<p><strong>ಹೊರ್ತಿ:</strong> ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಗುಡ್ಡಾಪುರ ದಾನಮ್ಮದೇವಿ ಕಾರ್ತೀಕ ಮಾಸದ ಜಾತ್ರೆಯು ನ.18ರಿಂದ 21ರವರೆಗೆ ನಡೆಯಲಿವೆ.</p>.<p>ಗುಡ್ಡಾಪುರದ ಸಂಸ್ಥಾನ ಹಿರೇಮಠದ ಗುರುಪಾದ ಸ್ವಾಮೀಜಿ ಹಾಗೂ ಗೌಡಗಾಂವ ಸಂಸ್ಥಾನ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರು, ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು.</p>.<p>ನ.18ರಂದು ಜಾತ್ರೆ ಆರಂಭದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಗುಡ್ಡಾಪುರದ ಗುರುಪಾದ ಶಿವಾಚಾರ್ಯರು, ಗೌಡಗಾಂವದ ಜಯಸಿದ್ದೇಶ್ವರ ಶಿವಾಚಾರ್ಯರಿಂದ ದಾಸೋಹ ಪೂಜಾ ಕಾರ್ಯಕ್ರಮ ನಡೆಯಲಿದೆ.</p>.<p>ನ.19ರಂದು ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ ಸಂಜೆ 8 ಗಂಟೆಗೆ ಕಾರ್ತೀಕ ದೀಪೋತ್ಸವ, ನಂತರ ದೇವಿಯ ಪಲ್ಲಕ್ಕಿ ಉತ್ಸವ ಜರುಗಲಿದೆ. ನ.20ರಂದು ಸಂಜೆ 5 ಗಂಟೆಗೆ ದೇವಿಯ ರಥೋತ್ಸವ ನಡೆಯಲಿದೆ. ಕರ್ನಾಟಕ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಜತ್ತ ಶಾಸಕ ಗೋಪಿಚಂದ ಪಡಳಕರ, ಸೋಲಾಪುರ ಶಾಸಕ ವಿಜಯಕುಮಾರ ದೇಶಮುಖ ಭಾಗವಹಿಸುವರು. </p>.<p>ಕಾರ್ಯಕ್ರಮದ ಬಳಿಕ ಸಂಜೆ 8 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಸತ್ಕಾರ ಸಮಾರಂಭ ಜರುಗಲಿದೆ ಎಂದು ಗುಡ್ಡಾಪುರದ ದಾನಮ್ಮದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ ಮೊ: 80070 78740, 82752 55109 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊರ್ತಿ:</strong> ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಗುಡ್ಡಾಪುರ ದಾನಮ್ಮದೇವಿ ಕಾರ್ತೀಕ ಮಾಸದ ಜಾತ್ರೆಯು ನ.18ರಿಂದ 21ರವರೆಗೆ ನಡೆಯಲಿವೆ.</p>.<p>ಗುಡ್ಡಾಪುರದ ಸಂಸ್ಥಾನ ಹಿರೇಮಠದ ಗುರುಪಾದ ಸ್ವಾಮೀಜಿ ಹಾಗೂ ಗೌಡಗಾಂವ ಸಂಸ್ಥಾನ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರು, ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು.</p>.<p>ನ.18ರಂದು ಜಾತ್ರೆ ಆರಂಭದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಗುಡ್ಡಾಪುರದ ಗುರುಪಾದ ಶಿವಾಚಾರ್ಯರು, ಗೌಡಗಾಂವದ ಜಯಸಿದ್ದೇಶ್ವರ ಶಿವಾಚಾರ್ಯರಿಂದ ದಾಸೋಹ ಪೂಜಾ ಕಾರ್ಯಕ್ರಮ ನಡೆಯಲಿದೆ.</p>.<p>ನ.19ರಂದು ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ ಸಂಜೆ 8 ಗಂಟೆಗೆ ಕಾರ್ತೀಕ ದೀಪೋತ್ಸವ, ನಂತರ ದೇವಿಯ ಪಲ್ಲಕ್ಕಿ ಉತ್ಸವ ಜರುಗಲಿದೆ. ನ.20ರಂದು ಸಂಜೆ 5 ಗಂಟೆಗೆ ದೇವಿಯ ರಥೋತ್ಸವ ನಡೆಯಲಿದೆ. ಕರ್ನಾಟಕ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಜತ್ತ ಶಾಸಕ ಗೋಪಿಚಂದ ಪಡಳಕರ, ಸೋಲಾಪುರ ಶಾಸಕ ವಿಜಯಕುಮಾರ ದೇಶಮುಖ ಭಾಗವಹಿಸುವರು. </p>.<p>ಕಾರ್ಯಕ್ರಮದ ಬಳಿಕ ಸಂಜೆ 8 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಸತ್ಕಾರ ಸಮಾರಂಭ ಜರುಗಲಿದೆ ಎಂದು ಗುಡ್ಡಾಪುರದ ದಾನಮ್ಮದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ ಮೊ: 80070 78740, 82752 55109 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>