ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿ ಅನಗವಾಡಿ ಸೇತುವೆ ಬಳಿಯಿಂದ ಅ.2 ರಂದು ಬೆಳಿಗ್ಗೆ 8ಕ್ಕೆ ಆರಂಭವಾಗಿ ಕೊರ್ತಿ ಕೋಲ್ಹಾರ ಕೃಷ್ಣಾ ನದಿ ಸೇತುವೆ ವರೆಗೆ ನಡೆಯಲಿರುವ ಈ ಪಾದಯಾತ್ರೆಯಲ್ಲಿ ವಿಜಯಪುರ-ಬಾಗಲಕೋಟೆ ಜಿಲ್ಲೆಯ ವಿವಿಧ ಮಠಾಧೀಶರು, ರೈತ ಸಂಘಟನೆಯ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಯುಕೆಪಿ ಸಂತ್ರಸ್ತರು, ರೈತ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.