<p><strong>ವಿಜಯಪುರ:</strong> ‘ಸಂಘ ಪರಿವಾರ ಬಲಿಷ್ಠವಾದರೆ ತಮ್ಮ ಸೋಲು ಖಚಿತ ಎಂಬ ಭಯದಿಂದ ಪ್ರಿಯಾಂಕ್ ಖರ್ಗೆ ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ‘ ಎಂದು ಶಿವಸೇನೆ (ಏಕನಾಥ ಶಿಂಧೆ ಬಣ) ರಾಜ್ಯ ಘಟಕದ ಅಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮೀಜಿ ಆರೋಪಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಘ ಪರಿವಾರದ ಪಥಸಂಚಲನದಲ್ಲಿ ಭಾಗಿಯಾದ ಪಿಡಿಒಗೆ ಅಮಾನತ್ತು ಮಾಡಲಾಗಿದೆ. ಆದರೆ ಅನೇಕ ಭ್ರಷ್ಟ ಪಿಡಿಒಗಳು ಅವರ ಸುತ್ತ ಸುತ್ತುತ್ತಾರೆ ಅವರನ್ನು ಅಮಾನತ್ತು ಮಾಡಲಿ‘ ಎಂದರು.</p>.<p>‘ಮಾತಿನ ಭರದಲ್ಲಿ ಆಡಿದ ಮಾತುಗಳನ್ನೇ ದೊಡ್ಡದು ಮಾಡಿ ಕನೇರಿ ಶ್ರೀಗಳಿಗೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ. ಅಂಬಿಗರ ಚೌಡಯ್ಯನವರು ಸಹ ಕಟುವಾಗಿ ತಮ್ಮ ವಚನಗಳಲ್ಲಿ ಅನ್ಯಾಯವನ್ನು ವಿರೋಧಿಸಿದ್ದಾರೆ. ಇದೇ ಮಾದರಿಯಲ್ಲಿ ಕನೇರಿ ಶ್ರೀಗಳು ಒಡಕು ಮೂಡಿಸುವುದರ ವಿರುದ್ಧ ಕಿಡಿಕಾರಿದ್ದಾರೆ’ ಎಂದರು.</p>.<p>‘ಲಿಂಗಾಯತ ಮಹಾಸಭೆಗೆ ಸೂತ್ರಧಾರಿಯಾಗಿರುವ ಜಿಲ್ಲೆಯ ಉಸ್ತುವಾರಿ ಸಚಿವರು ಶ್ರೀಗಳಿಗೆ ಕರೆ ಮಾಡಿ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಟ್ಟು ಕ್ಷಮೆ ಕೇಳುವಂತೆ ಹೇಳಿದ್ದರೆ ಈ ವಿಷಯ ದೊಡ್ಡದಾಗುತ್ತಿರಲಿಲ್ಲ. ಆದರೆ, ಹಿಂಬಾಲಕರಿಂದ ಈ ವಿಷಯವನ್ನು ದೊಡ್ಡದು ಮಾಡಿದ್ದು ಯಾರು? ಜಿಲ್ಲೆಯಲ್ಲಿ ಎಗ್ಗಿಲ್ಲದೇ ಗಾಂಜಾ ದೊರಕುತ್ತಿದೆ. ಈ ಎಲ್ಲವುಗಳನ್ನು ಕಡಿವಾಣ ಹಾಕುವ ಬದಲು ಈ ವಿಷಯವನ್ನು ದೊಡ್ಡದು ಮಾಡುವುದು ಅಗತ್ಯವಿರಲಿಲ್ಲ’ ಎಂದರು.</p>.