ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಗುರುವಾರ ನಡೆದ 19ನೇ ಕಾರ್ಗಿಲ್ ವಿಜಯೋತ್ಸವದಲ್ಲಿ ಮಾತನಾಡಿದ ಯತ್ನಾಳ ‘ಈ ನೆಲದ ಅನ್ನ, ನೀರು, ಗಾಳಿ ಸೇವಿಸಿ ದೇಶದ ವಿರುದ್ಧವೇ ಪಿತೂರಿ ನಡೆಸುವವರ ಸಂಖ್ಯೆ ಹೆಚ್ಚಿದೆ. ಕಾಶ್ಮೀರದಲ್ಲಿ ಭಾರತ ವಿರೋಧಿ ಘೋಷಣೆ ಕೂಗುವುದು ಹೆಚ್ಚುವ ಜತೆಯಲ್ಲೇ ಸೈನಿಕರ ಮೇಲೆ ಕಲ್ಲು ತೂರುವುದು ನಡೆಯುತ್ತಿದೆ. ಇದನ್ನು ಎಲ್ಲರೂ ಖಂಡಿಸಬೇಕು’ ಎಂದರು.