<p>ವಿಜಯಪುರ: 'ಗಾಂಧಿ ಗ್ರಾಮ’ ಪುರಸ್ಕೃತ ಇಂಡಿ ತಾಲ್ಲೂಕಿನ ತೆನ್ನಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ಜೂನ್ 27ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪಿಡಿಒಬಸವರಾಜ ಬಬಲಾದ ತಿಳಿಸಿದ್ದಾರೆ.</p>.<p>2021–22ನೇ ಸಾಲಿನ ಮಹತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಸುಂದರವಾಗಿ ಹಾಗೂ ಆಕರ್ಷಕವಾಗಿ ನಿರ್ಮಾಣವಾಗಿರುವ ಗ್ರಾಮ ಪಂಚಾಯ್ತಿ ನೂತನ ಕಾರ್ಯಾಲಯವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಲಿದ್ದಾರೆ.</p>.<p>ಗೊರನಾಳ ಹಿರೇಮಠದ ಡಾ.ವಿರೂಪಾಕ್ಷ ದೇವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಂಗಲ ಜಿಡ್ಡಿಮನಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ಗ್ರಾಮ ಪಂಚಾಯ್ತಿ ವತಿಯಿಂದ ಮೂರು ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗಿದ್ದು, ರಾಜ್ಯಮಟ್ಟದ ಗಮನ ಸೆಳೆದಿದೆ.</p>.<p>ಮಹಾತ್ಮಗಾಂಧಿ ನರೇಗಾ ಯೋಜನೆಯಡಿಆಲ,ಅರಳಿ, ಬೇವು, ಹೊಂಗೆ, ಮಹಾಗನಿ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ವಿವಿಧ ಜಾತಿಯ 9 ಸಾವಿರ ಸಸಿಗಳನ್ನು ನೆಟ್ಟಿದ್ದು, ಎಲ್ಲಾ ಸಸಿಗಳಿಗೆ ಹನಿ ನೀರಾವರಿ ವ್ಯವಸ್ಥೆ ಮಾಡಲಾಗಿದೆ ಮತ್ತು ಸುಂದರ ಉದ್ಯಾನವನ ನಿರ್ಮಾಣ ಮಾಡಲಾಗಿದೆ ಎಂದು ಬಬಲಾದ ತಿಳಿಸಿದರು.</p>.<p>2021-22 ನೇ ಸಾಲಿಗೆ ನರೇಗಾ ಯೋಜನೆಯಡಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿಪಿ.ಡಿ.ಒ ಬಸವರಾಜ ಬಬಲಾದ ಅವರಿಗೆ ನರೇಗಾ ರಾಜ್ಯ ಪ್ರಶಸ್ತಿ ಲಭಿಸಿದೆ. ಅಲ್ಲದೇ,2021-22 ನೇ ಸಾಲಿನಲ್ಲಿ ತೆನ್ನಿಹಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: 'ಗಾಂಧಿ ಗ್ರಾಮ’ ಪುರಸ್ಕೃತ ಇಂಡಿ ತಾಲ್ಲೂಕಿನ ತೆನ್ನಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ಜೂನ್ 27ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪಿಡಿಒಬಸವರಾಜ ಬಬಲಾದ ತಿಳಿಸಿದ್ದಾರೆ.</p>.<p>2021–22ನೇ ಸಾಲಿನ ಮಹತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಸುಂದರವಾಗಿ ಹಾಗೂ ಆಕರ್ಷಕವಾಗಿ ನಿರ್ಮಾಣವಾಗಿರುವ ಗ್ರಾಮ ಪಂಚಾಯ್ತಿ ನೂತನ ಕಾರ್ಯಾಲಯವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಲಿದ್ದಾರೆ.</p>.<p>ಗೊರನಾಳ ಹಿರೇಮಠದ ಡಾ.ವಿರೂಪಾಕ್ಷ ದೇವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಂಗಲ ಜಿಡ್ಡಿಮನಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ಗ್ರಾಮ ಪಂಚಾಯ್ತಿ ವತಿಯಿಂದ ಮೂರು ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗಿದ್ದು, ರಾಜ್ಯಮಟ್ಟದ ಗಮನ ಸೆಳೆದಿದೆ.</p>.<p>ಮಹಾತ್ಮಗಾಂಧಿ ನರೇಗಾ ಯೋಜನೆಯಡಿಆಲ,ಅರಳಿ, ಬೇವು, ಹೊಂಗೆ, ಮಹಾಗನಿ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ವಿವಿಧ ಜಾತಿಯ 9 ಸಾವಿರ ಸಸಿಗಳನ್ನು ನೆಟ್ಟಿದ್ದು, ಎಲ್ಲಾ ಸಸಿಗಳಿಗೆ ಹನಿ ನೀರಾವರಿ ವ್ಯವಸ್ಥೆ ಮಾಡಲಾಗಿದೆ ಮತ್ತು ಸುಂದರ ಉದ್ಯಾನವನ ನಿರ್ಮಾಣ ಮಾಡಲಾಗಿದೆ ಎಂದು ಬಬಲಾದ ತಿಳಿಸಿದರು.</p>.<p>2021-22 ನೇ ಸಾಲಿಗೆ ನರೇಗಾ ಯೋಜನೆಯಡಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿಪಿ.ಡಿ.ಒ ಬಸವರಾಜ ಬಬಲಾದ ಅವರಿಗೆ ನರೇಗಾ ರಾಜ್ಯ ಪ್ರಶಸ್ತಿ ಲಭಿಸಿದೆ. ಅಲ್ಲದೇ,2021-22 ನೇ ಸಾಲಿನಲ್ಲಿ ತೆನ್ನಿಹಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>