<p>ಇಂಡಿ: ‘ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಯಾವುದೇ ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಕೊಳ್ಳಬೇಕು’ ಎಂದು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಬೇಸಿಗೆಯಲ್ಲಿ ನೀರಿನ ಅಭಾವ ಆಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿತವಾಗಿ ಮಾಹಿತಿ ಸಲ್ಲಿಸಬೇಕು’ ಎಂದರು.</p>.<p>‘ನಗರ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ಹಂತದಲ್ಲಿಯೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಎಇಇ ಬಂಡಿಯವರಿಗೆ ಸೂಚನೆ ನೀಡಿದರು.</p>.<p>ಇಒ ಭೀಮಾಶಂಕರ ಕನ್ನೂರ ಮಾತನಾಡಿ, ‘ಮಿರಗಿ, ಮಸಳಿ, ಗುಬ್ಬೇವಾಡ, ಕೊಳುರಗಿ, ಝಳಕಿ, ಬಸನಾಳ, ಬಬಲಾದ, ನಿಂಬಾಳ ಕೆಡಿ ಸಾಲೋಟಗಿ ಹಾಗೂ ತಡವಲಗಾ ಅಡವಿ ವಸ್ತಿಗಳ ಕುರಿತು ಗ್ರಾಮ ಪಂಚಾಯಿತಿಗಳಲ್ಲಿ ಚರ್ಚಿಸಬೇಕು. ಯಾವುದೇ ಸಮಸ್ಯೆ ಬರದಂತೆ ಖುದ್ದಾಗಿ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು.</p>.<p>ಸಹಾಯಕ ನಿರ್ದೇಶಕ ಪ್ರಕಾಶ ರಾಠೋಡ, ಯೋಜನಾಧಿಕಾರಿ ನಂದೀಪ ರಾಠೋಡ, ಹೆಸ್ಕಾಂ ಎಇಇ ಎಸ್.ಆರ್.ಮೆಡೆಗಾರ, ಪೌರಾಯುಕ್ತ ನಗರ ಸಭೆ ಶಿವಾನಂದ ಪೂಜಾರಿ, ಕಾರ್ಯಪಾಲಕ ಎಂಜಿನಿಯರ್ ಮನೋಜಕುಮಾರ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-26-237247010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ: ‘ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಯಾವುದೇ ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಕೊಳ್ಳಬೇಕು’ ಎಂದು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಬೇಸಿಗೆಯಲ್ಲಿ ನೀರಿನ ಅಭಾವ ಆಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿತವಾಗಿ ಮಾಹಿತಿ ಸಲ್ಲಿಸಬೇಕು’ ಎಂದರು.</p>.<p>‘ನಗರ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ಹಂತದಲ್ಲಿಯೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಎಇಇ ಬಂಡಿಯವರಿಗೆ ಸೂಚನೆ ನೀಡಿದರು.</p>.<p>ಇಒ ಭೀಮಾಶಂಕರ ಕನ್ನೂರ ಮಾತನಾಡಿ, ‘ಮಿರಗಿ, ಮಸಳಿ, ಗುಬ್ಬೇವಾಡ, ಕೊಳುರಗಿ, ಝಳಕಿ, ಬಸನಾಳ, ಬಬಲಾದ, ನಿಂಬಾಳ ಕೆಡಿ ಸಾಲೋಟಗಿ ಹಾಗೂ ತಡವಲಗಾ ಅಡವಿ ವಸ್ತಿಗಳ ಕುರಿತು ಗ್ರಾಮ ಪಂಚಾಯಿತಿಗಳಲ್ಲಿ ಚರ್ಚಿಸಬೇಕು. ಯಾವುದೇ ಸಮಸ್ಯೆ ಬರದಂತೆ ಖುದ್ದಾಗಿ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು.</p>.<p>ಸಹಾಯಕ ನಿರ್ದೇಶಕ ಪ್ರಕಾಶ ರಾಠೋಡ, ಯೋಜನಾಧಿಕಾರಿ ನಂದೀಪ ರಾಠೋಡ, ಹೆಸ್ಕಾಂ ಎಇಇ ಎಸ್.ಆರ್.ಮೆಡೆಗಾರ, ಪೌರಾಯುಕ್ತ ನಗರ ಸಭೆ ಶಿವಾನಂದ ಪೂಜಾರಿ, ಕಾರ್ಯಪಾಲಕ ಎಂಜಿನಿಯರ್ ಮನೋಜಕುಮಾರ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-26-237247010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>