<p><strong>ವಿಜಯಪುರ: </strong>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಜಿಲ್ಲೆಯ ರೈತರು ಇಲ್ಲಿನ ಸಿಂದಗಿ ಬೈಪಾಸ್ ಬಳಿ ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218 ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಕರ್ನಾಟಕ ರಾಜ್ಯ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ಪ್ರಾಂತ ರೈತ ಸಂಘಟನೆ, ಹಸಿರು ಸೇನೆ, ಎಐಡಿಎಸ್ ಒ, ಸಿಐಟಿಯು, ಎಐಕೆಕೆಎಂಎಸ್, ಎಐಯುಟಿಯುಸಿ, ಅಖಿಲ ಭಾರತ ಕಿಶಾನ್ ಸಭಾ ಮತ್ತಿತರ ಸಂಘಟನೆಗಳು ಹೆದ್ದಾರಿ ತಡೆಯಲ್ಲಿ ಭಾಗವಹಿಸಿವೆ.</p>.<p>ಜೈಜವಾನ್, ಜೈಕಿಸಾನ್ ಘೋಷಣೆಗಳು ಮೊಳಗುತ್ತಿವೆ. ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.</p>.<p>ರೈತ ಮುಖಂಡರಾದ ಭೀಮಶಿ ಕಲಾದಗಿ, ಪ್ರಕಾಶ ಹಿಟ್ನಳ್ಳಿ, ಬಿ. ಭಗವಾನ್ ರೆಡ್ಡಿ, ಶಕ್ತಿಕುಮಾರ್ ಉಕುಮನಾಳ, ಮಲ್ಲಿಕಾರ್ಜುನ ಎಚ್.ಟಿ. ಅಕ್ರಮ್ ಮಾಶಾಳಕರ, ಸಿದ್ಧಲಿಂಗ ಬಾಗೇವಾಡಿ, ಸುರೇಖಾ ಕಡಪಟ್ಟಿ, ಸುರೇಖಾ ರಜಪೂತ, ಎಚ್.ಟಿ.ಭರತ್ ಜುಮಾರ್, ಬಾಳು ಜೇವೂರ, ಚಂದ್ರೇಗೌಡ ಮತ್ತಿತರರು ರಸ್ತೆ ತಡೆಯಲ್ಲಿ ಭಾಗವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಜಿಲ್ಲೆಯ ರೈತರು ಇಲ್ಲಿನ ಸಿಂದಗಿ ಬೈಪಾಸ್ ಬಳಿ ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218 ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಕರ್ನಾಟಕ ರಾಜ್ಯ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ಪ್ರಾಂತ ರೈತ ಸಂಘಟನೆ, ಹಸಿರು ಸೇನೆ, ಎಐಡಿಎಸ್ ಒ, ಸಿಐಟಿಯು, ಎಐಕೆಕೆಎಂಎಸ್, ಎಐಯುಟಿಯುಸಿ, ಅಖಿಲ ಭಾರತ ಕಿಶಾನ್ ಸಭಾ ಮತ್ತಿತರ ಸಂಘಟನೆಗಳು ಹೆದ್ದಾರಿ ತಡೆಯಲ್ಲಿ ಭಾಗವಹಿಸಿವೆ.</p>.<p>ಜೈಜವಾನ್, ಜೈಕಿಸಾನ್ ಘೋಷಣೆಗಳು ಮೊಳಗುತ್ತಿವೆ. ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.</p>.<p>ರೈತ ಮುಖಂಡರಾದ ಭೀಮಶಿ ಕಲಾದಗಿ, ಪ್ರಕಾಶ ಹಿಟ್ನಳ್ಳಿ, ಬಿ. ಭಗವಾನ್ ರೆಡ್ಡಿ, ಶಕ್ತಿಕುಮಾರ್ ಉಕುಮನಾಳ, ಮಲ್ಲಿಕಾರ್ಜುನ ಎಚ್.ಟಿ. ಅಕ್ರಮ್ ಮಾಶಾಳಕರ, ಸಿದ್ಧಲಿಂಗ ಬಾಗೇವಾಡಿ, ಸುರೇಖಾ ಕಡಪಟ್ಟಿ, ಸುರೇಖಾ ರಜಪೂತ, ಎಚ್.ಟಿ.ಭರತ್ ಜುಮಾರ್, ಬಾಳು ಜೇವೂರ, ಚಂದ್ರೇಗೌಡ ಮತ್ತಿತರರು ರಸ್ತೆ ತಡೆಯಲ್ಲಿ ಭಾಗವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>