ವಾರಾಂತ್ಯ ಕರ್ಫ್ಯೂಗೆ ವಿರೋಧ: ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಿರೋಧ ವ್ಯಕ್ತಪಡಿಸಿದರು. ಶನಿವಾರ, ಭಾನುವಾರ ಮಾತ್ರ ಕೊರೊನಾ ವಿಜಯಪುರದಲ್ಲಿ ಅಡ್ಡಾಡುತ್ತಾ. ರಾತ್ರಿ ಮಾತ್ರ ಅಡ್ಡಾಡುತ್ತಾ. ಸೋಮವಾರ, ಶುಕ್ರವಾರ ಕೊರೊನಾ ಅಡ್ಡಾಡುವುದಿಲ್ಲವೇ? ಇದರಲ್ಲಿ ವೈಜ್ಞಾನಿಕತೆ ಎಲ್ಲಿದೆ ಎಂಬುದು ತಿಳಿಯದಾಗಿದೆ ಎಂದರು.