<p><strong>ಇಂಡಿ</strong>: ‘ಶಾಸಕ ಯಶವಂತರಾಯಗೌಡ ಪಾಟೀಲ ಅವರಿಂದ ದಲಿತ ಸಮುದಾಯಕ್ಕೆ ಅನ್ಯಾಯ, ಅವಮಾನ ಆಗಿದಿಲ್ಲ. ಶಾಸಕರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ’ ಎಂದು ದಲಿತ ಮುಖಂಡ ಮುತ್ತಪ್ಪ ಪೋತೆ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ದಲಿತ ಸಮುದಾಯದ ವ್ಯಕ್ತಿಯನ್ನು ಪುರಸಭೆ ಅಧ್ಯಕ್ಷರನ್ನಾಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಸಮುದಾಯಕ್ಕೆ ಹೆಮ್ಮೆ ತರುವ ವಿಷಯ.ಶಾಸಕರು ಎಲ್ಲ ಸಮುದಾಯದ ಬಗ್ಗೆ ಗೌರವ, ಕಾಳಜಿ ಹೊಂದಿದ್ದಾರೆ’ ಎಂದು ತಿಳಿಸಿದರು.</p>.<p>ಛಲವಾದಿ ಸಮಾಜದ ಮುಖಂಡ ಭೀಮಾಶಂಕರ ಮಾತನಾಡಿ, ‘ಜಿತೇಂದ್ರ ಕಾಂಬಳೆ ಅವರು ಮಗುವಿನ ವಿಷಯ ಮುಂದಿಟ್ಟುಕೊಂಡು ಸಮಾಜದ ಹೆಸರು ಬಳಸಿಕೊಂಡು ಶಾಸಕರ ತೇಜೋವಧೆ ಮಾಡುತ್ತಿದ್ದು, ಇದನ್ನು ಬಿಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಸಮುದಾಯ ಕಠಿಣ ನಿಲುವು ಕೈಗೊಳ್ಳಲಿದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪ್ರಶಾಂತ ಕಾಳೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-26-1214133088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ‘ಶಾಸಕ ಯಶವಂತರಾಯಗೌಡ ಪಾಟೀಲ ಅವರಿಂದ ದಲಿತ ಸಮುದಾಯಕ್ಕೆ ಅನ್ಯಾಯ, ಅವಮಾನ ಆಗಿದಿಲ್ಲ. ಶಾಸಕರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ’ ಎಂದು ದಲಿತ ಮುಖಂಡ ಮುತ್ತಪ್ಪ ಪೋತೆ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ದಲಿತ ಸಮುದಾಯದ ವ್ಯಕ್ತಿಯನ್ನು ಪುರಸಭೆ ಅಧ್ಯಕ್ಷರನ್ನಾಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಸಮುದಾಯಕ್ಕೆ ಹೆಮ್ಮೆ ತರುವ ವಿಷಯ.ಶಾಸಕರು ಎಲ್ಲ ಸಮುದಾಯದ ಬಗ್ಗೆ ಗೌರವ, ಕಾಳಜಿ ಹೊಂದಿದ್ದಾರೆ’ ಎಂದು ತಿಳಿಸಿದರು.</p>.<p>ಛಲವಾದಿ ಸಮಾಜದ ಮುಖಂಡ ಭೀಮಾಶಂಕರ ಮಾತನಾಡಿ, ‘ಜಿತೇಂದ್ರ ಕಾಂಬಳೆ ಅವರು ಮಗುವಿನ ವಿಷಯ ಮುಂದಿಟ್ಟುಕೊಂಡು ಸಮಾಜದ ಹೆಸರು ಬಳಸಿಕೊಂಡು ಶಾಸಕರ ತೇಜೋವಧೆ ಮಾಡುತ್ತಿದ್ದು, ಇದನ್ನು ಬಿಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಸಮುದಾಯ ಕಠಿಣ ನಿಲುವು ಕೈಗೊಳ್ಳಲಿದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪ್ರಶಾಂತ ಕಾಳೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-26-1214133088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>