<p><strong>ಹೊರ್ತಿ</strong>: ಹೊರ್ತಿ ಈ ಗ್ರಾಮವು ಸುಮಾರು 15 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದು, ವಿಜಯಪುರ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿ -52 ರಲ್ಲಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಹಾಗೂ ವೈದ್ಯರ ಕೊರತೆ ಇರುವುದರಿಂದ ಸ್ಥಳೀಯ ಹಾಗೂ ಸುತ್ತಲೀನ ಹತ್ತಾರು ಗ್ರಾಮಗಳ ಜನರಿಗೆ ಸೂಕ್ತ ಆರೋಗ್ಯ ಸೌಲಭ್ಯ ಸಿಗುತ್ತಿಲ್ಲ.</p>.<p>‘ಹೊರ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಈ ಹಿಂದೆ ಎಂಬಿಬಿಎಸ್ ವೈದ್ಯರಿದ್ದರು. ಆಗ ಜ್ವರ ಮೈ-ಕೈ ನೋವು ಬಂದು ಬಳಲಿದರೆ ಒಂದು ಇಂಜೆಕ್ಷನ್ ಮತ್ತು 3 ದಿನಗಳ ಮಾತ್ರೆ ಕೊಟ್ಟು ಕಳುಹಿಸುತ್ತಿದ್ದರು. ಅತಿ ಅವಶ್ಯಕತೆ ಇದ್ದವರಿಗೆ ಸಲೈನ್ ಹಚ್ಚುತ್ತಿದ್ದರು. ಕೂಡಲೇ ಆರಾಮವಾಗುತ್ತಿತ್ತು. ಈಗ ಅದೂ ಸಾಧ್ಯವಿಲ್ಲದಂತಾಗಿದೆ’ ಎಂದು ಶಿವಲಿಂಗಪ್ಪ ಶಿ.ಪೂಜಾರಿ ಬೇಸರ ವ್ಯಕ್ತ ಪಡಿಸಿದರು.</p>.<p>‘ಒಬ್ಬರು ಎಂಬಿಬಿಎಸ್ ವೈದ್ಯರು, ಲ್ಯಾಬ್ ಟೆಕ್ನಿಶಿಯನ್ , ಒರ್ವ ಕಿರಿಯ ಆರೋಗ್ಯ ಸಹಾಯಕಿ ಇಲ್ಲದೇ ಇರುವುದರಿಂದ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಚಿಕಿತ್ಸಾ ಸೇವೆ ಸಿಗದೇ ಪರದಾಡುವಂತಾಗಿದೆ. ಬಾಣಂತಿಯರು ಹಾಗೂ ಬಡರೋಗಿಗಳು ಸರಿಯಾದ ಚಿಕಿತ್ಸೆಗಾಗಿ ದೂರದ ವಿಜಯಪುರ, ಚಡಚಣ, ఇంಡಿ ಆಸ್ಪತ್ರೆಗೆ ತೆರಳುವಂತಾಗಿದೆ’ ಎಂದು- ಹೊರ್ತಿ ಗ್ರಾಮದ ಆಟಪ ಚಾಲಕ ಶರಣಬಸು ಎಂ. ಡೋಣಗಿ, ಕಾಂತು ರೂಗಿ ಮತ್ತು ಶಿವಲಿಂಗಪ್ಪ ಶಿ.ಪೂಜಾರಿಬೇಸರ ವ್ಯಕ್ತ ಪಡಿಸಿದರು.</p>.