<p><strong>ನಿಡಗುಂದಿ: </strong>ತಾಲ್ಲೂಕು ಆಡಳಿತ ಹಾಗೂ ನಿಡಗುಂದಿ ಪೊಲೀಸರು ಜಂಟಿಯಾಗಿ ರಾಷ್ಟ್ರೀಯ ಹೆದ್ದಾರಿ-50ರ ಯಲಗೂರ ಕ್ರಾಸ್ ಹತ್ತಿರ ಬರುತ್ತಿದ್ದ ಲಾರಿ ಹಾಗೂ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ.</p>.<p>ತಮಿಳುನಾಡು ಮೂಲದ ಲಾರಿಯಾಗಿದ್ದು, ಲಿಂಗಸೂರಿನ ಅಂಜನಾದ್ರಿ ಟ್ರೇಡರ್ಸ್ನಿಂದ ಪಡಿತರ ಅಕ್ಕಿಯುಳ್ಳ ಚೀಲ ತೆಗೆದುಕೊಂಡು ಗುಜರಾತ್ ರಾಜ್ಯಕ್ಕೆ ಲಾರಿ ಹೊರಟಿತ್ತು.</p>.<p>ಲಾರಿ ಚಾಲಕ ನಾಮಕಲ್ ಜಿಲ್ಲೆಯ ಪರಮತಿ ವೆಲ್ಲೂರ ತಾಲ್ಲೂಕಿನ ಕೊಡಚ್ಚೇರ ಗ್ರಾಮದ ಸರವಣ ಎಸ್ ಸಂಗೋಡನ ಎಂಬಾತನನ್ನು ಬಂಧಿಸಲಾಗಿದ್ದು, ಪೊಲೀಸರುಲಾರಿ ವಶಕ್ಕೆ ಪಡೆದಿದ್ದಾರೆ.</p>.<p><strong>575 ಚೀಲ ಅಕ್ಕಿ: </strong>ಲಾರಿಯನ್ನು ವಶಕ್ಕೆ ಪಡೆದು ತೆಲಗಿಯ ಸರ್ಕಾರಿ ಗೋದಾಮಿನಲ್ಲಿ ತೂಕ ಮಾಡಿದಾಗ 575 ಚೀಲಗಳಲ್ಲಿ (ತಲಾ 50 ಕೆ.ಜಿ ತೂಕದ) 28,750 ಕೆ.ಜಿ ಅಕ್ಕಿ ಇರುವುದು ದೃಢಪಟ್ಟಿದೆ. ಇದರ ಒಟ್ಟು ಮೌಲ್ಯ ₹8.45 ಲಕ್ಷ ಎಂದು ನಿಡಗುಂದಿಯ ಆಹಾರ ನಿರೀಕ್ಷಕ ಸಂಜಯ ಕೃಷ್ಣಾರಾವ್ ಪಾಟೀಲ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕಳೆದ ಆಗಸ್ಟ್ 3ರಂದು 30ಟನ್ ತೂಕದ 586 ಅಕ್ಕಿ ಚೀಲವನ್ನು ವಶಪಡಿಸಿಕೊಳ್ಳಲಾಗಿತ್ತು. ಆಗಲೂ ರಾಯಚೂರು ಜಿಲ್ಲೆಯ ಮಾನ್ವಿಯಿಂದ ಗುಜರಾತ್ಗೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡಲಾಗುತ್ತಿತ್ತು.</p>.<p>ತಹಶೀಲ್ದಾರ್ ಸತೀಶ ಕೂಡಲಗಿ ಮಾರ್ಗದರ್ಶನದಲ್ಲಿ ಆಹಾರ ನಿರೀಕ್ಷಕ ಸಂಜಯ ಪಾಟೀಲ, ಲೋಕೇಶ ಕುಪ್ಪಸ್ತ, ಅಪ್ಪಾಸಾಹೇಬ ಘಂಟಿ, ಪೊಲೀಸ್ ಕಾನ್ಸಟೇಬಲ್ಗಳಾದ ಬಿ.ಎಸ್. ಪತ್ರಿ, ವಿ.