<p><strong>ವಿಜಯಪುರ</strong>: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸಿಗುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹೋರಾಟಕ್ಕೆ ಮನ್ನಣೆ ನೀಡದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂಬ ಸಂಕಲ್ಪ ಮಾಡಿದ್ದೇನೆ ಎಂದರು.</p>.<p>ವಿಜಯಪುರದಲ್ಲಿ ಇತ್ತೀಚೆಗೆ ನಡೆದ ರಾಣಿ ಚೆನ್ನಮ್ಮ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ಬಂದಿತ್ತು, ಸಮಾರಂಭಕ್ಕೆ ಆಗಮಿಸುವಂತೆ ಸಾಕಷ್ಟು ಒತ್ತಡ ಸಹ ಇತ್ತು, ಆದರೂ ಸಹ ಸಮಾಜದ ಸಂಕಲ್ಪದಂತೆ ನಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದರು.</p>.<p>ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದ ಕಾರಣಕ್ಕೆ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ವೇದಿಕೆ ಹಂಚಿಕೊಂಡಿಲ್ಲ ಎಂದರು.</p>.<p>ವಿಜಯಪುರದಲ್ಲಿ ಹೊಸದಾಗಿ ಪ್ರತಿಷ್ಠಾಪಿಸಿರುವ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಗೆ ಐದಾರು ಭಕ್ತರೊಂದಿಗೆ ಸೇರಿ ಪುಷ್ಪಾರ್ಚನೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಒತ್ತಾಯದಿಂದ ದೊಡ್ಡ ಮೆರವಣಿಗೆ ಮಾಡಿದ್ದೇವೆ ಎಂದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಜೆಸಿಬಿ ಅಂದರೆ ಬಹಳ ಪ್ರೀತಿ. ಹಾಗಾಗಿ ಜೆಸಿಬಿ ಮೆರವಣಿಗೆ ಮಾಡಲಾಗಿದೆ. ನೂರು ಜನ ಶಾಸಕರಿಗಿಂತ ಯತ್ನಾಳರಂತ ಬೆರಳೆಣಿಕೆ ಶಾಸಕರು ಗಟ್ಟಿಯಾಗಿರಬೇಕು ಎಂದರು.</p>.<p><strong>ಜೆಸಿಬಿ ಮೂಲಕ ಪುಷ್ಪಾರ್ಚನೆ</strong></p>.<p>ವಿಜಯಪುರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಷ್ಠಾಪಿಸಲಾಗಿರುವ ವೀರರಾಣಿ ಚೆನ್ನಮ್ಮ ಪ್ರತಿಮೆಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ,ಶಾಸಕ ರಾಜುಗೌಡ ಪಾಟೀಲವರು ಜೆಸಿಬಿ ಮೂಲಕ ಪುಷ್ಪಾರ್ಚನೆ ಮಾಡಿದರು.</p>.<p>ಪುಷ್ಪಾರ್ಚನೆಗೂ ಮುನ್ನ ಭವ್ಯ ಮೆರವಣಿಗೆ ನಡೆಯಿತು. ಸಾವಿರಾರು ಯುವಕರು ಕೇಸರಿ ವರ್ಣದ ಶಲ್ಯ ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. </p>
<p><strong>ವಿಜಯಪುರ</strong>: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸಿಗುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹೋರಾಟಕ್ಕೆ ಮನ್ನಣೆ ನೀಡದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂಬ ಸಂಕಲ್ಪ ಮಾಡಿದ್ದೇನೆ ಎಂದರು.</p>.<p>ವಿಜಯಪುರದಲ್ಲಿ ಇತ್ತೀಚೆಗೆ ನಡೆದ ರಾಣಿ ಚೆನ್ನಮ್ಮ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ಬಂದಿತ್ತು, ಸಮಾರಂಭಕ್ಕೆ ಆಗಮಿಸುವಂತೆ ಸಾಕಷ್ಟು ಒತ್ತಡ ಸಹ ಇತ್ತು, ಆದರೂ ಸಹ ಸಮಾಜದ ಸಂಕಲ್ಪದಂತೆ ನಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದರು.</p>.<p>ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದ ಕಾರಣಕ್ಕೆ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ವೇದಿಕೆ ಹಂಚಿಕೊಂಡಿಲ್ಲ ಎಂದರು.</p>.<p>ವಿಜಯಪುರದಲ್ಲಿ ಹೊಸದಾಗಿ ಪ್ರತಿಷ್ಠಾಪಿಸಿರುವ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಗೆ ಐದಾರು ಭಕ್ತರೊಂದಿಗೆ ಸೇರಿ ಪುಷ್ಪಾರ್ಚನೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಒತ್ತಾಯದಿಂದ ದೊಡ್ಡ ಮೆರವಣಿಗೆ ಮಾಡಿದ್ದೇವೆ ಎಂದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಜೆಸಿಬಿ ಅಂದರೆ ಬಹಳ ಪ್ರೀತಿ. ಹಾಗಾಗಿ ಜೆಸಿಬಿ ಮೆರವಣಿಗೆ ಮಾಡಲಾಗಿದೆ. ನೂರು ಜನ ಶಾಸಕರಿಗಿಂತ ಯತ್ನಾಳರಂತ ಬೆರಳೆಣಿಕೆ ಶಾಸಕರು ಗಟ್ಟಿಯಾಗಿರಬೇಕು ಎಂದರು.</p>.<p><strong>ಜೆಸಿಬಿ ಮೂಲಕ ಪುಷ್ಪಾರ್ಚನೆ</strong></p>.<p>ವಿಜಯಪುರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಷ್ಠಾಪಿಸಲಾಗಿರುವ ವೀರರಾಣಿ ಚೆನ್ನಮ್ಮ ಪ್ರತಿಮೆಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ,ಶಾಸಕ ರಾಜುಗೌಡ ಪಾಟೀಲವರು ಜೆಸಿಬಿ ಮೂಲಕ ಪುಷ್ಪಾರ್ಚನೆ ಮಾಡಿದರು.</p>.<p>ಪುಷ್ಪಾರ್ಚನೆಗೂ ಮುನ್ನ ಭವ್ಯ ಮೆರವಣಿಗೆ ನಡೆಯಿತು. ಸಾವಿರಾರು ಯುವಕರು ಕೇಸರಿ ವರ್ಣದ ಶಲ್ಯ ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. </p>