ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಮಾತನಾಡಿ, ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕೇಂದ್ರ ಸರ್ಕಾರ ಸ್ವಾಮ್ಯದ ವ್ಯಾಪಕೋ ಸಂಸ್ಥೆ ಡೋಣಿ ನದಿಯನ್ನು ಸರ್ವೇ ಮಾಡಿ, ಸವಿವರ ವರದಿ ಪಡೆಯಲಾಗಿತ್ತು.ಅದರನ್ವಯ ಅಪಾರ ಮೊತ್ತದ ಯೋಜನೆಯ ಪ್ರಸ್ತಾವನೆ ವೆಚ್ಚದಾಯಕವಾಗಿರುವ ಕಾರಣ ಪ್ರವಾಹ ನಿಯಂತ್ರಣ ಯೋಜನೆಯಡಿ ಹಣ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇಳಲಾಗಿತ್ತು. ಪ್ರಸ್ತಾವನೆ ಕೇಂದ್ರದಲ್ಲಿಯೇ ಬಾಕಿ ಉಳಿದಿದೆ. ಹೊಸ ದರಪಟ್ಟಿಯ ಅನುಸಾರ ಇನ್ನೊಂದು ಪ್ರಸ್ತಾವನೆಯನ್ನು ಜಲತಜ್ಞ ಡಾ.ವಿ.ಪಿ.ಹುಗ್ಗಿ ಅವರ ನೇತೃತ್ವದಲ್ಲಿ ತಯಾರಿಸಿ ನೀಡಲಾಗುವುದು. ತಾವೇ ನೇತೃತ್ವ ವಹಿಸಿ, ಕೇಂದ್ರ ಸರ್ಕಾರದ ಮನ ಒಲಿಸಬೇಕು. ತಮಗೆ ಪಕ್ಷಾತೀತವಾಗಿ ಎಲ್ಲ ಸರ್ಕಾರಗಳು ಮನ್ನಣೆ ನೀಡುವರು ಎಂದು ಹೇಳಿದರು.