<p><strong>ವಿಜಯಪುರ:</strong> ಐತಿಹಾಸಿಕ ಸ್ಮಾರಕಗಳು ದೇಶದ ಅಮೂಲ್ಯ ಸ್ವತ್ತಾಗಿದ್ದು, ಅವುಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಡಾ.ಎನ್.ಪಿ. ಬಿರಾದಾರ ಹೇಳಿದರು.</p>.<p>ವಿದ್ಯಾವರ್ಧಕ ಸಂಘದ ಬನ್ಸಿಲಾಲ್ ವಿಠ್ಠಲ್ ದಾಸ್ ದರ್ಬಾರ್ ಪದವಿ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ‘ಐತಿಹಾಸಿಕ ಸ್ಮಾರಕಗಳ ರಕ್ಷಣೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚೀನ ಕಾಲದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ನಿರ್ಮಿಸಿದ ಹಲವು ಸ್ಮಾರಕಗಳು, ಗುಡಿ-ಕೆರೆ-ಕಟ್ಟೆಗಳು, ಮಸೀದಿಗಳು ನಮ್ಮ ದೇಶದ ಪರಂಪರೆ ಮತ್ತು ಸಂಸ್ಕೃತಿಯ ಪ್ರತೀಕವಾಗಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾಗಿದ್ದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.</p>.<p>ಪ್ರೊ.ರಾಜು ಕಪಾಲಿ ಮಾತನಾಡಿ, ಗುಮ್ಮಟ ನಗರಿ ಎಂದು ಪ್ರಸಿದ್ಧವಾದ ವಿಜಯಪುರದಲ್ಲಿ ಸುಮಾರು ಐತಿಹಾಸಿಕ ಸ್ಥಳಗಳಿದ್ದು ಅವುಗಳೆಲ್ಲವನ್ನು ಸಂರಕ್ಷಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.</p>.<p>ಎನ್ಎಸ್ಎಸ್ ಸಹಾಯಕ ಅಧಿಕಾರಿ ಸುನಿತಾ ಅವರಸಂಗ ಹಾಗೂ ಸಂತೋಷ, ವಿದ್ಯಾರ್ಥಿಗಳು ಉಪನ್ಯಾಸಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಐತಿಹಾಸಿಕ ಸ್ಮಾರಕಗಳು ದೇಶದ ಅಮೂಲ್ಯ ಸ್ವತ್ತಾಗಿದ್ದು, ಅವುಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಡಾ.ಎನ್.ಪಿ. ಬಿರಾದಾರ ಹೇಳಿದರು.</p>.<p>ವಿದ್ಯಾವರ್ಧಕ ಸಂಘದ ಬನ್ಸಿಲಾಲ್ ವಿಠ್ಠಲ್ ದಾಸ್ ದರ್ಬಾರ್ ಪದವಿ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ‘ಐತಿಹಾಸಿಕ ಸ್ಮಾರಕಗಳ ರಕ್ಷಣೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚೀನ ಕಾಲದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ನಿರ್ಮಿಸಿದ ಹಲವು ಸ್ಮಾರಕಗಳು, ಗುಡಿ-ಕೆರೆ-ಕಟ್ಟೆಗಳು, ಮಸೀದಿಗಳು ನಮ್ಮ ದೇಶದ ಪರಂಪರೆ ಮತ್ತು ಸಂಸ್ಕೃತಿಯ ಪ್ರತೀಕವಾಗಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾಗಿದ್ದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.</p>.<p>ಪ್ರೊ.ರಾಜು ಕಪಾಲಿ ಮಾತನಾಡಿ, ಗುಮ್ಮಟ ನಗರಿ ಎಂದು ಪ್ರಸಿದ್ಧವಾದ ವಿಜಯಪುರದಲ್ಲಿ ಸುಮಾರು ಐತಿಹಾಸಿಕ ಸ್ಥಳಗಳಿದ್ದು ಅವುಗಳೆಲ್ಲವನ್ನು ಸಂರಕ್ಷಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.</p>.<p>ಎನ್ಎಸ್ಎಸ್ ಸಹಾಯಕ ಅಧಿಕಾರಿ ಸುನಿತಾ ಅವರಸಂಗ ಹಾಗೂ ಸಂತೋಷ, ವಿದ್ಯಾರ್ಥಿಗಳು ಉಪನ್ಯಾಸಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>