<p>ಹೊರ್ತಿ ಸರ್ಕಾರಿ ಆಸ್ಪತ್ರೆಗೆ ಎಂಬಿಬಿಎಸ್ ವೈದ್ಯ ಲ್ಯಾಬ್ ಟೆಕ್ನಿಶಿಯನ್, ಶುಶ್ರೂಕಿಯರ ಕೊರತೆ ದೂರದ ವಿಜಯಪುರ, ಚಡಚಣ, ఇంಡಿಗೆ ತೆರಳುವ ಅನಿವಾರ್ಯತೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊರ್ತಿ</strong>: ಹೊರ್ತಿ ಈ ಗ್ರಾಮವು ಸುಮಾರು 15 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದು, ವಿಜಯಪುರ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿ -52 ರಲ್ಲಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಹಾಗೂ ವೈದ್ಯರ ಕೊರತೆ ಇರುವುದರಿಂದ ಸ್ಥಳೀಯ ಹಾಗೂ ಸುತ್ತಲೀನ ಹತ್ತಾರು ಗ್ರಾಮಗಳ ಜನರಿಗೆ ಸೂಕ್ತ ಆರೋಗ್ಯ ಸೌಲಭ್ಯ ಸಿಗುತ್ತಿಲ್ಲ.</p>.<p>‘ಹೊರ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಈ ಹಿಂದೆ ಎಂಬಿಬಿಎಸ್ ವೈದ್ಯರಿದ್ದರು. ಆಗ ಜ್ವರ ಮೈ-ಕೈ ನೋವು ಬಂದು ಬಳಲಿದರೆ ಒಂದು ಇಂಜೆಕ್ಷನ್ ಮತ್ತು 3 ದಿನಗಳ ಮಾತ್ರೆ ಕೊಟ್ಟು ಕಳುಹಿಸುತ್ತಿದ್ದರು. ಅತಿ ಅವಶ್ಯಕತೆ ಇದ್ದವರಿಗೆ ಸಲೈನ್ ಹಚ್ಚುತ್ತಿದ್ದರು. ಕೂಡಲೇ ಆರಾಮವಾಗುತ್ತಿತ್ತು. ಈಗ ಅದೂ ಸಾಧ್ಯವಿಲ್ಲದಂತಾಗಿದೆ’ ಎಂದು ಶಿವಲಿಂಗಪ್ಪ ಶಿ.ಪೂಜಾರಿ ಬೇಸರ ವ್ಯಕ್ತ ಪಡಿಸಿದರು.</p>.<p>‘ಒಬ್ಬರು ಎಂಬಿಬಿಎಸ್ ವೈದ್ಯರು, ಲ್ಯಾಬ್ ಟೆಕ್ನಿಶಿಯನ್ , ಒರ್ವ ಕಿರಿಯ ಆರೋಗ್ಯ ಸಹಾಯಕಿ ಇಲ್ಲದೇ ಇರುವುದರಿಂದ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಚಿಕಿತ್ಸಾ ಸೇವೆ ಸಿಗದೇ ಪರದಾಡುವಂತಾಗಿದೆ. ಬಾಣಂತಿಯರು ಹಾಗೂ ಬಡರೋಗಿಗಳು ಸರಿಯಾದ ಚಿಕಿತ್ಸೆಗಾಗಿ ದೂರದ ವಿಜಯಪುರ, ಚಡಚಣ, ఇంಡಿ ಆಸ್ಪತ್ರೆಗೆ ತೆರಳುವಂತಾಗಿದೆ’ ಎಂದು- ಹೊರ್ತಿ ಗ್ರಾಮದ ಆಟಪ ಚಾಲಕ ಶರಣಬಸು ಎಂ. ಡೋಣಗಿ, ಕಾಂತು ರೂಗಿ ಮತ್ತು ಶಿವಲಿಂಗಪ್ಪ ಶಿ.ಪೂಜಾರಿಬೇಸರ ವ್ಯಕ್ತ ಪಡಿಸಿದರು.</p>.<p>ಹೊರ್ತಿ ಸರ್ಕಾರಿ ಆಸ್ಪತ್ರೆಗೆ ಎಂಬಿಬಿಎಸ್ ವೈದ್ಯ ಲ್ಯಾಬ್ ಟೆಕ್ನಿಶಿಯನ್, ಶುಶ್ರೂಕಿಯರ ಕೊರತೆ ದೂರದ ವಿಜಯಪುರ, ಚಡಚಣ, ఇంಡಿಗೆ ತೆರಳುವ ಅನಿವಾರ್ಯತೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>