ಹಳ್ಳದ ಹರಿವಿನಲ್ಲಿ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿದ್ದ ಎಮ್ಮೆಗಳನ್ನು ರಕ್ಷಿಸಲು ಹೋಗಿ ರೈತ ತಾನು ಕೂಡಾ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ಮರಳದ ಕಾರಣ ತಡರಾತ್ರಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಿಗ್ಗೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.