<p>ಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಅವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ತಡವಲಗಾ ಗ್ರಾಮದ ರಾಚೋಟೇಶ್ವರ ಸ್ವಾಮೀಜಿ ಮನವಿ ಮಾಡಿದ್ದಾರೆ.</p>.<p>ಮಠದ ಆವರಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಳಿದ ಇಂಡಿ ವಿಧಾನ ಸಭಾ ಮತಕ್ಷೇತ್ರಕ್ಕೆ ಸ್ವಾತಂತ್ರ್ಯಾನಂತರ ಇಲ್ಲಿಯವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಶಾಸಕ ಯಶವಂತರಾಯಗೌಡ ಪಾಟೀಲ ಸಾತ್ವಿಕ ರಾಜಕಾರಣಿ. ಬಡವರ, ದೀನದುರ್ಬಲರ ಬಗ್ಗೆ ಅನುಕಂಪ ಹೊಂದಿರುವ ವ್ಯಕ್ತಿ. 3 ಬಾರಿ ಜಯಸಾಧಿಸಿದ ಜನನಾಯಕ ಎಂದರು.</p>.<p>ಇಂಡಿ ಹಿಂದುಳಿದ ತಾಲ್ಲೂಕು. ನೀರಾವರಿ, ಶಿಕ್ಷಣ , ಉದ್ಯೋಗ ಕ್ಷೇತ್ರದ ಸಮಸ್ಯಗಳಿಗೆ ಪರಿಹಾರೆವಂದರೆ ಈ ಭಾಗದ ಶಾಸಕರು ಸಚಿವರಾಗಬೇಕು ಎಂದರು.</p>.<p>ಶಾಸಕರಾದ ನಂತರ ಯಶವಂತರಾಯಗೌಡರು ಅನೇಕ ಅಭಿವೃದ್ದಿ ಕೆಲಸಗಳು ಮಾಡಿದ್ದಾರೆ. ಇಂಡಿ ತಾಲ್ಲೂಕಿನಲ್ಲಿ ಕೆರೆ ತುಂಬುವ ಯೋಜನೆ, ರೇವಣ ಸಿದ್ದೇಶ್ವರ ಏತ ನೀರಾವರಿ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ, ಲಿಂಬೆ ಅಭಿವೃದ್ದಿ ಮಂಡಳಿ , ಕೃಷಿ ವಿಜ್ಞಾನ ಕೇಂದ್ರ ಮುಂತಾದ ಕೆಲಸಗಳನ್ನು ಮಾಡಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-26-277189406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಅವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ತಡವಲಗಾ ಗ್ರಾಮದ ರಾಚೋಟೇಶ್ವರ ಸ್ವಾಮೀಜಿ ಮನವಿ ಮಾಡಿದ್ದಾರೆ.</p>.<p>ಮಠದ ಆವರಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಳಿದ ಇಂಡಿ ವಿಧಾನ ಸಭಾ ಮತಕ್ಷೇತ್ರಕ್ಕೆ ಸ್ವಾತಂತ್ರ್ಯಾನಂತರ ಇಲ್ಲಿಯವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಶಾಸಕ ಯಶವಂತರಾಯಗೌಡ ಪಾಟೀಲ ಸಾತ್ವಿಕ ರಾಜಕಾರಣಿ. ಬಡವರ, ದೀನದುರ್ಬಲರ ಬಗ್ಗೆ ಅನುಕಂಪ ಹೊಂದಿರುವ ವ್ಯಕ್ತಿ. 3 ಬಾರಿ ಜಯಸಾಧಿಸಿದ ಜನನಾಯಕ ಎಂದರು.</p>.<p>ಇಂಡಿ ಹಿಂದುಳಿದ ತಾಲ್ಲೂಕು. ನೀರಾವರಿ, ಶಿಕ್ಷಣ , ಉದ್ಯೋಗ ಕ್ಷೇತ್ರದ ಸಮಸ್ಯಗಳಿಗೆ ಪರಿಹಾರೆವಂದರೆ ಈ ಭಾಗದ ಶಾಸಕರು ಸಚಿವರಾಗಬೇಕು ಎಂದರು.</p>.<p>ಶಾಸಕರಾದ ನಂತರ ಯಶವಂತರಾಯಗೌಡರು ಅನೇಕ ಅಭಿವೃದ್ದಿ ಕೆಲಸಗಳು ಮಾಡಿದ್ದಾರೆ. ಇಂಡಿ ತಾಲ್ಲೂಕಿನಲ್ಲಿ ಕೆರೆ ತುಂಬುವ ಯೋಜನೆ, ರೇವಣ ಸಿದ್ದೇಶ್ವರ ಏತ ನೀರಾವರಿ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ, ಲಿಂಬೆ ಅಭಿವೃದ್ದಿ ಮಂಡಳಿ , ಕೃಷಿ ವಿಜ್ಞಾನ ಕೇಂದ್ರ ಮುಂತಾದ ಕೆಲಸಗಳನ್ನು ಮಾಡಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-26-277189406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>