<p><strong>ವಿಜಯಪುರ</strong>: ನಗರದ ವಿವಿಧೆಡೆ ಇತ್ತೀಚೆಗೆ ಹಗಲಿನಲ್ಲೇ ಮನೆ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ನಗರದ ಹೌಸಿಂಗ್ ಬೋರ್ಡ್ ಬಳಿ ಅನುಮಾನಾಸ್ಪದವಾಗಿ ಅಟೋದಲ್ಲಿ ತಿರುಗಾಡುತ್ತಿದ್ದ ಆರೋಪಿಗಳನ್ನು ಹಿಡಿದು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ, ಒಟ್ಟು ಮೂರು ಜನರು ಸೇರಿಕೊಂಡು ಮನೆಕಳ್ಳತನ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.</p>.<p>ವಿಜಯಪುರ ನಗರದ ಝಂಡಾ ಕಟ್ಟೆಯ ಹಳಕೇರಿ ಗಲ್ಲಿಯ ಕೂಲಿ ಕಾರ್ಮಿಕ ಸಮೀರ ಇನಾಮದಾರ(23) ಮತ್ತು ಶಾಪೇಟೆಯ ಆಟೊ ಚಾಲಕ ಹಸನಡೊಂಗ್ರಿ ಮುಲ್ಲಾ(33) ಹಾಗೂ ನಿಸ್ಸಾರ ಮಡ್ಡಿಯ ಶಫೀಕ್ ಅಹ್ಮದ್ ಇನಾಮದಾರ (49) ಬಂಧಿತ ಆರೋಪಿಗಳಾಗಿದ್ದಾರೆ.</p>.<p>ಬಂಧಿತರಿಂದ ಒಟ್ಟು 65 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಬಜಾಜ್ ಕಂಪನಿಯ ಆಟೊ ರಿಕ್ಷಾ ಹಾಗೂ ಒಂದು ಕಬ್ಬಿಣದ ರಾಡ್ ಸೇರಿದಂತೆ ಒಟ್ಟು ₹8.37 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದ ವಿವಿಧೆಡೆ ಇತ್ತೀಚೆಗೆ ಹಗಲಿನಲ್ಲೇ ಮನೆ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ನಗರದ ಹೌಸಿಂಗ್ ಬೋರ್ಡ್ ಬಳಿ ಅನುಮಾನಾಸ್ಪದವಾಗಿ ಅಟೋದಲ್ಲಿ ತಿರುಗಾಡುತ್ತಿದ್ದ ಆರೋಪಿಗಳನ್ನು ಹಿಡಿದು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ, ಒಟ್ಟು ಮೂರು ಜನರು ಸೇರಿಕೊಂಡು ಮನೆಕಳ್ಳತನ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.</p>.<p>ವಿಜಯಪುರ ನಗರದ ಝಂಡಾ ಕಟ್ಟೆಯ ಹಳಕೇರಿ ಗಲ್ಲಿಯ ಕೂಲಿ ಕಾರ್ಮಿಕ ಸಮೀರ ಇನಾಮದಾರ(23) ಮತ್ತು ಶಾಪೇಟೆಯ ಆಟೊ ಚಾಲಕ ಹಸನಡೊಂಗ್ರಿ ಮುಲ್ಲಾ(33) ಹಾಗೂ ನಿಸ್ಸಾರ ಮಡ್ಡಿಯ ಶಫೀಕ್ ಅಹ್ಮದ್ ಇನಾಮದಾರ (49) ಬಂಧಿತ ಆರೋಪಿಗಳಾಗಿದ್ದಾರೆ.</p>.<p>ಬಂಧಿತರಿಂದ ಒಟ್ಟು 65 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಬಜಾಜ್ ಕಂಪನಿಯ ಆಟೊ ರಿಕ್ಷಾ ಹಾಗೂ ಒಂದು ಕಬ್ಬಿಣದ ರಾಡ್ ಸೇರಿದಂತೆ ಒಟ್ಟು ₹8.37 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>