ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿ: ರಾಯಣ್ಣ, ಚನ್ನಮ್ಮ ಚಿತ್ರಗಳಿಗೆ ಅವಮಾನ; ಪ್ರತಿಭಟನೆ

Last Updated 1 ಸೆಪ್ಟೆಂಬರ್ 2020, 11:23 IST
ಅಕ್ಷರ ಗಾತ್ರ

ಇಂಡಿ: ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ, ಕಿತ್ತೂರ ರಾಣಿ ಚೆನ್ನಮ್ಮ, ಕನಕದಾಸರ ಚಿತ್ರಗಳಿಗೆ ಕೆಸರು ಮೆತ್ತಿ ಅವಮಾನಿಸಿದ್ದು, ಕೂಡಲೇ ಅವರನ್ನು ಪತ್ತೆ ಹಚ್ಚಿ ಶಿಸ್ತು ಕ್ರಮ ಜಾರಿಗೊಳಿಸಬೇಕು ಎಂದು ತಾಲ್ಲೂಕು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಅಭಿಮಾನಿ ಬಳಗ ಮಂಗಳವಾರ ಒತ್ತಾಯಿಸಿದರು.

ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ಮಾಡಿ, ಮಿನಿವಿಧಾನ ಸೌಧ ಎದುರು ಘೋಷಣೆಗಳನ್ನು ಕೂಗಿ ಉಪ ತಹಶೀಲ್ದಾರ್‌ ಎಸ್.ಆರ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಪಂಚಮಸಾಲಿ ಸಮಾಜ ಮುಖಂಡ ಸೋಮು ದೇವರ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ಡಿ. ಪಾಟೀಲ, ಮಂಜುನಾಥ ಕಾಮಗೊಂಡ, ಮಹಿಬೂಬ ಬೇನೂರ, ರೇವಣಸಿದ್ದಪ್ಪ ಗೋಡಕೆ, ಮಾಳು ಮ್ಯಾಕೇರಿ, ಸಿದ್ದು ಡಂಗಾ, ಶ್ರೀಶೈಲ ಪೂಜಾರಿ, ವಿಠ್ಠಲ ಹಳ್ಳಿ, ಸಾಹೇಬಗೌಡ ಪಾಟೀಲ, ನಾನಾಗೌಡ ಪಾಟೀಲ, ದೇವೇಂದ್ರ ಕುಂಬಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT