<p><strong>ಹುಬ್ಬಳ್ಳಿ</strong>: ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಸೋಮವಾರ ಬಿರುಗಾಳಿ ಸಹಿತ ಮಳೆಯಾಯಿತು. ವರ್ಷದ ಮೊದಲ ಮಳೆಯು, ವಾತಾವರಣವನ್ನು ತಂಪಾಗಿಸಿತು.</p>.<p>ವಿಜಯಪುರ ನಗರ, ತಿಕೋಟಾ ಮತ್ತು ಚಡಚಣ ತಾಲ್ಲೂಕು ವ್ಯಾಪ್ತಿ ಹಾಗೂ ಹೊರ್ತಿ, ನಿವರಗಿ, ಇಂಚಗೇರಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಯಿತು.</p>.<p>ಜಿಲ್ಲೆಯಾದ್ಯಂತ ದ್ರಾಕ್ಷಿ ಬೆಳೆ ಕಟಾವಿಗೆ ಬಂದಿದ್ದು, ಒಣ ದ್ರಾಕ್ಷಿ ತಯಾರಿಕೆಗೆ ಸಜ್ಜಾಗಿರುವ ಹೊತ್ತಿನಲ್ಲಿ ಮಳೆ ಆಗಿರುವುದು ತೊಂದರೆಯಾಗಿದೆ. ಚಡಚಣ ತಾಲ್ಲೂಕಿನ ನಿವರಗಿಯಲ್ಲಿ ಗಾಳಿಗೆ ದ್ರಾಕ್ಷಿ ಸಾಲು ನೆಲಕ್ಕುರುಳಿದೆ.</p>.<p>ಬಾಗಲಕೋಟೆ ಜಿಲ್ಲೆಯ ಅಮೀನಗಡ, ನೀರಲಕೇರಿ ಸೇರಿ ವಿವಿಧೆಡೆ 10 ನಿಮಿಷಕ್ಕೂ ಹೆಚ್ಚು ಸಮಯ ತುಂತುರು ಮಳೆಯಾಯಿತು., ಅಮೀನಗಡ, ಕಮತಗಿ, ಮಹಾಲಿಂಗಪುರ, ರಬಕವಿ, ಹುನಗುಂದದಲ್ಲೂ ಮಳೆಯಾಯಿತು.</p>.<p>ಗದಗ ಜಿಲ್ಲೆಯಲ್ಲಿ ಮುಂಡರಗಿ ಮತ್ತು ರೋಣ ತಾಲ್ಲೂಕಿನ ಕೆಲವೆಡೆ ಮಳೆಯಾಯಿತು. ಬೆಳೆಗಳ ಒಕ್ಕಣೆ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಕಡಲೆ, ಜೋಳ, ಕುಸುಬೆ, ಗೋಧಿ ಬೆಳೆಯನ್ನು ರಕ್ಷಿಸಿಕೊಳ್ಳಲು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಸೋಮವಾರ ಬಿರುಗಾಳಿ ಸಹಿತ ಮಳೆಯಾಯಿತು. ವರ್ಷದ ಮೊದಲ ಮಳೆಯು, ವಾತಾವರಣವನ್ನು ತಂಪಾಗಿಸಿತು.</p>.<p>ವಿಜಯಪುರ ನಗರ, ತಿಕೋಟಾ ಮತ್ತು ಚಡಚಣ ತಾಲ್ಲೂಕು ವ್ಯಾಪ್ತಿ ಹಾಗೂ ಹೊರ್ತಿ, ನಿವರಗಿ, ಇಂಚಗೇರಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಯಿತು.</p>.<p>ಜಿಲ್ಲೆಯಾದ್ಯಂತ ದ್ರಾಕ್ಷಿ ಬೆಳೆ ಕಟಾವಿಗೆ ಬಂದಿದ್ದು, ಒಣ ದ್ರಾಕ್ಷಿ ತಯಾರಿಕೆಗೆ ಸಜ್ಜಾಗಿರುವ ಹೊತ್ತಿನಲ್ಲಿ ಮಳೆ ಆಗಿರುವುದು ತೊಂದರೆಯಾಗಿದೆ. ಚಡಚಣ ತಾಲ್ಲೂಕಿನ ನಿವರಗಿಯಲ್ಲಿ ಗಾಳಿಗೆ ದ್ರಾಕ್ಷಿ ಸಾಲು ನೆಲಕ್ಕುರುಳಿದೆ.</p>.<p>ಬಾಗಲಕೋಟೆ ಜಿಲ್ಲೆಯ ಅಮೀನಗಡ, ನೀರಲಕೇರಿ ಸೇರಿ ವಿವಿಧೆಡೆ 10 ನಿಮಿಷಕ್ಕೂ ಹೆಚ್ಚು ಸಮಯ ತುಂತುರು ಮಳೆಯಾಯಿತು., ಅಮೀನಗಡ, ಕಮತಗಿ, ಮಹಾಲಿಂಗಪುರ, ರಬಕವಿ, ಹುನಗುಂದದಲ್ಲೂ ಮಳೆಯಾಯಿತು.</p>.<p>ಗದಗ ಜಿಲ್ಲೆಯಲ್ಲಿ ಮುಂಡರಗಿ ಮತ್ತು ರೋಣ ತಾಲ್ಲೂಕಿನ ಕೆಲವೆಡೆ ಮಳೆಯಾಯಿತು. ಬೆಳೆಗಳ ಒಕ್ಕಣೆ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಕಡಲೆ, ಜೋಳ, ಕುಸುಬೆ, ಗೋಧಿ ಬೆಳೆಯನ್ನು ರಕ್ಷಿಸಿಕೊಳ್ಳಲು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>