ಎಸ್. ಹಿರೇಮಠ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಡಗುಂದಿ: </strong>ತಾಲ್ಲೂಕು ಆಡಳಿತ ಹಾಗೂ ನಿಡಗುಂದಿ ಪೊಲೀಸರು ಜಂಟಿಯಾಗಿ ರಾಷ್ಟ್ರೀಯ ಹೆದ್ದಾರಿ-50ರ ಯಲಗೂರ ಕ್ರಾಸ್ ಹತ್ತಿರ ಬರುತ್ತಿದ್ದ ಲಾರಿ ಹಾಗೂ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ.</p>.<p>ತಮಿಳುನಾಡು ಮೂಲದ ಲಾರಿಯಾಗಿದ್ದು, ಲಿಂಗಸೂರಿನ ಅಂಜನಾದ್ರಿ ಟ್ರೇಡರ್ಸ್ನಿಂದ ಪಡಿತರ ಅಕ್ಕಿಯುಳ್ಳ ಚೀಲ ತೆಗೆದುಕೊಂಡು ಗುಜರಾತ್ ರಾಜ್ಯಕ್ಕೆ ಲಾರಿ ಹೊರಟಿತ್ತು.</p>.<p>ಲಾರಿ ಚಾಲಕ ನಾಮಕಲ್ ಜಿಲ್ಲೆಯ ಪರಮತಿ ವೆಲ್ಲೂರ ತಾಲ್ಲೂಕಿನ ಕೊಡಚ್ಚೇರ ಗ್ರಾಮದ ಸರವಣ ಎಸ್ ಸಂಗೋಡನ ಎಂಬಾತನನ್ನು ಬಂಧಿಸಲಾಗಿದ್ದು, ಪೊಲೀಸರುಲಾರಿ ವಶಕ್ಕೆ ಪಡೆದಿದ್ದಾರೆ.</p>.<p><strong>575 ಚೀಲ ಅಕ್ಕಿ: </strong>ಲಾರಿಯನ್ನು ವಶಕ್ಕೆ ಪಡೆದು ತೆಲಗಿಯ ಸರ್ಕಾರಿ ಗೋದಾಮಿನಲ್ಲಿ ತೂಕ ಮಾಡಿದಾಗ 575 ಚೀಲಗಳಲ್ಲಿ (ತಲಾ 50 ಕೆ.ಜಿ ತೂಕದ) 28,750 ಕೆ.ಜಿ ಅಕ್ಕಿ ಇರುವುದು ದೃಢಪಟ್ಟಿದೆ. ಇದರ ಒಟ್ಟು ಮೌಲ್ಯ ₹8.45 ಲಕ್ಷ ಎಂದು ನಿಡಗುಂದಿಯ ಆಹಾರ ನಿರೀಕ್ಷಕ ಸಂಜಯ ಕೃಷ್ಣಾರಾವ್ ಪಾಟೀಲ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕಳೆದ ಆಗಸ್ಟ್ 3ರಂದು 30ಟನ್ ತೂಕದ 586 ಅಕ್ಕಿ ಚೀಲವನ್ನು ವಶಪಡಿಸಿಕೊಳ್ಳಲಾಗಿತ್ತು. ಆಗಲೂ ರಾಯಚೂರು ಜಿಲ್ಲೆಯ ಮಾನ್ವಿಯಿಂದ ಗುಜರಾತ್ಗೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡಲಾಗುತ್ತಿತ್ತು.</p>.<p>ತಹಶೀಲ್ದಾರ್ ಸತೀಶ ಕೂಡಲಗಿ ಮಾರ್ಗದರ್ಶನದಲ್ಲಿ ಆಹಾರ ನಿರೀಕ್ಷಕ ಸಂಜಯ ಪಾಟೀಲ, ಲೋಕೇಶ ಕುಪ್ಪಸ್ತ, ಅಪ್ಪಾಸಾಹೇಬ ಘಂಟಿ, ಪೊಲೀಸ್ ಕಾನ್ಸಟೇಬಲ್ಗಳಾದ ಬಿ.ಎಸ್. ಪತ್ರಿ, ವಿ.ಎಸ್. ಹಿರೇಮಠ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>