<p><strong>ವಿಜಯಪುರ</strong>: ‘ಮಕರ ಸಂಕ್ರಮಣದ ಸಂದರ್ಭದಲ್ಲಿ ವಿಜಯಪುರದಲ್ಲಿ ನಡೆಯುವ ಸಿದ್ದೇಶ್ವರ ಜಾತ್ರೆಯಲ್ಲಿ ಹಿಂದೂಯೇತರರಿಗೆ ಮಳಿಗೆ ಹಾಕಲು ಮತ್ತು ಯಾವುದೇ ರೀತಿಯ ವ್ಯಾಪಾರ ಮಾಡಲು ಅವಕಾಶ ನೀಡಬಾರದು’ ಎಂದು ಹಿಂದೂ ಸಂಘಟನೆಗಳ ಒಕ್ಕೂಟ ಶಾಸಕ ಯತ್ನಾಳ ಅವರಿಗೆ ಮನವಿ ಸಲ್ಲಿಸಿದೆ.</p>.<p>‘ರಾಜ್ಯದ ದೇವಾಲಯ ಹಾಗೂ ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಇತ್ತೀಚಿನ ಸಭೆಯಲ್ಲಿ ಹಿಂದೂ ಜಾತ್ರೆ ಉತ್ಸವಗಳಲ್ಲಿ ಹಿಂದೂ ವ್ಯಾಪಾರಿಗಳು ಹೊರತುಪಡಿಸಿ ಅನ್ಯಕೋಮಿನ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂದು ನಿರ್ಧರಿಸಲಾಗಿದೆ. ಅದರಂತೆಯೇ ನಡೆದುಕೊಳ್ಳಬೇಕು’ ಎಂದು ಒಕ್ಕೂಟದ ಪದಾಧಿಕಾರಿಗಳು ಕೋರಿದ್ದಾರೆ. </p>.<p>‘ಮುಸ್ಲಿಮರು ದೇಶದ ಕಾನೂನಿಗೆ ಗೌರವಿಸುತ್ತಿಲ್ಲ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಾರೆ. ಅಂಥವರಿಗೆ ಹಿಂದೂ ಜಾತ್ರೆ, ಉತ್ಸವಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು’ ಎಂದು ಅವರು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಮಕರ ಸಂಕ್ರಮಣದ ಸಂದರ್ಭದಲ್ಲಿ ವಿಜಯಪುರದಲ್ಲಿ ನಡೆಯುವ ಸಿದ್ದೇಶ್ವರ ಜಾತ್ರೆಯಲ್ಲಿ ಹಿಂದೂಯೇತರರಿಗೆ ಮಳಿಗೆ ಹಾಕಲು ಮತ್ತು ಯಾವುದೇ ರೀತಿಯ ವ್ಯಾಪಾರ ಮಾಡಲು ಅವಕಾಶ ನೀಡಬಾರದು’ ಎಂದು ಹಿಂದೂ ಸಂಘಟನೆಗಳ ಒಕ್ಕೂಟ ಶಾಸಕ ಯತ್ನಾಳ ಅವರಿಗೆ ಮನವಿ ಸಲ್ಲಿಸಿದೆ.</p>.<p>‘ರಾಜ್ಯದ ದೇವಾಲಯ ಹಾಗೂ ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಇತ್ತೀಚಿನ ಸಭೆಯಲ್ಲಿ ಹಿಂದೂ ಜಾತ್ರೆ ಉತ್ಸವಗಳಲ್ಲಿ ಹಿಂದೂ ವ್ಯಾಪಾರಿಗಳು ಹೊರತುಪಡಿಸಿ ಅನ್ಯಕೋಮಿನ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂದು ನಿರ್ಧರಿಸಲಾಗಿದೆ. ಅದರಂತೆಯೇ ನಡೆದುಕೊಳ್ಳಬೇಕು’ ಎಂದು ಒಕ್ಕೂಟದ ಪದಾಧಿಕಾರಿಗಳು ಕೋರಿದ್ದಾರೆ. </p>.<p>‘ಮುಸ್ಲಿಮರು ದೇಶದ ಕಾನೂನಿಗೆ ಗೌರವಿಸುತ್ತಿಲ್ಲ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಾರೆ. ಅಂಥವರಿಗೆ ಹಿಂದೂ ಜಾತ್ರೆ, ಉತ್ಸವಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು’ ಎಂದು ಅವರು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>