ಇಂಡಿ: ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ, ಕಿತ್ತೂರ ರಾಣಿ ಚೆನ್ನಮ್ಮ, ಕನಕದಾಸರ ಚಿತ್ರಗಳಿಗೆ ಕೆಸರು ಮೆತ್ತಿ ಅವಮಾನಿಸಿದ್ದು, ಕೂಡಲೇ ಅವರನ್ನು ಪತ್ತೆ ಹಚ್ಚಿ ಶಿಸ್ತು ಕ್ರಮ ಜಾರಿಗೊಳಿಸಬೇಕು ಎಂದು ತಾಲ್ಲೂಕು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಅಭಿಮಾನಿ ಬಳಗ ಮಂಗಳವಾರ ಒತ್ತಾಯಿಸಿದರು.
ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ಮಾಡಿ, ಮಿನಿವಿಧಾನ ಸೌಧ ಎದುರು ಘೋಷಣೆಗಳನ್ನು ಕೂಗಿ ಉಪ ತಹಶೀಲ್ದಾರ್ ಎಸ್.ಆರ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.