<p><strong>ಸಿಂದಗಿ</strong>: ರಾಜ್ಯಮಟ್ಟದ ಶಿಕ್ಷಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿಂದಗಿಯ ಸಾಹಿತಿ ಹ.ಮ. ಪೂಜಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಗೌರವ ಆಮಂತ್ರಣ ನೀಡಲಾಗಿದೆ. ಈ ಸಮ್ಮೇಳನದಲ್ಲಿ ರಾಷ್ಟ್ರಮಟ್ಟದ ಶಿಕ್ಷಣ ತಜ್ಞ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳುವರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.</p>.<p>ಇಲ್ಲಿಯ ಸಾಹಿತಿ ಹ.ಮ.ಪೂಜಾರ ಮನೆಯಲ್ಲಿ ಭಾನುವಾರ ನಡೆದ ಗೌರವ ಆಮಂತ್ರಣ ಸಭೆಯಲ್ಲಿ ಮಾತನಾಡಿದ ಅವರು, ಅ.12ರಂದು ಬಾಗಲಕೋಟೆಯಲ್ಲಿ ಶಿಕ್ಷಕ ಸಾಹಿತಿಗಳ ಪ್ರಥಮ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.</p>.<p>ಜಾನಪದ ವಿದ್ವಾಂಸ ಎಂ.ಎಂ.ಪಡಶೆಟ್ಟಿ ಮಾತನಾಡಿ, ಬಾಗಲಕೋಟೆ-ವಿಜಯಪುರ ಆಡಳಿತಾತ್ಮಕವಾಗಿ ಭಿನ್ನ ಜಿಲ್ಲೆಗಳಾದರೂ ಭಾವನಾತ್ಮಕವಾಗಿ ಅವಳಿ ಜಿಲ್ಲೆಗಳಾಗಿವೆ. ಅಂತೆಯೇ ಬಾಗಲಕೋಟೆಯಲ್ಲಿ ನಡೆಯಲಿರುವ ಶಿಕ್ಷಕ ಸಾಹಿತಿಗಳ ಸಮ್ಮೇಳನದ ಅಧ್ಯಕ್ಷರನ್ನಾಗಿ ಹ.ಮ.ಪೂಜಾರ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನೀಯ ಕಾರ್ಯ. ಮಕ್ಕಳ ಸಾಹಿತಿಗಳ ತವರೂರು ವಿಜಯಪುರ ಜಿಲ್ಲೆ ಎಂದು ತಿಳಿಸಿದರು.</p>.<p>ಮಕ್ಕಳ ಸಾಹಿತ್ಯ ಸಂಗಮ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಎ.ಆರ್. ಹೆಗ್ಗನದೊಡ್ಡಿ ಮಾತನಾಡಿ, ಹ.ಮ.ಪೂಜಾರ ಅವರು ಶಿಕ್ಷಣ ಹಾಗೂ ಸಾಹಿತ್ಯ ರಂಗದಲ್ಲಿ ಅಗಾಧ ಕೊಡುಗೆ ಸಲ್ಲಿಸಿರುವುದನ್ನು ಗುರುತಿಸಿ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ ಎಂದರು.</p>.<p>ಬಾಗಲಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ, ಸಾಹಿತಿ ಹ.ಮ.ಪೂಜಾರ ಮಾತನಾಡಿದರು.</p>.<p>ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಸಿದ್ರಾಮ ಶಿರೋಳ, ಶಿರೂರ ಹೋಬಳ್ಳಿ ಪರಿಷತ್ತು ಅಧ್ಯಕ್ಷ ಸಂಜಯ ನಡುವಿನಮನಿ, ಸಿಂದಗಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಚನ್ನಪ್ಪ ಕತ್ತಿ, ಶಿಕ್ಷಕ ಸಾಹಿತಿಗಳಾದ ಸಾತಿಹಾಳ, ಶಿವಕುಮಾರ ಶಿವಸಿಂಪಿ, ರಾಜೂ ಕೊಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ರಾಜ್ಯಮಟ್ಟದ ಶಿಕ್ಷಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿಂದಗಿಯ ಸಾಹಿತಿ ಹ.