<p><strong>ವಿಜಯಪುರ:</strong> ದ್ವಿತೀಯ ಪಿ.ಯು.ಸಿ ಶೈಕ್ಷಣಿಕ ಬದುಕಿನ ಮುಖ್ಯ ಘಟ್ಟವಾಗಿದ್ದು, ಹಿಂದಿನ ನಷ್ಟವನ್ನು ಮುಂದಿನ ನಾಲ್ಕಾರು ತಿಂಗಳ ಕಲಿಕೆಯಿಂದ ತುಂಬಿಕೊಳ್ಳಬೇಕು. ಉಳಿದಿರುವ ಸಮಯವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕುಎಂದು ಗಾಂಧಿಚೌಕಿ ಸಿಪಿಐ ರವೀಂದ್ರ ನಾಯ್ಕೋಡಿ ಹೇಳಿದರು. </p>.<p>ಇಲ್ಲಿನ ಅಥಣಿ ರಸ್ತೆಯಲ್ಲಿರುವ ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಾರಂಭಿಸಲಾದ ಪ್ರಸಕ್ತ ಸಾಲಿನ ಪಿ. ಯು.ಸಿ. ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೋವಿಡ್ನಿಂದಾಗಿ ಒಂಬತ್ತು ತಿಂಗಳಿನಿಂದ ಶಾಲಾ –ಕಾಲೇಜಗಳು ಮುಚ್ಚಿ ಹೋಗಿದ್ದವು. ಆನ್ಲೈನ್ ತರಗತಿಗಳು ಗ್ರಾಮೀಣ ಭಾಗದ ಮಕ್ಕಳಿಗೆ ಸರಿಯಾಗಿ ತಲುಪದೆ ಕಲಿಕೆ ಅಸ್ತವ್ಯವಸ್ಥೆವಾಗಿತ್ತು ಎಂದರು.</p>.<p>ಅಮ್ಮನ ಮಡಿಲು ಚಾರಟೇಬಲ್ ಟ್ರಸ್ಟ್ ಹಾಗೂ ಆಕ್ಸಫರ್ಡ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕೊರೊನಾ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ, ಈ ವೈರಸ್ನ ಜೊತೆಗೆ ಬದುಕಿ ಎಲ್ಲರೂ ಯಶಸ್ವಿಯಾಗಬೇಕಿದೆ ಎಂದು ಹೇಳಿದರು.</p>.<p>ಕಾಲೇಜು ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರುವುದರಿಂದ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಶೈಕ್ಷಣಿಕ ವರ್ಷವನ್ನು ಪೂರ್ಣಗೊಳಿಸಬೇಕು ಎಂದರು.</p>.<p>ಕೊರೊನಾ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಪಾಠ ಕಲಿಸಿದ್ದು, ಮನೆಯಲ್ಲಿಯ ಹಿರಿಯ ವಯೋಮಾನದವರನ್ನು ಕಾಳಜಿಯಿಂದ ನಾವೆಲ್ಲ ಕಾಣಬೇಕು. ಅದರೊಟ್ಟಿಗೆ ಶಿಕ್ಷಣದಲ್ಲಿ ಉತ್ತಮ ಸಾಧನೆಗೈದು ಪಾಠ ಕಲಿಸಿದ ಗುರುಗಳಿಗೆ, ಪಾಲಕರಿಗೆ ಹಾಗೂ ಸಂಸ್ಥೆಗೆ ಗೌರವ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.</p>.<p>ಎಕ್ಸಲಂಟ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಚೇರ್ಮನ್ ಬಸವರಾಜ ಕೌಲಗಿ ಮಾತನಾಡಿ, ಸರ್ಕಾರದ ಕೋವಿಡ್ ಮಾರ್ಗದರ್ಶಿ ನಿಯಮಗಳಂತೆ ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಲೇಜು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕ, ಭಯಪಡದೆ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನಾಗಯ್ಯ ಶಾಸ್ತ್ರಿ ಹಿರೇಮಠ ಅವರು ಸರಸ್ವತಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಕಾಲೇಜು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.</p>.<p>ಪ್ರಾಚಾರ್ಯ ಡಿ.ಎಲ್.ಬನಸೋಡೆ, ಶ್ರದ್ಧಾ ಜಾಧವ, ಉಪನ್ಯಾಸಕ ರವಿ ಕಲ್ಲೂರಮಠ, ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕೌಲಗಿ, ಕಾಲೇಜಿನ ಆಡಳಿತಾಧಿಕಾರಿ ಪರಶುರಾಮ ಭಾವಿಕಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ದ್ವಿತೀಯ ಪಿ.ಯು.ಸಿ ಶೈಕ್ಷಣಿಕ ಬದುಕಿನ ಮುಖ್ಯ ಘಟ್ಟವಾಗಿದ್ದು, ಹಿಂದಿನ ನಷ್ಟವನ್ನು ಮುಂದಿನ ನಾಲ್ಕಾರು ತಿಂಗಳ ಕಲಿಕೆಯಿಂದ ತುಂಬಿಕೊಳ್ಳಬೇಕು. ಉಳಿದಿರುವ ಸಮಯವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕುಎಂದು ಗಾಂಧಿಚೌಕಿ ಸಿಪಿಐ ರವೀಂದ್ರ ನಾಯ್ಕೋಡಿ ಹೇಳಿದರು. </p>.<p>ಇಲ್ಲಿನ ಅಥಣಿ ರಸ್ತೆಯಲ್ಲಿರುವ ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಾರಂಭಿಸಲಾದ ಪ್ರಸಕ್ತ ಸಾಲಿನ ಪಿ. ಯು.ಸಿ. ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೋವಿಡ್ನಿಂದಾಗಿ ಒಂಬತ್ತು ತಿಂಗಳಿನಿಂದ ಶಾಲಾ –ಕಾಲೇಜಗಳು ಮುಚ್ಚಿ ಹೋಗಿದ್ದವು. ಆನ್ಲೈನ್ ತರಗತಿಗಳು ಗ್ರಾಮೀಣ ಭಾಗದ ಮಕ್ಕಳಿಗೆ ಸರಿಯಾಗಿ ತಲುಪದೆ ಕಲಿಕೆ ಅಸ್ತವ್ಯವಸ್ಥೆವಾಗಿತ್ತು ಎಂದರು.</p>.<p>ಅಮ್ಮನ ಮಡಿಲು ಚಾರಟೇಬಲ್ ಟ್ರಸ್ಟ್ ಹಾಗೂ ಆಕ್ಸಫರ್ಡ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕೊರೊನಾ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ, ಈ ವೈರಸ್ನ ಜೊತೆಗೆ ಬದುಕಿ ಎಲ್ಲರೂ ಯಶಸ್ವಿಯಾಗಬೇಕಿದೆ ಎಂದು ಹೇಳಿದರು.</p>.<p>ಕಾಲೇಜು ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರುವುದರಿಂದ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಶೈಕ್ಷಣಿಕ ವರ್ಷವನ್ನು ಪೂರ್ಣಗೊಳಿಸಬೇಕು ಎಂದರು.</p>.<p>ಕೊರೊನಾ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಪಾಠ ಕಲಿಸಿದ್ದು, ಮನೆಯಲ್ಲಿಯ ಹಿರಿಯ ವಯೋಮಾನದವರನ್ನು ಕಾಳಜಿಯಿಂದ ನಾವೆಲ್ಲ ಕಾಣಬೇಕು. ಅದರೊಟ್ಟಿಗೆ ಶಿಕ್ಷಣದಲ್ಲಿ ಉತ್ತಮ ಸಾಧನೆಗೈದು ಪಾಠ ಕಲಿಸಿದ ಗುರುಗಳಿಗೆ, ಪಾಲಕರಿಗೆ ಹಾಗೂ ಸಂಸ್ಥೆಗೆ ಗೌರವ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.</p>.<p>ಎಕ್ಸಲಂಟ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಚೇರ್ಮನ್ ಬಸವರಾಜ ಕೌಲಗಿ ಮಾತನಾಡಿ, ಸರ್ಕಾರದ ಕೋವಿಡ್ ಮಾರ್ಗದರ್ಶಿ ನಿಯಮಗಳಂತೆ ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಲೇಜು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕ, ಭಯಪಡದೆ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನಾಗಯ್ಯ ಶಾಸ್ತ್ರಿ ಹಿರೇಮಠ ಅವರು ಸರಸ್ವತಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಕಾಲೇಜು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.</p>.<p>ಪ್ರಾಚಾರ್ಯ ಡಿ.ಎಲ್.ಬನಸೋಡೆ, ಶ್ರದ್ಧಾ ಜಾಧವ, ಉಪನ್ಯಾಸಕ ರವಿ ಕಲ್ಲೂರಮಠ, ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕೌಲಗಿ, ಕಾಲೇಜಿನ ಆಡಳಿತಾಧಿಕಾರಿ ಪರಶುರಾಮ ಭಾವಿಕಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>