<p><strong>ವಿಜಯಪುರ</strong>: ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಎದುರು ನವೀಕರಣಗೊಂಡ ಡಾ.ಬಿ.ಆರ್. ಅಂಬೇಡ್ಕರ್ ಭವನ, ಗ್ರಂಥಾಲಯ ಹಾಗೂ ಅಂಬೇಡ್ಕರ್ ಅವರ ಕುರಿತ ಸಂದೇಶ ಸಾರುವ ಛಾಯಾಚಿತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅನಾವರಣಗೊಳಿಸಿದರು.</p>.<p>‘ವಿಶ್ವದ ಸರ್ವಶ್ರೇಷ್ಠ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನಿಗೆ ಕೊಡುಗೆ ನೀಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ಅಂಬೇಡ್ಕರ್ ಅವರು ಭದ್ರ ಬುನಾದಿ ಹಾಕಿದ್ದಾರೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. </p>.<p>‘ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತಗೊಳಿಸಬಾರದು. ಜಾತಿ, ಮತ ಪಂಥಗಳನ್ನು ಮೀರಿ ನಿಂತ ಮೇಧಾವಿಗಳಾಗಿದ್ದಾರೆ’ ಎಂದರು.</p>.<p>ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಕೇವಲ 20 ದಿನಗಳಲ್ಲಿ ಅಂಬೇಡ್ಕರ್ ಭವನವನ್ನು ನವೀಕರಣಗೊಳಿಸಲಾಗಿದೆ ಎಂದು ಹೇಳಿದರು.</p>.<p>ನವೀಕರಣಗೊಂಡ ಭವನದಲ್ಲಿ ಅಂಬೇಡ್ಕರ್ ಅವರ ಜೀವನ ಸಾಧನೆ ಸಮಗ್ರ ಚಿತ್ರಣ ಕಟ್ಟಿಕೊಡುವ ಛಾಯಾಚಿತ್ರ, ವಸ್ತು ಸಂಗ್ರಹಾಲಯ, ಸುಸಜ್ಜಿತ ಗ್ರಂಥಾಲಯ, ಬದುಕು-ಬರಹ 22 ಸಂಪುಟಗಳು, ಜೀವನ ಚರಿತ್ರೆ, ಸಾಧನೆಗಳ ಕುರಿತ ಪುಸ್ತಕಗಳು, ಸುಸಜ್ಜಿತ ಕಚೇರಿ, ಸಭಾಭವನ ಹೊಂದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯದಲ್ಲಿ ಪುಸ್ತಕ ಇರಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು. </p>.<p>ಚಿಂತಕಿ ಕೆ. ನೀಲಾ ಮಾತನಾಡಿ, ‘ಜನರು ಘನತೆಯಿಂದ ಬದುಕಲು ಆರ್ಥಿಕ ಸ್ವಾತಂತ್ರ ಇರಬೇಕು ಎಂಬುದು ಅಂಬೇಡ್ಕರ್ ಅವರ ಉದಾತ್ತ ಚಿಂತನೆಯಾಗಿತ್ತು. ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಅಂಬೇಡ್ಕರ್, ಸ್ತ್ರೀ ಸಬಲೀಕರಣಕ್ಕಾಗಿ ಹೊಂದಿದ ವಿಚಾರಗಳನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದು’ ಎಂದು ಹೇಳಿದರು. </p>.<p>ಬಸವತತ್ವ ಪ್ರಚಾರಕರಾದ ಡಾ. ಜೆ.ಎಸ್.ಪಾಟೀಲ ಉಪನ್ಯಾಸ ನೀಡಿದರು. </p>.<p>ಅಂಬೇಡ್ಕರ್ ಭವನ ನವೀಕರಣಕ್ಕೆ ವಿಶೇಷ ಮುತುವರ್ಜಿ ವಹಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಿ.ಎನ್. ಮಲಜಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ನಿರ್ಮಿತಿ ಕೇಂದ್ರದ ಆಕಾಶ್ ಅವರನ್ನು ಸನ್ಮಾನಿಸಲಾಯಿತು.</p>.<p>ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು.</p>.<p>ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕ ರಾಜು ಆಲಗೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾಇ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಇದ್ದರು. </p>.<p class="Subhead">ಭವ್ಯ ಮೆರವಣಿಗೆ: ಜಲನಗರದ ಬುದ್ದವಿಹಾರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಎದುರು ನವೀಕರಣಗೊಂಡ ಡಾ.