<p><strong>ವಿಜಯಪುರ</strong>: ನನ್ನ ನಸೀಬು ಚನ್ನಾಗಿದ್ದರೆ ನಾಳೆಯೇ ಮುಖ್ಯಮಂತ್ರಿ ಆಗಬಹುದು ಎಂದು ಸಚಿವ ಉಮೇಶ ಕತ್ತಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಮುಖ್ಯಮಂತ್ರಿ ಆಕಾಂಕ್ಷಿ. ಹಾಗಂತ ಈಗಲ್ಲ. ಇನ್ನೂ 15 ವರ್ಷ ಸಮಯಾವಕಾಶ ಇದೆ. ಯಾವಾಗಲಾದರೂ ಆಗಬಹುದು ಎಂದರು.</p>.<p>ಈಗಾಗಲೇ ಒಂಬತ್ತು ಬಾರಿ ಶಾಸಕನಾಗಿದ್ದೇನೆ. ನನಗೆ ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ. ಬೊಮ್ಮಾಯಿ ತೆಗೆದು ಮುಖ್ಯಮಂತ್ರಿಯಾಗುವ ಆಶೆ ಇಲ್ಲ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಹುದ್ದೆ ನಮ್ಮಲ್ಲಿ ಖಾಲಿ ಇಲ್ಲ ಎಂದರು.</p>.<p>ಬೊಮ್ಮಾಯಿ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಬಿಜೆಪಿಯೇ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ನವರಿಗೆ ಮಾಡಲು ಕೆಲಸ ಇಲ್ಲ.ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ವದಂತಿ ಹಬ್ಬಿಸುವುದನ್ನು ಬಿಟ್ಟು ಪಕ್ಷ ಕಟ್ಟಲು ಆದ್ಯತೆ ನೀಡಲಿ ಎಂದು ಸಲಹೆ ನೀಡಿದರು.</p>.<p><a href="https://www.prajavani.net/india-news/bihar-can-not-run-without-lalu-says-lalu-prasad-daughter-rohini-acharya-961842.html" itemprop="url">ಲಾಲು ಇಲ್ಲದೆ ಬಿಹಾರ ಚಾಲೂ ಆಗುವುದಿಲ್ಲ: ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನನ್ನ ನಸೀಬು ಚನ್ನಾಗಿದ್ದರೆ ನಾಳೆಯೇ ಮುಖ್ಯಮಂತ್ರಿ ಆಗಬಹುದು ಎಂದು ಸಚಿವ ಉಮೇಶ ಕತ್ತಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಮುಖ್ಯಮಂತ್ರಿ ಆಕಾಂಕ್ಷಿ. ಹಾಗಂತ ಈಗಲ್ಲ. ಇನ್ನೂ 15 ವರ್ಷ ಸಮಯಾವಕಾಶ ಇದೆ. ಯಾವಾಗಲಾದರೂ ಆಗಬಹುದು ಎಂದರು.</p>.<p>ಈಗಾಗಲೇ ಒಂಬತ್ತು ಬಾರಿ ಶಾಸಕನಾಗಿದ್ದೇನೆ. ನನಗೆ ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ. ಬೊಮ್ಮಾಯಿ ತೆಗೆದು ಮುಖ್ಯಮಂತ್ರಿಯಾಗುವ ಆಶೆ ಇಲ್ಲ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಹುದ್ದೆ ನಮ್ಮಲ್ಲಿ ಖಾಲಿ ಇಲ್ಲ ಎಂದರು.</p>.<p>ಬೊಮ್ಮಾಯಿ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಬಿಜೆಪಿಯೇ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ನವರಿಗೆ ಮಾಡಲು ಕೆಲಸ ಇಲ್ಲ.ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ವದಂತಿ ಹಬ್ಬಿಸುವುದನ್ನು ಬಿಟ್ಟು ಪಕ್ಷ ಕಟ್ಟಲು ಆದ್ಯತೆ ನೀಡಲಿ ಎಂದು ಸಲಹೆ ನೀಡಿದರು.</p>.<p><a href="https://www.prajavani.net/india-news/bihar-can-not-run-without-lalu-says-lalu-prasad-daughter-rohini-acharya-961842.html" itemprop="url">ಲಾಲು ಇಲ್ಲದೆ ಬಿಹಾರ ಚಾಲೂ ಆಗುವುದಿಲ್ಲ: ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>