನಿರ್ಮಾಣ ಮಾಡಬೇಕು ಎಂದು ಸದನದಲ್ಲಿ ಸರ್ಕಾರದ ಗಮನ ಸೆಳೆದೆ. ಆದರೆ, ಸರ್ಕಾರದಿಂದ ತೃಪ್ತಿಕರ ಉತ್ತರ ಲಭಿಸಲಿಲ್ಲ ಎಂದು ಹೇಳಿದರು.