<p><strong>ನಿಡಗುಂದಿ: ‘</strong>ನಾನು ಚುನಾವಣೆ ಸಂದರ್ಭದಲ್ಲಿ ಬಸವನಬಾಗೇವಾಡಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಅದರ ಭಾಗವಾಗಿ ಇದೀಗ ನಿಡಗುಂದಿ ಪಟ್ಟಣದಲ್ಲಿ ಬಡವರ ಹಸಿವು ನೀಗುವ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್, ಸಿದ್ಧರ ಕಾಲೊನಿಯಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಲೋಕಾರ್ಪಣೆ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿಗಳ ದುರಸ್ತಿ ಕಾಮಗಾರಿ ಹಾಗೂ ಮುದ್ದೇಶ್ವರಪ್ರಭು ದೇವಸ್ಥಾನದ ಬಳಿ ರಂಗ ಮಂಟಪ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಇಂದಿರಾ ಕ್ಯಾಂಟಿನ್ ಪೌರಾಡಳಿತ ಇಲಾಖೆ, ಸ್ಥಳೀಯ ಆಡಳಿತದ ನೆರವಿನಿಂದ ₹1.45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಹಸಿದವರ ಹೊಟ್ಟೆ ತುಂಬಲಿದೆ’ ಎಂದರು.</p>.<p>ಪಟ್ಟಣದಲ್ಲಿ ಶತಮಾನದ ಶಾಲೆ ಎಂದೇ ಕರೆಸಿಕೊಳ್ಳುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಟ್ಟಡದ ದುರಸ್ತಿ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಶತಮಾನದ ಶಾಲೆಯ ಕಾಯಕಲ್ಪಕ್ಕೆ ಮುಂದಾಗಿರುವುದಾಗಿ ಹೇಳಿದರು.</p>.<p>ಮುದ್ದೇಶ್ವರಪ್ರಭು ದೇವಸ್ಥಾನದ ಬಳಿ ರಂಗ ಮಂಟಪ ನಿರ್ಮಾಣ ಯೋಜನೆ ಕಾಮಗಾರಿಗೆ ಚಾಲನೆ ನೀಡಿದ್ದು, ಈ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾತ್ರವಲ್ಲದೇ ಮದುವೆ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಮಾಡುವಲ್ಲಿ ಸಹಕಾರಿ ಆಗಲಿದೆ. ಈ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ಆರ್ಥಿಕ ನೆರವು ಕಲ್ಪಿಸುವುದಾಗಿ ಭರವಸೆ ನೀಡಿದರು.</p>.<p>ಪಟ್ಟಣದ ಮುಖಂಡರಾದ ಸಿದ್ದಣ್ಣ ನಾಗಠಾಣ, ಸಂಗಮೇಶ ಕೆಂಭಾವಿ, ಶೇಖರ ದೊಡಮನಿ ಸೇರಿದಂತೆ ನಿಡಗುಂದಿ ಪಟ್ಟಣದ ಪಂಚಾಯಿತಿ ಸದಸ್ಯರು ಮತ್ತು ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಡಗುಂದಿ: ‘</strong>ನಾನು ಚುನಾವಣೆ ಸಂದರ್ಭದಲ್ಲಿ ಬಸವನಬಾಗೇವಾಡಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಅದರ ಭಾಗವಾಗಿ ಇದೀಗ ನಿಡಗುಂದಿ ಪಟ್ಟಣದಲ್ಲಿ ಬಡವರ ಹಸಿವು ನೀಗುವ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್, ಸಿದ್ಧರ ಕಾಲೊನಿಯಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಲೋಕಾರ್ಪಣೆ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿಗಳ ದುರಸ್ತಿ ಕಾಮಗಾರಿ ಹಾಗೂ ಮುದ್ದೇಶ್ವರಪ್ರಭು ದೇವಸ್ಥಾನದ ಬಳಿ ರಂಗ ಮಂಟಪ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಇಂದಿರಾ ಕ್ಯಾಂಟಿನ್ ಪೌರಾಡಳಿತ ಇಲಾಖೆ, ಸ್ಥಳೀಯ ಆಡಳಿತದ ನೆರವಿನಿಂದ ₹1.45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಹಸಿದವರ ಹೊಟ್ಟೆ ತುಂಬಲಿದೆ’ ಎಂದರು.</p>.<p>ಪಟ್ಟಣದಲ್ಲಿ ಶತಮಾನದ ಶಾಲೆ ಎಂದೇ ಕರೆಸಿಕೊಳ್ಳುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಟ್ಟಡದ ದುರಸ್ತಿ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಶತಮಾನದ ಶಾಲೆಯ ಕಾಯಕಲ್ಪಕ್ಕೆ ಮುಂದಾಗಿರುವುದಾಗಿ ಹೇಳಿದರು.</p>.<p>ಮುದ್ದೇಶ್ವರಪ್ರಭು ದೇವಸ್ಥಾನದ ಬಳಿ ರಂಗ ಮಂಟಪ ನಿರ್ಮಾಣ ಯೋಜನೆ ಕಾಮಗಾರಿಗೆ ಚಾಲನೆ ನೀಡಿದ್ದು, ಈ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾತ್ರವಲ್ಲದೇ ಮದುವೆ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಮಾಡುವಲ್ಲಿ ಸಹಕಾರಿ ಆಗಲಿದೆ. ಈ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ಆರ್ಥಿಕ ನೆರವು ಕಲ್ಪಿಸುವುದಾಗಿ ಭರವಸೆ ನೀಡಿದರು.</p>.<p>ಪಟ್ಟಣದ ಮುಖಂಡರಾದ ಸಿದ್ದಣ್ಣ ನಾಗಠಾಣ, ಸಂಗಮೇಶ ಕೆಂಭಾವಿ, ಶೇಖರ ದೊಡಮನಿ ಸೇರಿದಂತೆ ನಿಡಗುಂದಿ ಪಟ್ಟಣದ ಪಂಚಾಯಿತಿ ಸದಸ್ಯರು ಮತ್ತು ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>