ಬಿ.ಆರ್. ಅಂಬೇಡ್ಕರ್ ಭವನ, ಗ್ರಂಥಾಲಯ ಹಾಗೂ ಅಂಬೇಡ್ಕರ್ ಅವರ ಕುರಿತ ಸಂದೇಶ ಸಾರುವ ಛಾಯಾಚಿತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅನಾವರಣಗೊಳಿಸಿದರು.</p>.<p>‘ವಿಶ್ವದ ಸರ್ವಶ್ರೇಷ್ಠ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನಿಗೆ ಕೊಡುಗೆ ನೀಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ಅಂಬೇಡ್ಕರ್ ಅವರು ಭದ್ರ ಬುನಾದಿ ಹಾಕಿದ್ದಾರೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. </p>.<p>‘ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತಗೊಳಿಸಬಾರದು. ಜಾತಿ, ಮತ ಪಂಥಗಳನ್ನು ಮೀರಿ ನಿಂತ ಮೇಧಾವಿಗಳಾಗಿದ್ದಾರೆ’ ಎಂದರು.</p>.<p>ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಕೇವಲ 20 ದಿನಗಳಲ್ಲಿ ಅಂಬೇಡ್ಕರ್ ಭವನವನ್ನು ನವೀಕರಣಗೊಳಿಸಲಾಗಿದೆ ಎಂದು ಹೇಳಿದರು.</p>.<p>ನವೀಕರಣಗೊಂಡ ಭವನದಲ್ಲಿ ಅಂಬೇಡ್ಕರ್ ಅವರ ಜೀವನ ಸಾಧನೆ ಸಮಗ್ರ ಚಿತ್ರಣ ಕಟ್ಟಿಕೊಡುವ ಛಾಯಾಚಿತ್ರ, ವಸ್ತು ಸಂಗ್ರಹಾಲಯ, ಸುಸಜ್ಜಿತ ಗ್ರಂಥಾಲಯ, ಬದುಕು-ಬರಹ 22 ಸಂಪುಟಗಳು, ಜೀವನ ಚರಿತ್ರೆ, ಸಾಧನೆಗಳ ಕುರಿತ ಪುಸ್ತಕಗಳು, ಸುಸಜ್ಜಿತ ಕಚೇರಿ, ಸಭಾಭವನ ಹೊಂದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯದಲ್ಲಿ ಪುಸ್ತಕ ಇರಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು. </p>.<p>ಚಿಂತಕಿ ಕೆ. ನೀಲಾ ಮಾತನಾಡಿ, ‘ಜನರು ಘನತೆಯಿಂದ ಬದುಕಲು ಆರ್ಥಿಕ ಸ್ವಾತಂತ್ರ ಇರಬೇಕು ಎಂಬುದು ಅಂಬೇಡ್ಕರ್ ಅವರ ಉದಾತ್ತ ಚಿಂತನೆಯಾಗಿತ್ತು. ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಅಂಬೇಡ್ಕರ್, ಸ್ತ್ರೀ ಸಬಲೀಕರಣಕ್ಕಾಗಿ ಹೊಂದಿದ ವಿಚಾರಗಳನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದು’ ಎಂದು ಹೇಳಿದರು. </p>.<p>ಬಸವತತ್ವ ಪ್ರಚಾರಕರಾದ ಡಾ. ಜೆ.ಎಸ್.ಪಾಟೀಲ ಉಪನ್ಯಾಸ ನೀಡಿದರು. </p>.<p>ಅಂಬೇಡ್ಕರ್ ಭವನ ನವೀಕರಣಕ್ಕೆ ವಿಶೇಷ ಮುತುವರ್ಜಿ ವಹಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಿ.ಎನ್. ಮಲಜಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ನಿರ್ಮಿತಿ ಕೇಂದ್ರದ ಆಕಾಶ್ ಅವರನ್ನು ಸನ್ಮಾನಿಸಲಾಯಿತು.</p>.<p>ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು.</p>.<p>ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕ ರಾಜು ಆಲಗೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾಇ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಇದ್ದರು. </p>.<p class="Subhead">ಭವ್ಯ ಮೆರವಣಿಗೆ: ಜಲನಗರದ ಬುದ್ದವಿಹಾರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>