<p><strong>ಇಂಡಿ</strong>: ‘ ಪ್ರತಿ ಟನ್ ಕಬ್ಬಿಗೆ ₹3,500 ದರ ನೀಡಲು ಒತ್ತಾಯಿಸಿ ಕಳೆದ 7 ದಿನಗಳಿಂದ ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೈತ ಸಂಘದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹದ ಪ್ರಯುಕ್ತ ಇಂದು ರೈತರಿಗೆ ನ್ಯಾಯ ಸಿಕ್ಕಂತಾಗಿದೆ’ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಬೋಗಿ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರವು ಪ್ರತಿ ಟನ್ ಕಬ್ಬಿಗೆ ₹3,300 ದರ ನೀಡಲು ತೀರ್ಮಾನಿಸಿದೆ. ಇದು ರೈತರ ಶ್ರಮ ಹಾಗೂ ಅನ್ನದಾತರ ಒಗ್ಗಟ್ಟಿನ ಹೋರಟಕ್ಕೆ ಸಿಕ್ಕ ಪ್ರತಿಫಲ’ ಎಂದರು.</p>.<p>‘ನಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಶ್ರಮಿಸಿ ಹೋರಾಟದಲ್ಲಿ ಭಾಗಿಯಾದ ಎಲ್ಲಾ ರೈತರಿಗೂ ಪಕ್ಷಾತೀತವಾಗಿ ಬೆಂಬಲ ನೀಡಿದ ತಾಲ್ಲೂಕಿನ ಮಠಾಧೀಶರು, ರಾಜಕೀಯ ಮುಖಂಡರಿಗೆ, ಎಲ್ಲರಿಗೂ ಧನ್ಯವಾದಗಳು’ ಎಂದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ ತಳವಾರ, ರೈತ ಮುಖಂಡ ಮಲ್ಲು ಗುಡ್ಲ, ತಮ್ಮಣ ಆಸಂಗಿ, ಮಲ್ಲಿಕಾರ್ಜುನ ನಾವದಗಿ, ಸೋಮಣ್ಣ ಗುಡ್ಲ, ಹಣಮಂತ ಗುಡ್ಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ‘ ಪ್ರತಿ ಟನ್ ಕಬ್ಬಿಗೆ ₹3,500 ದರ ನೀಡಲು ಒತ್ತಾಯಿಸಿ ಕಳೆದ 7 ದಿನಗಳಿಂದ ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೈತ ಸಂಘದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹದ ಪ್ರಯುಕ್ತ ಇಂದು ರೈತರಿಗೆ ನ್ಯಾಯ ಸಿಕ್ಕಂತಾಗಿದೆ’ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಬೋಗಿ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರವು ಪ್ರತಿ ಟನ್ ಕಬ್ಬಿಗೆ ₹3,300 ದರ ನೀಡಲು ತೀರ್ಮಾನಿಸಿದೆ. ಇದು ರೈತರ ಶ್ರಮ ಹಾಗೂ ಅನ್ನದಾತರ ಒಗ್ಗಟ್ಟಿನ ಹೋರಟಕ್ಕೆ ಸಿಕ್ಕ ಪ್ರತಿಫಲ’ ಎಂದರು.</p>.<p>‘ನಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಶ್ರಮಿಸಿ ಹೋರಾಟದಲ್ಲಿ ಭಾಗಿಯಾದ ಎಲ್ಲಾ ರೈತರಿಗೂ ಪಕ್ಷಾತೀತವಾಗಿ ಬೆಂಬಲ ನೀಡಿದ ತಾಲ್ಲೂಕಿನ ಮಠಾಧೀಶರು, ರಾಜಕೀಯ ಮುಖಂಡರಿಗೆ, ಎಲ್ಲರಿಗೂ ಧನ್ಯವಾದಗಳು’ ಎಂದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ ತಳವಾರ, ರೈತ ಮುಖಂಡ ಮಲ್ಲು ಗುಡ್ಲ, ತಮ್ಮಣ ಆಸಂಗಿ, ಮಲ್ಲಿಕಾರ್ಜುನ ನಾವದಗಿ, ಸೋಮಣ್ಣ ಗುಡ್ಲ, ಹಣಮಂತ ಗುಡ್ಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>