<p><strong>ವಿಜಯಪುರ:</strong>‘ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಸಾರ್ವಕಾಲಿಕವಾದವುಗಳು ಅವು ನಮ್ಮ ಬದುಕಿಗೆ ದಾರಿ ದೀಪ ಅವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದುವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.</p>.<p>ತಾಳಿಕೋಟೆ ತಾಲ್ಲೂಕಿನ ಶರಣ ಸೋಮನಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುರಾಣ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನರು ಸೇರಿದಂತೆ ಎಲ್ಲ ಶರಣರು, ಸಂತರು, ಮಹಾತ್ಮರ ಸಂದೇಶಗಳು ಎಲ್ಲರಿಗೂ ಅನ್ವಯ ಆಗುತ್ತವೆ. ಅವು ಮನುಕುಲದ ಬೆಳಕಾಗಿವೆ. ಅವುಗಳ ಪರಿಪಾಲನೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಹೇಳಿದರು.</p>.<p>ಹೇಮರಡ್ಡಿ ಮಲ್ಲಮ್ಮಳ ಅಚಲ ಭಕ್ತಿ, ಸಹನಾ ಗುಣ ಸ್ತ್ರೀಕುಲಕ್ಕೆ ಮಾದರಿಯಾಗಿದೆ. ವೇಮನರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ ಎಂದರು.</p>.<p>ಕುಟುಂಬದ ಆದರ್ಶ ಪಾಲಿಸುವ ಮೂಲಕ ಹೇಮರಡ್ಡಿ ಮಲ್ಲಮ್ಮ ಮಹಿಳೆಯರಿಗೆ ಆದರ್ಶಪ್ರಾಯರಾಗಿದ್ದಾರೆ. ಮಹಿಳಾ ಕುಲದ ಅನರ್ಘ್ಯ ರತ್ನವಾಗಿ ಸಮಾಜಕ್ಕೆ ಬೆಳಕಾಗಿದ್ದಾರೆ ಎಂದು ಹೇಳಿದರು.</p>.<p>ಹೇಮರಡ್ಡಿ ಮಲ್ಲಮ್ಮ ಸಾಮಾನ್ಯ ಮಹಿಳೆಯಾಗಿದ್ದರು. ಅವರು ಅರಿವಿಗಿಂತ ಆಚಾರ ದೊಡ್ಡದು ಎಂದು ಸಾಧಿಸಿ ಪ್ರಪಂಚಕ್ಕೆ ತೋರಿಸಿ ಹೆಣ್ಣು ಕುಲಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಸಂಸಾರದಲ್ಲಿದ್ದುಕೊಂಡು ಕುಟುಂಬದ ಸದಸ್ಯರ ಕಿರುಕುಳ ಸಹಿಸಿ ಅವರ ಅವಗುಣಗಳನ್ನು ಪ್ರೀತಿ, ಸಹನೆಯಿಂದ ತಿದ್ದಿ, ತೀಡಿ ಸರಿದಾರಿಗೆ ತರಬಹುದು ಎಂಬುದನ್ನು ಜಗತ್ತಿಗೆ ತೋರಿಸಿದ ಮಹಾಸಾದ್ವಿ ಶಿವ<br />ಶರಣೆ ಹೇಮರಡ್ಡಿ ಮಲ್ಲಮ್ಮ ಎಂದರು.</p>.<p>ಸಮಾಜದ ದುರ್ಬಲರ, ದೀನರ ಮತ್ತು ಅಸಹಾಯಕರಿಗೆ ನೆರವಾಗಬೇಕು. ಆಗ ಮಾತ್ರ ದೇಶದ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ತಿಳಿಸಿದರು.</p>.<p>ಪೂಜ್ಯರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>‘ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಾಂಬೆಯ ಸಂದೇಶಗಳು ಸಾರ್ವಕಾಲಿಕವಾದವುಗಳು ಅವು ನಮ್ಮ ಬದುಕಿಗೆ ದಾರಿ ದೀಪ ಅವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದುವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.</p>.<p>ತಾಳಿಕೋಟೆ ತಾಲ್ಲೂಕಿನ ಶರಣ ಸೋಮನಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಪುರಾಣ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನರು ಸೇರಿದಂತೆ ಎಲ್ಲ ಶರಣರು, ಸಂತರು, ಮಹಾತ್ಮರ ಸಂದೇಶಗಳು ಎಲ್ಲರಿಗೂ ಅನ್ವಯ ಆಗುತ್ತವೆ. ಅವು ಮನುಕುಲದ ಬೆಳಕಾಗಿವೆ. ಅವುಗಳ ಪರಿಪಾಲನೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಹೇಳಿದರು.</p>.<p>ಹೇಮರಡ್ಡಿ ಮಲ್ಲಮ್ಮಳ ಅಚಲ ಭಕ್ತಿ, ಸಹನಾ ಗುಣ ಸ್ತ್ರೀಕುಲಕ್ಕೆ ಮಾದರಿಯಾಗಿದೆ. ವೇಮನರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ ಎಂದರು.</p>.<p>ಕುಟುಂಬದ ಆದರ್ಶ ಪಾಲಿಸುವ ಮೂಲಕ ಹೇಮರಡ್ಡಿ ಮಲ್ಲಮ್ಮ ಮಹಿಳೆಯರಿಗೆ ಆದರ್ಶಪ್ರಾಯರಾಗಿದ್ದಾರೆ. ಮಹಿಳಾ ಕುಲದ ಅನರ್ಘ್ಯ ರತ್ನವಾಗಿ ಸಮಾಜಕ್ಕೆ ಬೆಳಕಾಗಿದ್ದಾರೆ ಎಂದು ಹೇಳಿದರು.</p>.<p>ಹೇಮರಡ್ಡಿ ಮಲ್ಲಮ್ಮ ಸಾಮಾನ್ಯ ಮಹಿಳೆಯಾಗಿದ್ದರು. ಅವರು ಅರಿವಿಗಿಂತ ಆಚಾರ ದೊಡ್ಡದು ಎಂದು ಸಾಧಿಸಿ ಪ್ರಪಂಚಕ್ಕೆ ತೋರಿಸಿ ಹೆಣ್ಣು ಕುಲಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಸಂಸಾರದಲ್ಲಿದ್ದುಕೊಂಡು ಕುಟುಂಬದ ಸದಸ್ಯರ ಕಿರುಕುಳ ಸಹಿಸಿ ಅವರ ಅವಗುಣಗಳನ್ನು ಪ್ರೀತಿ, ಸಹನೆಯಿಂದ ತಿದ್ದಿ, ತೀಡಿ ಸರಿದಾರಿಗೆ ತರಬಹುದು ಎಂಬುದನ್ನು ಜಗತ್ತಿಗೆ ತೋರಿಸಿದ ಮಹಾಸಾದ್ವಿ ಶಿವ<br />ಶರಣೆ ಹೇಮರಡ್ಡಿ ಮಲ್ಲಮ್ಮ ಎಂದರು.</p>.<p>ಸಮಾಜದ ದುರ್ಬಲರ, ದೀನರ ಮತ್ತು ಅಸಹಾಯಕರಿಗೆ ನೆರವಾಗಬೇಕು. ಆಗ ಮಾತ್ರ ದೇಶದ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ತಿಳಿಸಿದರು.</p>.<p>ಪೂಜ್ಯರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>