<p><strong>ವಿಜಯಪುರ: </strong>‘ಉತ್ತರ ಕರ್ನಾಟಕದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಕೇವಲ ₹10 ಸಾವಿರ ನೀಡಲಾಗಿದೆ. ಆದರೆ, ದಕ್ಷಿಣ ಕರ್ನಾಟಕದ ಸಂತ್ರಸ್ತರಿಗೆ ತಲಾ ₹25 ಸಾವಿರ ನೀಡಿದ್ದಾರೆ. ನಮ್ಮದೇ ಮಂತ್ರಿಗಳು ದಕ್ಷಿಣ ಕರ್ನಾಟಕದಲ್ಲಿ ಓಡಾಡಿ ಪರಿಹಾರ ಹಂಚುತ್ತಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.</p>.<p>ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ₹27 ಲಕ್ಷಅನುದಾನದಲ್ಲಿ ನಿರ್ಮಿಸಲಾದ ಹೊರರೋಗಿಗಳ ನೋಂದಣಿ ವಿಭಾಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನನಗೆ ಮೊದಲು ನನ್ನ ಜನರ ಹಿತ ಮುಖ್ಯ. ಅದಕ್ಕಾಗಿ ಧ್ವನಿ ಎತ್ತಲು ಸಿದ್ಧ. ನನ್ನ ಬಗ್ಗೆ ಯಾರು ಏನು ಲೆಟರ್ ಬರೀತಾರೋ ಬರೀಲಿ. ನಮ್ಮ ಕ್ಷೇತ್ರಕ್ಕೆ ಅನ್ಯಾಯವಾದರೆ ನಾವು ಕೇಳುವವರೆ. ಅದು ಮುಖ್ಯಮಂತ್ರಿಯಾದರೂ ಸರಿ’ ಎಂದು ಹೇಳಿದರು.</p>.<p>‘ನನ್ನನ್ನು ಮಂತ್ರಿ ಮಾಡಿ ಎಂದು ಕೇಳಿಲ್ಲ. ನಾನು ಅಭಿವೃದ್ಧಿ ಬಗ್ಗೆ ಕೇಳಿದ್ದೇನೆ. ಅಭಿವೃದ್ಧಿ ಬಗ್ಗೆ ಮಾತನಾಡಿದರೆ ಪಕ್ಷ ವಿರೋಧಿ ಎಂದರೆ ಅದೊಂದು ದುರ್ದೈವದ ಸಂಗತಿ’ ಎಂದರು.</p>.<p>‘ವಿಜಯಪುರ ನಗರದ ಅಭಿವೃದ್ಧಿಗೆ ಈ ಹಿಂದಿನ ಸರ್ಕಾರ ನೀಡಿದ್ದ ₹125 ಕೋಟಿ ಮರಳಿ ಹೋಗಿತ್ತು. ನನ್ನ ಹೋರಾಟದ ಫಲವಾಗಿ ಇದೀಗ ₹195 ಕೋಟಿಗಳಿಗೂ ಅಧಿಕ ಅನುದಾನಕ್ಕೆ ಅನುಮೋದನೆ ದೊರೆತಿದೆ. ವಿಜಯಪುರ ಮಾತ್ರವಲ್ಲ ರಾಜ್ಯದ ಎಲ್ಲ ಪಾಲಿಕೆಗಳಿಗೆ ಒಟ್ಟು ₹1300 ಕೋಟಿ ಸಿಕ್ಕಿದೆ’ ಎಂದರು.</p>.<p>‘ಸಾಕಷ್ಟು ಬಾರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದರೂ ಅನುದಾನ ಸಿಕ್ಕಲಿಲ್ಲ. ನನ್ನ ಹೋರಾಟದ ಫಲವಾಗಿ ರಾಜ್ಯದ ಎಲ್ಲ ನಗರಸಭೆಗಳಿಗೆ ಅನುದಾನ ಸಿಗುವಂತಾಯಿತು’ ಎಂದು ಹೇಳಿದರು.</p>.<p>ನಗರದಾದ್ಯಂತ ರಸ್ತೆ, ಒಳ ಚರಂಡಿ ವ್ಯವಸ್ಥೆ, ಮಹಿಳಾ ವಿಶ್ವವಿದ್ಯಾನಿಲಯದಿಂದ ಗೋದಾವರಿ ಹೋಟೆಲ್ವರೆಗಿನ ರಸ್ತೆ ಮತ್ತು ಗಾಂಧಿವೃತ್ತದಿಂದ ಗೋಳಗುಮ್ಮಟ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.</p>.<p>₹ 2 ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಕೇಂದ್ರ ಕಟ್ಟಡ ನಿರ್ಮಾಣ ಮತ್ತು ಜಿಲ್ಲಾಸ್ಪತ್ರೆ ಹಿಂದೆ ಖಾಲಿ ಇರುವ ಭೂಮಿಯನ್ನು ಅಭಿವೃದ್ಧಿಗೊಳಿಸುವ ₹ 20 ಲಕ್ಷ ಅಂದಾಜು ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ಸಹ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>‘ಉತ್ತರ ಕರ್ನಾಟಕದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಕೇವಲ ₹10 ಸಾವಿರ ನೀಡಲಾಗಿದೆ. ಆದರೆ, ದಕ್ಷಿಣ ಕರ್ನಾಟಕದ ಸಂತ್ರಸ್ತರಿಗೆ ತಲಾ ₹25 ಸಾವಿರ ನೀಡಿದ್ದಾರೆ. ನಮ್ಮದೇ ಮಂತ್ರಿಗಳು ದಕ್ಷಿಣ ಕರ್ನಾಟಕದಲ್ಲಿ ಓಡಾಡಿ ಪರಿಹಾರ ಹಂಚುತ್ತಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.</p>.<p>ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ₹27 ಲಕ್ಷಅನುದಾನದಲ್ಲಿ ನಿರ್ಮಿಸಲಾದ ಹೊರರೋಗಿಗಳ ನೋಂದಣಿ ವಿಭಾಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನನಗೆ ಮೊದಲು ನನ್ನ ಜನರ ಹಿತ ಮುಖ್ಯ. ಅದಕ್ಕಾಗಿ ಧ್ವನಿ ಎತ್ತಲು ಸಿದ್ಧ. ನನ್ನ ಬಗ್ಗೆ ಯಾರು ಏನು ಲೆಟರ್ ಬರೀತಾರೋ ಬರೀಲಿ. ನಮ್ಮ ಕ್ಷೇತ್ರಕ್ಕೆ ಅನ್ಯಾಯವಾದರೆ ನಾವು ಕೇಳುವವರೆ. ಅದು ಮುಖ್ಯಮಂತ್ರಿಯಾದರೂ ಸರಿ’ ಎಂದು ಹೇಳಿದರು.</p>.<p>‘ನನ್ನನ್ನು ಮಂತ್ರಿ ಮಾಡಿ ಎಂದು ಕೇಳಿಲ್ಲ. ನಾನು ಅಭಿವೃದ್ಧಿ ಬಗ್ಗೆ ಕೇಳಿದ್ದೇನೆ. ಅಭಿವೃದ್ಧಿ ಬಗ್ಗೆ ಮಾತನಾಡಿದರೆ ಪಕ್ಷ ವಿರೋಧಿ ಎಂದರೆ ಅದೊಂದು ದುರ್ದೈವದ ಸಂಗತಿ’ ಎಂದರು.</p>.<p>‘ವಿಜಯಪುರ ನಗರದ ಅಭಿವೃದ್ಧಿಗೆ ಈ ಹಿಂದಿನ ಸರ್ಕಾರ ನೀಡಿದ್ದ ₹125 ಕೋಟಿ ಮರಳಿ ಹೋಗಿತ್ತು. ನನ್ನ ಹೋರಾಟದ ಫಲವಾಗಿ ಇದೀಗ ₹195 ಕೋಟಿಗಳಿಗೂ ಅಧಿಕ ಅನುದಾನಕ್ಕೆ ಅನುಮೋದನೆ ದೊರೆತಿದೆ. ವಿಜಯಪುರ ಮಾತ್ರವಲ್ಲ ರಾಜ್ಯದ ಎಲ್ಲ ಪಾಲಿಕೆಗಳಿಗೆ ಒಟ್ಟು ₹1300 ಕೋಟಿ ಸಿಕ್ಕಿದೆ’ ಎಂದರು.</p>.<p>‘ಸಾಕಷ್ಟು ಬಾರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದರೂ ಅನುದಾನ ಸಿಕ್ಕಲಿಲ್ಲ. ನನ್ನ ಹೋರಾಟದ ಫಲವಾಗಿ ರಾಜ್ಯದ ಎಲ್ಲ ನಗರಸಭೆಗಳಿಗೆ ಅನುದಾನ ಸಿಗುವಂತಾಯಿತು’ ಎಂದು ಹೇಳಿದರು.</p>.<p>ನಗರದಾದ್ಯಂತ ರಸ್ತೆ, ಒಳ ಚರಂಡಿ ವ್ಯವಸ್ಥೆ, ಮಹಿಳಾ ವಿಶ್ವವಿದ್ಯಾನಿಲಯದಿಂದ ಗೋದಾವರಿ ಹೋಟೆಲ್ವರೆಗಿನ ರಸ್ತೆ ಮತ್ತು ಗಾಂಧಿವೃತ್ತದಿಂದ ಗೋಳಗುಮ್ಮಟ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.</p>.<p>₹ 2 ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಕೇಂದ್ರ ಕಟ್ಟಡ ನಿರ್ಮಾಣ ಮತ್ತು ಜಿಲ್ಲಾಸ್ಪತ್ರೆ ಹಿಂದೆ ಖಾಲಿ ಇರುವ ಭೂಮಿಯನ್ನು ಅಭಿವೃದ್ಧಿಗೊಳಿಸುವ ₹ 20 ಲಕ್ಷ ಅಂದಾಜು ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ಸಹ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>