<p><strong>ವಿಜಯಪುರ</strong>: ‘ಬಿಜೆಪಿ ದಲಿತ ವಿರೋಧಿ. ಆ ಪಕ್ಷ ಸೇರುವುದು ಬೇಡ ಎಂದು ಅನೇಕ ಸ್ನೇಹಿತರು ನನ್ನೊಂದಿಗೆ ಮೊದಲೇ ವಾದ ಮಾಡಿದರೂ ಯೋಚಿಸದೇ ಸೇರಿದೆ. ಬಳಿಕ ಏಳು ಬಾರಿ ಸಂಸದನಾದೆ. ಆದರೂ ನನಗೆ ಕೇಂದ್ರ ಸಚಿವ ಸ್ಥಾನ ಸಿಗಲಿಲ್ಲ’ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಮಂಗಳವಾರ ಸಂಸದರ ಕಚೇರಿಯ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಕ್ಷೇತ್ರದ ಜನರು ಬೇಸರಗೊಂಡಿದ್ದಾರೆ. ಛೀ,ಥೂ ಎನ್ನುತ್ತಿದ್ದಾರೆ. ನನಗೆ ಪಕ್ಷದಿಂದ ಅನ್ಯಾಯವಾಗಿದೆ’ ಎಂದು ಖಾರವಾಗಿ ಹೇಳಿದರು.</p>.<p>‘ದಲಿತ ಮನುಷ್ಯನಾಗಿ ದಕ್ಷಿಣ ಭಾರತದಿಂದ ನಾನೊಬ್ಬನೇ ಏಳು ಬಾರಿ ಸಂಸದನಾಗಿ ಗೆದ್ದಿರುವೆ. ಕೇಂದ್ರ ಸರ್ಕಾರದಲ್ಲಿ ಈ ಬಾರಿ ಎಲ್ಲ ಮೇಲ್ಜಾತಿಯವರೇ ಸಚಿವರಾಗಿದ್ದಾರೆ. ದಲಿತರು ಬಿಜೆಪಿಗೆ ಮತ ಹಾಕಿಲ್ಲವೇ’ ಎಂದು ಅವರು ಪ್ರಶ್ನಿಸಿದರು.</p>.<p>‘ಮನಸ್ಸಿಗೆ ತುಂಬಾ ನೋವಾಗಿದೆ. ವೈಯಕ್ತಿವಾಗಿ ನನಗೆ ಕೇಂದ್ರ ಸಚಿವ ಸ್ಥಾನ ಅವಶ್ಯಕತೆ ಇಲ್ಲ. ನನಗೆ ಸಚಿವ ಸ್ಥಾನ ನೀಡಬೇಕು ಎಂಬುದು ನನ್ನ ಕ್ಷೇತ್ರದ ಜನರ ಒತ್ತಡ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಬಿಜೆಪಿ ದಲಿತ ವಿರೋಧಿ. ಆ ಪಕ್ಷ ಸೇರುವುದು ಬೇಡ ಎಂದು ಅನೇಕ ಸ್ನೇಹಿತರು ನನ್ನೊಂದಿಗೆ ಮೊದಲೇ ವಾದ ಮಾಡಿದರೂ ಯೋಚಿಸದೇ ಸೇರಿದೆ. ಬಳಿಕ ಏಳು ಬಾರಿ ಸಂಸದನಾದೆ. ಆದರೂ ನನಗೆ ಕೇಂದ್ರ ಸಚಿವ ಸ್ಥಾನ ಸಿಗಲಿಲ್ಲ’ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಮಂಗಳವಾರ ಸಂಸದರ ಕಚೇರಿಯ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಕ್ಷೇತ್ರದ ಜನರು ಬೇಸರಗೊಂಡಿದ್ದಾರೆ. ಛೀ,ಥೂ ಎನ್ನುತ್ತಿದ್ದಾರೆ. ನನಗೆ ಪಕ್ಷದಿಂದ ಅನ್ಯಾಯವಾಗಿದೆ’ ಎಂದು ಖಾರವಾಗಿ ಹೇಳಿದರು.</p>.<p>‘ದಲಿತ ಮನುಷ್ಯನಾಗಿ ದಕ್ಷಿಣ ಭಾರತದಿಂದ ನಾನೊಬ್ಬನೇ ಏಳು ಬಾರಿ ಸಂಸದನಾಗಿ ಗೆದ್ದಿರುವೆ. ಕೇಂದ್ರ ಸರ್ಕಾರದಲ್ಲಿ ಈ ಬಾರಿ ಎಲ್ಲ ಮೇಲ್ಜಾತಿಯವರೇ ಸಚಿವರಾಗಿದ್ದಾರೆ. ದಲಿತರು ಬಿಜೆಪಿಗೆ ಮತ ಹಾಕಿಲ್ಲವೇ’ ಎಂದು ಅವರು ಪ್ರಶ್ನಿಸಿದರು.</p>.<p>‘ಮನಸ್ಸಿಗೆ ತುಂಬಾ ನೋವಾಗಿದೆ. ವೈಯಕ್ತಿವಾಗಿ ನನಗೆ ಕೇಂದ್ರ ಸಚಿವ ಸ್ಥಾನ ಅವಶ್ಯಕತೆ ಇಲ್ಲ. ನನಗೆ ಸಚಿವ ಸ್ಥಾನ ನೀಡಬೇಕು ಎಂಬುದು ನನ್ನ ಕ್ಷೇತ್ರದ ಜನರ ಒತ್ತಡ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>