<p><strong>ಇಂಡಿ</strong>: ಸರ್ವರ್ ಸಮಸ್ಯೆಯಿಂದ ತಾಲ್ಲೂಕಿನಾದ್ಯಂತ ಮೂರು ದಿನಗಳಿಂದ ಪಡಿತರ ಪಡೆಯಲು ಜನರು ಹರಸಾಹಸ ಪಡುತ್ತಿದ್ದಾರೆ.</p>.<p>ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಪಿಕೆಪಿಎಸ್ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗುವ ಅಕ್ಕಿ ಪಡೆಯಲು ಜನರು ಸಾಲುಗಳಲ್ಲಿ ಇಡೀ ದಿನ ನಿಂತರೂ ಪಡೆಯಲು ಆಗುತ್ತಿಲ್ಲ. ಈ ತಿಂಗಳ 31ರೊಳಗೆ ಅಕ್ಕಿ ಪಡೆದುಕೊಳ್ಳದಿದ್ದರೆ ಅಕ್ಕಿ ಕೈತಪ್ಪಿ ಹೋಗುತ್ತದೆ. ಆದರೆ, ಬಿಪಿಲ್ ಕಾರ್ಡ್ದಾರರು ಹೆಬ್ಬೆಟ್ಟು ಕೊಡಲು ಹೋದಾಗ ಸರ್ವರ್ ಸಮಸ್ಯೆ ಆಗುತ್ತಿದೆ.</p>.<p>ಇದರಿಂದ ಇಡೀ ದಿನ ಸರತಿಯಲ್ಲಿ ನಿಂತರೂ ಅಕ್ಕಿ ಸಿಗದೇ ಜನರು ನಿರಾಸೆಯಿಂದ ಮನೆಗೆ ಮರಳುವಂತಾಗಿದೆ. ‘ಸರ್ವರ್ ಸಮಸ್ಯೆಯಿಂದಾಗಿ ಮೂರು ದಿನಗಳಿಂದ ನಮಗೆ ಪಡಿತರ ಪಡೆಯಲು ಆಗುತ್ತಿಲ್ಲ. ತೋಟದ ಕೆಲಸಕ್ಕೆ ರಜೆ ಮಾಡಿ ರೇಷನ್ ಪಡೆಯಲು ಬರುತ್ತೇವೆ. ಬಿಸಿಲಲ್ಲಿ ಇಡೀ ದಿನ ಕಾದರೂ ಅಕ್ಕಿ ಸಿಗುತ್ತಿಲ್ಲ’ ಎಂದು ಜನರು ಬೇಸರ ಹೊರಹಾಕಿದ್ದಾರೆ.</p>.<p>‘ತಡವಲಗಾ ಗ್ರಾಮದಲ್ಲಿ ಸುಮಾರು 2,400 ಬಿಪಿಎಲ್ ಕಾರ್ಡ್ದಾರರು ಹಾಗೂ 300 ಎಪಿಎಲ್ ಕಾರ್ಡ್ದಾರರು ಇದ್ದು. ಇನ್ನೂ ಸುಮಾರು 700 ಕಾರ್ಡ್ದಾರರಿಗೆ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಆಗುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-26-1634160298</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ಸರ್ವರ್ ಸಮಸ್ಯೆಯಿಂದ ತಾಲ್ಲೂಕಿನಾದ್ಯಂತ ಮೂರು ದಿನಗಳಿಂದ ಪಡಿತರ ಪಡೆಯಲು ಜನರು ಹರಸಾಹಸ ಪಡುತ್ತಿದ್ದಾರೆ.</p>.<p>ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಪಿಕೆಪಿಎಸ್ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗುವ ಅಕ್ಕಿ ಪಡೆಯಲು ಜನರು ಸಾಲುಗಳಲ್ಲಿ ಇಡೀ ದಿನ ನಿಂತರೂ ಪಡೆಯಲು ಆಗುತ್ತಿಲ್ಲ. ಈ ತಿಂಗಳ 31ರೊಳಗೆ ಅಕ್ಕಿ ಪಡೆದುಕೊಳ್ಳದಿದ್ದರೆ ಅಕ್ಕಿ ಕೈತಪ್ಪಿ ಹೋಗುತ್ತದೆ. ಆದರೆ, ಬಿಪಿಲ್ ಕಾರ್ಡ್ದಾರರು ಹೆಬ್ಬೆಟ್ಟು ಕೊಡಲು ಹೋದಾಗ ಸರ್ವರ್ ಸಮಸ್ಯೆ ಆಗುತ್ತಿದೆ.</p>.<p>ಇದರಿಂದ ಇಡೀ ದಿನ ಸರತಿಯಲ್ಲಿ ನಿಂತರೂ ಅಕ್ಕಿ ಸಿಗದೇ ಜನರು ನಿರಾಸೆಯಿಂದ ಮನೆಗೆ ಮರಳುವಂತಾಗಿದೆ. ‘ಸರ್ವರ್ ಸಮಸ್ಯೆಯಿಂದಾಗಿ ಮೂರು ದಿನಗಳಿಂದ ನಮಗೆ ಪಡಿತರ ಪಡೆಯಲು ಆಗುತ್ತಿಲ್ಲ. ತೋಟದ ಕೆಲಸಕ್ಕೆ ರಜೆ ಮಾಡಿ ರೇಷನ್ ಪಡೆಯಲು ಬರುತ್ತೇವೆ. ಬಿಸಿಲಲ್ಲಿ ಇಡೀ ದಿನ ಕಾದರೂ ಅಕ್ಕಿ ಸಿಗುತ್ತಿಲ್ಲ’ ಎಂದು ಜನರು ಬೇಸರ ಹೊರಹಾಕಿದ್ದಾರೆ.</p>.<p>‘ತಡವಲಗಾ ಗ್ರಾಮದಲ್ಲಿ ಸುಮಾರು 2,400 ಬಿಪಿಎಲ್ ಕಾರ್ಡ್ದಾರರು ಹಾಗೂ 300 ಎಪಿಎಲ್ ಕಾರ್ಡ್ದಾರರು ಇದ್ದು. ಇನ್ನೂ ಸುಮಾರು 700 ಕಾರ್ಡ್ದಾರರಿಗೆ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಆಗುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-26-1634160298</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>