ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪರಿಪೂರ್ಣ ಪ್ಯಾಕೇಜ್: ಸಂಗಮೇಶ ಬಬಲೇಶ್ವರ

Last Updated 19 ಮೇ 2021, 13:06 IST
ಅಕ್ಷರ ಗಾತ್ರ

ವಿಜಯಪುರ: ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಅವೈಜ್ಞಾನಿಕ, ಅಪರಿಪೂರ್ಣ ಹಾಗೂ ನಿಜವಾಗಿ ತೊಂದರೆಗೊಳಗಾದ ಎಲ್ಲರನ್ನೂ ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ.

ಕೋವಿಡ್‌ನಿಂದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗಾಗಿ ಪ್ಯಾಕೇಜ್‌ನಲ್ಲಿ ನೇರವು ಘೋಷಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ದೆಹಲಿ ರಾಜ್ಯ ಸರ್ಕಾರದ ಮಾದರಿಯಲ್ಲಿ ಅನಾಥ ಮಕ್ಕಳ ಬಾಳಿಗೆ ಬೆಳಕು ನೀಡುವ ಪ್ರಯತ್ನ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಒಂದನೇ ಅಲೆಯಿಂದ ಇಂದಿನವರೆಗೂ ಅನುದಾನರಹಿತ ಶಾಲೆಯ ಶಿಕ್ಷಕರು ಸಂಬಳವಿಲ್ಲದೆ ಪರದಾಡುತ್ತಿದ್ದು, ಅವರನ್ನು ಪರಿಗಣಿಸದಿರುವುದು ಖಂಡನೀಯ ಎಂದಿದ್ದಾರೆ.

ರಾಜ್ಯದಾದ್ಯಂತ ಇರುವ ಅನುದಾನ ರಹಿತ ಶಾಲೆಯ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ಶಾಶ್ವತ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಆ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಬೋಧಕೇತರ ಸಿಬ್ಬಂದಿಗೆ ಹಾಗೂ ಆ ಶಾಲೆಗಳ ವಾಹನಗಳ ಚಾಲಕರು ಮತ್ತು ಸಹಾಯಕರಿಗೆ ವಿಶೇಷ ನೆರವನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಶೇಷ ಪ್ಯಾಕೇಜ್‌ನಲ್ಲಿ ಶ್ರಮಿಕ ವರ್ಗಕ್ಕೆ 3 ಸಾವಿರ, 2 ಸಾವಿರ ಘೋಷಣೆ ಮಾಡಿದ್ದೀರಿ. ಇದರಿಂದ ಬಡವನ ಬದುಕು ಹಸನಾಗಿಸಲು ಸಾಧ್ಯವಿಲ್ಲ. ಈಗ ಘೋಷಿಸಿರುವ ನೆರವಿನ ಪ್ರಮಾಣವನ್ನು ದುಪ್ಪಟ್ಟು ಹೆಚ್ಚು ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT