ವಿಜಯಪುರ: ‘ಉತ್ತರ ಕರ್ನಾಟಕದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಕೇವಲ ₹10 ಸಾವಿರ ನೀಡಲಾಗಿದೆ. ಆದರೆ, ದಕ್ಷಿಣ ಕರ್ನಾಟಕದ ಸಂತ್ರಸ್ತರಿಗೆ ತಲಾ ₹25 ಸಾವಿರ ನೀಡಿದ್ದಾರೆ. ನಮ್ಮದೇ ಮಂತ್ರಿಗಳು ದಕ್ಷಿಣ ಕರ್ನಾಟಕದಲ್ಲಿ ಓಡಾಡಿ ಪರಿಹಾರ ಹಂಚುತ್ತಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.