<p>‘ಈ ವಿವಾದವನ್ನು ಕನೇರಿ ಶ್ರೀಗಳು ತಿಳಿಗೊಳಿಸಬೇಕು. ಆ ರೀತಿ ಶಬ್ದ ಬಳಕೆಯನ್ನೂ ನಾನು ಸಹ ಒಪ್ಪುವುದಿಲ್ಲ, ನುಡಿದರೆ ಮುತ್ತಿನ ಹಾರದಂತಿರಬೇಕು ಎನ್ನುವುದು ನನ್ನ ಭಾವನೆ ಕೂಡಾ ಹೌದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಸಂಘ ಪರಿವಾರ ಬಲಿಷ್ಠವಾದರೆ ತಮ್ಮ ಸೋಲು ಖಚಿತ ಎಂಬ ಭಯದಿಂದ ಪ್ರಿಯಾಂಕ್ ಖರ್ಗೆ ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ‘ ಎಂದು ಶಿವಸೇನೆ (ಏಕನಾಥ ಶಿಂಧೆ ಬಣ) ರಾಜ್ಯ ಘಟಕದ ಅಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮೀಜಿ ಆರೋಪಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಘ ಪರಿವಾರದ ಪಥಸಂಚಲನದಲ್ಲಿ ಭಾಗಿಯಾದ ಪಿಡಿಒಗೆ ಅಮಾನತ್ತು ಮಾಡಲಾಗಿದೆ. ಆದರೆ ಅನೇಕ ಭ್ರಷ್ಟ ಪಿಡಿಒಗಳು ಅವರ ಸುತ್ತ ಸುತ್ತುತ್ತಾರೆ ಅವರನ್ನು ಅಮಾನತ್ತು ಮಾಡಲಿ‘ ಎಂದರು.</p>.<p>‘ಮಾತಿನ ಭರದಲ್ಲಿ ಆಡಿದ ಮಾತುಗಳನ್ನೇ ದೊಡ್ಡದು ಮಾಡಿ ಕನೇರಿ ಶ್ರೀಗಳಿಗೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ. ಅಂಬಿಗರ ಚೌಡಯ್ಯನವರು ಸಹ ಕಟುವಾಗಿ ತಮ್ಮ ವಚನಗಳಲ್ಲಿ ಅನ್ಯಾಯವನ್ನು ವಿರೋಧಿಸಿದ್ದಾರೆ. ಇದೇ ಮಾದರಿಯಲ್ಲಿ ಕನೇರಿ ಶ್ರೀಗಳು ಒಡಕು ಮೂಡಿಸುವುದರ ವಿರುದ್ಧ ಕಿಡಿಕಾರಿದ್ದಾರೆ’ ಎಂದರು.</p>.<p>‘ಲಿಂಗಾಯತ ಮಹಾಸಭೆಗೆ ಸೂತ್ರಧಾರಿಯಾಗಿರುವ ಜಿಲ್ಲೆಯ ಉಸ್ತುವಾರಿ ಸಚಿವರು ಶ್ರೀಗಳಿಗೆ ಕರೆ ಮಾಡಿ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಟ್ಟು ಕ್ಷಮೆ ಕೇಳುವಂತೆ ಹೇಳಿದ್ದರೆ ಈ ವಿಷಯ ದೊಡ್ಡದಾಗುತ್ತಿರಲಿಲ್ಲ. ಆದರೆ, ಹಿಂಬಾಲಕರಿಂದ ಈ ವಿಷಯವನ್ನು ದೊಡ್ಡದು ಮಾಡಿದ್ದು ಯಾರು? ಜಿಲ್ಲೆಯಲ್ಲಿ ಎಗ್ಗಿಲ್ಲದೇ ಗಾಂಜಾ ದೊರಕುತ್ತಿದೆ. ಈ ಎಲ್ಲವುಗಳನ್ನು ಕಡಿವಾಣ ಹಾಕುವ ಬದಲು ಈ ವಿಷಯವನ್ನು ದೊಡ್ಡದು ಮಾಡುವುದು ಅಗತ್ಯವಿರಲಿಲ್ಲ’ ಎಂದರು.</p>.<p>‘ಈ ವಿವಾದವನ್ನು ಕನೇರಿ ಶ್ರೀಗಳು ತಿಳಿಗೊಳಿಸಬೇಕು. ಆ ರೀತಿ ಶಬ್ದ ಬಳಕೆಯನ್ನೂ ನಾನು ಸಹ ಒಪ್ಪುವುದಿಲ್ಲ, ನುಡಿದರೆ ಮುತ್ತಿನ ಹಾರದಂತಿರಬೇಕು ಎನ್ನುವುದು ನನ್ನ ಭಾವನೆ ಕೂಡಾ ಹೌದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>