ಆಲಮೇಲ ತಾಲ್ಲೂಕಿನಲ್ಲಿ ಬುಧವಾರ ಭಾರೀ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಹೊಲಕ್ಕೆ ಹೋದ ರೈತ ಸಂಜೆ ಮನೆಗೆ ಬರುವ ವೇಳೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವುದಾಗಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಪತ್ತೆ ಕಾರ್ಯ ನಡೆಸಿದ್ದಾರೆ ಆಲಮೇಲ ಠಾಣೆಯ ಪಿಎಸ್ಐ ಸುರೇಶ ಗಡ್ಡಿ ತಿಳಿಸಿದ್ದಾರೆ.