<p><strong>ಇಂಡಿ</strong>: ‘ಇಂದಿನ ಜಗತ್ತಿನಲ್ಲಿ ವ್ಯವಹಾರ ಚತುರತೆ ಎಲ್ಲರಿಗೂ ಅತ್ಯಗತ್ಯ. ಆರ್ಥಿಕ ಸಾಕ್ಷರತೆಯು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಿ, ಅವರ ಜ್ಞಾನವನ್ನು ಹೆಚ್ಚಿಸುತ್ತದೆ’ ಎಂದು ವಿಜಯಪುರದ ಆರ್ಥಿಕ ಸಾಕ್ಷರತೆ ಸಲಹೆಗಾರ ಈರೇಶ ಡಂಗಿ ಹೇಳಿದರು.</p>.<p>ತಾಲ್ಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಆರ್ಥಿಕ ಸಾಕ್ಷರತೆ-ಅರಿವು ಕಾರ್ಯಕ್ರಮ’ ವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಮಕ್ಕಳಿಗೆ ಹಣದ ವಹಿವಾಟಿನ ಅರಿವು ಇದ್ದಾಗ, ಉಳಿತಾಯದ ಮಹತ್ವ ತಿಳಿಯುವರು. ತಾವು ಸಂಗ್ರಹಿಸಿದ ಹಣವನ್ನು ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವರು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಇಂಡಿ ಆರ್ಥಿಕ ಸಾಕ್ಷರತೆ ಸಲಹೆಗಾರ ಭರತೇಶ ಉಪಾಧ್ಯ ಮಾತನಾಡಿ, ‘ಮಕ್ಕಳಿಗೆ ದೈನಂದಿನ ಹಣಕಾಸಿನ ವಹಿವಾಟಿನ ಪರಿಚಯ ಮಾಡಿಸಬೇಕು. ಇದರಿಂದ ಮಕ್ಕಳಲ್ಲಿ ಕುಟುಂಬದ ಖರ್ಚು-ವೆಚ್ಚಗಳ ಮಾಹಿತಿ ತಿಳಿದು, ವಹಿವಾಟಿನ ಕೌಶಲ ಬೆಳಯುತ್ತದೆ’ ಎಂದು ಹೇಳಿದರು.</p>.<p>ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.</p>.<p>ಶಿಕ್ಷಕರಾದ ಎನ್.ಬಿ.ಚೌಧರಿ, ಎಸ್.ಪಿ.ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ‘ಇಂದಿನ ಜಗತ್ತಿನಲ್ಲಿ ವ್ಯವಹಾರ ಚತುರತೆ ಎಲ್ಲರಿಗೂ ಅತ್ಯಗತ್ಯ. ಆರ್ಥಿಕ ಸಾಕ್ಷರತೆಯು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಿ, ಅವರ ಜ್ಞಾನವನ್ನು ಹೆಚ್ಚಿಸುತ್ತದೆ’ ಎಂದು ವಿಜಯಪುರದ ಆರ್ಥಿಕ ಸಾಕ್ಷರತೆ ಸಲಹೆಗಾರ ಈರೇಶ ಡಂಗಿ ಹೇಳಿದರು.</p>.<p>ತಾಲ್ಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಆರ್ಥಿಕ ಸಾಕ್ಷರತೆ-ಅರಿವು ಕಾರ್ಯಕ್ರಮ’ ವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಮಕ್ಕಳಿಗೆ ಹಣದ ವಹಿವಾಟಿನ ಅರಿವು ಇದ್ದಾಗ, ಉಳಿತಾಯದ ಮಹತ್ವ ತಿಳಿಯುವರು. ತಾವು ಸಂಗ್ರಹಿಸಿದ ಹಣವನ್ನು ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವರು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಇಂಡಿ ಆರ್ಥಿಕ ಸಾಕ್ಷರತೆ ಸಲಹೆಗಾರ ಭರತೇಶ ಉಪಾಧ್ಯ ಮಾತನಾಡಿ, ‘ಮಕ್ಕಳಿಗೆ ದೈನಂದಿನ ಹಣಕಾಸಿನ ವಹಿವಾಟಿನ ಪರಿಚಯ ಮಾಡಿಸಬೇಕು. ಇದರಿಂದ ಮಕ್ಕಳಲ್ಲಿ ಕುಟುಂಬದ ಖರ್ಚು-ವೆಚ್ಚಗಳ ಮಾಹಿತಿ ತಿಳಿದು, ವಹಿವಾಟಿನ ಕೌಶಲ ಬೆಳಯುತ್ತದೆ’ ಎಂದು ಹೇಳಿದರು.</p>.<p>ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.</p>.<p>ಶಿಕ್ಷಕರಾದ ಎನ್.ಬಿ.ಚೌಧರಿ, ಎಸ್.ಪಿ.ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>