ಮ. ಪೂಜಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಗೌರವ ಆಮಂತ್ರಣ ನೀಡಲಾಗಿದೆ. ಈ ಸಮ್ಮೇಳನದಲ್ಲಿ ರಾಷ್ಟ್ರಮಟ್ಟದ ಶಿಕ್ಷಣ ತಜ್ಞ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳುವರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.</p>.<p>ಇಲ್ಲಿಯ ಸಾಹಿತಿ ಹ.ಮ.ಪೂಜಾರ ಮನೆಯಲ್ಲಿ ಭಾನುವಾರ ನಡೆದ ಗೌರವ ಆಮಂತ್ರಣ ಸಭೆಯಲ್ಲಿ ಮಾತನಾಡಿದ ಅವರು, ಅ.12ರಂದು ಬಾಗಲಕೋಟೆಯಲ್ಲಿ ಶಿಕ್ಷಕ ಸಾಹಿತಿಗಳ ಪ್ರಥಮ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.</p>.<p>ಜಾನಪದ ವಿದ್ವಾಂಸ ಎಂ.ಎಂ.ಪಡಶೆಟ್ಟಿ ಮಾತನಾಡಿ, ಬಾಗಲಕೋಟೆ-ವಿಜಯಪುರ ಆಡಳಿತಾತ್ಮಕವಾಗಿ ಭಿನ್ನ ಜಿಲ್ಲೆಗಳಾದರೂ ಭಾವನಾತ್ಮಕವಾಗಿ ಅವಳಿ ಜಿಲ್ಲೆಗಳಾಗಿವೆ. ಅಂತೆಯೇ ಬಾಗಲಕೋಟೆಯಲ್ಲಿ ನಡೆಯಲಿರುವ ಶಿಕ್ಷಕ ಸಾಹಿತಿಗಳ ಸಮ್ಮೇಳನದ ಅಧ್ಯಕ್ಷರನ್ನಾಗಿ ಹ.ಮ.ಪೂಜಾರ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನೀಯ ಕಾರ್ಯ. ಮಕ್ಕಳ ಸಾಹಿತಿಗಳ ತವರೂರು ವಿಜಯಪುರ ಜಿಲ್ಲೆ ಎಂದು ತಿಳಿಸಿದರು.</p>.<p>ಮಕ್ಕಳ ಸಾಹಿತ್ಯ ಸಂಗಮ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಎ.ಆರ್. ಹೆಗ್ಗನದೊಡ್ಡಿ ಮಾತನಾಡಿ, ಹ.ಮ.ಪೂಜಾರ ಅವರು ಶಿಕ್ಷಣ ಹಾಗೂ ಸಾಹಿತ್ಯ ರಂಗದಲ್ಲಿ ಅಗಾಧ ಕೊಡುಗೆ ಸಲ್ಲಿಸಿರುವುದನ್ನು ಗುರುತಿಸಿ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ ಎಂದರು.</p>.<p>ಬಾಗಲಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ, ಸಾಹಿತಿ ಹ.ಮ.ಪೂಜಾರ ಮಾತನಾಡಿದರು.</p>.<p>ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಸಿದ್ರಾಮ ಶಿರೋಳ, ಶಿರೂರ ಹೋಬಳ್ಳಿ ಪರಿಷತ್ತು ಅಧ್ಯಕ್ಷ ಸಂಜಯ ನಡುವಿನಮನಿ, ಸಿಂದಗಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಚನ್ನಪ್ಪ ಕತ್ತಿ, ಶಿಕ್ಷಕ ಸಾಹಿತಿಗಳಾದ ಸಾತಿಹಾಳ, ಶಿವಕುಮಾರ ಶಿವಸಿಂಪಿ, ರಾಜೂ ಕೊಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>